AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದ್ದಿ ಪ್ರಸಾರ ಬೆನ್ನಲ್ಲೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿನಿಗೆ 50 ಸಾವಿರ ಅಡ್ಮಿಶನ್ ಹಣ ವಾಪಸ್!

ಎಸ್ಸೆಸ್ಸೆಲ್ಸಿಯಲ್ಲಿ ಶೇಕಡಾ 90 ಬಂದರೆ 25 ಸಾವಿರ ಡಿಸ್ಕೌಂಟ್, 95% ಬಂದರೆ 50 ಸಾವಿರ ಡಿಸ್ಕೌಂಟ್, ಶೇಕಡಾ 95ಕ್ಕೂ ಅಧಿಕ ಬಂದರೆ 75 ಸಾವಿರ ಡಿಸ್ಕೌಂಟ್, 100% ಬಂದರೆ ಒಂದು ಲಕ್ಷ ಡಿಸ್ಕೌಂಟ್ ಎಂದು ಆಫರ್ ನೀಡಿತ್ತು. ಆಲ್ದೂರಿನ ವಿದ್ಯಾರ್ಥಿನಿ ಚರಿತಾ ತನಗೆ 95% ಬರುತ್ತೆ. ಭವಿಷ್ಯಕ್ಕೆ ಅನುಕೂಲವಾಗಲಿ ಎಂದು ಡಿಸೆಂಬರ್‍ನಲ್ಲೇ 50 ಸಾವಿರ ಮುಂಗಡ ಹಣ ಕಟ್ಟಿ ಆಡ್ಮಿಷನ್ ಆಗಿದ್ದರು. ಆದರೆ ...

ಸುದ್ದಿ ಪ್ರಸಾರ ಬೆನ್ನಲ್ಲೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿನಿಗೆ 50 ಸಾವಿರ ಅಡ್ಮಿಶನ್ ಹಣ ವಾಪಸ್!
ಸುದ್ದಿ ಪ್ರಸಾರ ಬೆನ್ನಲ್ಲೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿನಿಗೆ 50 ಸಾವಿರ ಹಣ ವಾಪಸ್!
TV9 Web
| Edited By: |

Updated on:May 28, 2022 | 6:25 PM

Share

ಚಿಕ್ಕಮಗಳೂರು: ನಾನಾ ರೀತಿಯ ಆಫರ್ ನೀಡಿ ಎಸ್.ಎಸ್.ಎಲ್.ಸಿ. ಫಲಿತಾಂಶ ಬರುವ ಆರು ತಿಂಗಳ ಮೊದಲೇ ಮುಂಗಡವಾಗಿ 50 ಸಾವಿರ ಹಣ ಕಟ್ಟಿಸಿಕೊಂಡಿದ್ದ ಖಾಸಗಿ ವಿದ್ಯಾ ಸಂಸ್ಥೆ 10ನೇ ತರಗತಿ ಫಲಿತಾಂಶ ಪ್ರಕಟವಾದ ಬಳಿಕ ಉಲ್ಟಾ ಹೊಡೆದು ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ಆತಂಕ ಹುಟ್ಟಿಸಿತ್ತು. ಈ ಬಗ್ಗೆ ಟಿವಿ9ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಖಾಸಗಿ ವಿದ್ಯಾ ಸಂಸ್ಥೆ 50 ಸಾವಿರ ಹಣವನ್ನ (Admission fees) ಚೆಕ್ ರೂಪದಲ್ಲಿ ವಾಪಸ್ ನೀಡಿದೆ.

ಅಂದಹಾಗೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನ ಪೂರ್ಣಪ್ರಜ್ಞಾ ಶಾಲೆಯ (Aldur Purna Prajna School) ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಚರಿತಾಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ಎಕ್ಸಲೆಂಟ್ ಖಾಸಗಿ ವಿದ್ಯಾ ಸಂಸ್ಥೆ ಹಣವನ್ನ ವಾಪಸ್ ನೀಡಿದೆ. ಕಳೆದ ಡಿಸೆಂಬರ್‍ನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ (Moodbidri Excellent PU College) ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಆಫರ್ ನೀಡಿತ್ತು. ಪಿಯುಸಿ ಕಾಲೇಜು ಶುಲ್ಕದಲ್ಲಿ ಬಾರಿ ರಿಯಾಯಿತಿ ನೀಡುವುದಾಗಿ ತಿಳಿಸಿತ್ತು.

ಎಸ್ಸೆಸ್ಸೆಲ್ಸಿಯಲ್ಲಿ ಶೇಕಡಾ 90 ಬಂದರೆ 25 ಸಾವಿರ ಡಿಸ್ಕೌಂಟ್, 95% ಬಂದರೆ 50 ಸಾವಿರ ಡಿಸ್ಕೌಂಟ್, ಶೇಕಡಾ 95ಕ್ಕೂ ಅಧಿಕ ಬಂದರೆ 75 ಸಾವಿರ ಡಿಸ್ಕೌಂಟ್, 100% ಬಂದರೆ ಒಂದು ಲಕ್ಷ ಡಿಸ್ಕೌಂಟ್ ಎಂದು ಆಫರ್ ನೀಡಿತ್ತು. ಆಲ್ದೂರಿನ ವಿದ್ಯಾರ್ಥಿನಿ ಚರಿತಾ ತನಗೆ 95% ಬರುತ್ತೆ. ಭವಿಷ್ಯಕ್ಕೆ ಅನುಕೂಲವಾಗಲಿ ಎಂದು ಡಿಸೆಂಬರ್‍ನಲ್ಲೇ 50 ಸಾವಿರ ಮುಂಗಡ ಹಣ ಕಟ್ಟಿ ಆಡ್ಮಿಷನ್ ಆಗಿದ್ದರು.

Also Read: ಬಾಲಕಿ ಒಂಟಿಕಾಲಲ್ಲಿ ಜಿಗಿದುಕೊಂಡು ಶಾಲೆಗೆ ಹೋಗುವ ದೇಶವಿದು! ಹಾಗಾದರೆ ಶಾಲೆಗೆ ನಡೆದುಹೋಗುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ!? ಇಲ್ಲಿದೆ ಅಂಕಿ ಅಂಶಗಳು

ಆದರೆ, 10ನೇ ತರಗತಿಯಲ್ಲಿ ಚರಿತಾ ಔಟ್ ಆಫ್ ಔಟ್ ಅಂಕಗಳನ್ನು ತೆಗೆದಿದ್ದಾಳೆ. ಆದರೆ, ಫಲಿತಾಂಶ ಪ್ರಕಟವಾದ ಬಳಿಕ ಕಾಲೇಜು ಆಡಳಿತ ಮಂಡಳಿ ಸೀಟು-ಹಣ ಎರಡೂ ನೀಡಿಲ್ಲ! ಸೀಟು ಬೇಕಾದರೆ 2 ಲಕ್ಷದ 25 ಸಾವಿರ ಹಣ ಪೂರ್ತಿ ಕಟ್ಟಬೇಕು ಎಂದು ಹೇಳಿದೆ. ಅಲ್ಲದೆ, ಕಟ್ಟಿದ 50 ಸಾವಿರ ಹಣವೂ ವಾಪಸ್ ಬರೋದಿಲ್ಲ ಎಂದಿದ್ದರಂತೆ! ಅಂದು ಒಂದು ರೀತಿ ಹೇಳಿ, ಅಡ್ಮಿಷನ್ ಮಾಡಿಸಿಕೊಂಡು ಈಗ, ಮತ್ತೊಂದು ರೀತಿ ಹೇಳುತ್ತಿದ್ದಾರೆ. ನಮ್ಮ ಹಣ ವಾಪಸ್ ನೀಡಿ ನಾವೇ ಬೇರೆ ಕಾಲೇಜಿಗೆ ಸೇರುತ್ತೇವೆ ಎಂದರೂ ಹಣ ನೀಡುತ್ತಿಲ್ಲ ಎಂದು ಚರಿತಾ ಹಾಗೂ ತಾಯಿ ಪುಷ್ಪ ಟಿವಿ9 ಬಳಿ ಅಳಲು ತೋಡಿಕೊಂಡಿದ್ದರು. ಈ ಬಗ್ಗೆ ಟಿವಿ9ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಮೂಡಬಿದರೆ ಖಾಸಗಿ ಪಿಯು ಕಾಲೇಜು ಎಕ್ಸಲೆಂಟ್ ಆಡಳಿತ ಸಿಬ್ಬಂದಿ ಮುಂಗಡವಾಗಿ ಕಟ್ಟಿಸಿಕೊಂಡಿದ್ದ 50 ಹಣವನ್ನ ಚೆಕ್ ರೂಪದಲ್ಲಿ ಚರಿತಾಗೆ ವಾಪಸ್ ನೀಡಿದ್ದಾರೆ. ಚರಿತಾ ತಾಯಿ ಟಿವಿ9 ಗೆ ಧನ್ಯವಾದ ಸಲ್ಲಿಸಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:20 pm, Sat, 28 May 22

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ