AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ತಾಲೂಕಿನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ಬಳಿಕ ಪ್ಲಾಸ್ಟಿಕ್ ಸಮೇತ ಉಳಿದ ಆಹಾರ ತಿಂದು ಎರಡು ಹಸು ಸಾವು!

JDS Pancharatna Yatra: ಹೈನುಗಾರಿಕೆಯಿಂದಲೇ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ಹಸುಗಳು ಸಾವನ್ನಪ್ಪಿರುವುದರಿಂದ ಕಂಗಾಲಾಗಿವೆ. ಪಂಚರತ್ನ ಯಾತ್ರೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅದಕ್ಕೆ ಜವಾಬ್ದಾರಿ ಯಾರೆಂದು ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.

ಶೃಂಗೇರಿ ತಾಲೂಕಿನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ಬಳಿಕ ಪ್ಲಾಸ್ಟಿಕ್ ಸಮೇತ ಉಳಿದ ಆಹಾರ ತಿಂದು ಎರಡು ಹಸು ಸಾವು!
ಜೆಡಿಎಸ್ ಪಂಚರತ್ನ ಯಾತ್ರೆ ನಡೆದಿದ್ದ ಸ್ಥಳ, ಸಾವಿಗೂ ಮುನ್ನ ಪ್ಲಾಸ್ಟಿಕ್ ಆಹಾರ ತಿನ್ನುತ್ತಿರುವ ರಾಸುಗಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 28, 2023 | 1:26 PM

ಚಿಕ್ಕಮಗಳೂರು: ಮುಂಬರುವ ಅಸೆಂಬ್ಲಿ ಚುನಾವಣೆ ನಿಮಿತ್ತ (Karnataka Assembly Elections 2023)  ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿಯವರ (HD Kumaraswamy) ಮಹತ್ವಾಕಾಂಕ್ಷಿ/ ದೂರಗಾಮಿಯ ಪಂಚರತ್ನ ರಾಜಕೀಯ ಯಾತ್ರೆ (JDS Pancharatna Yatra) ಮುಗಿದ ಬಳಿಕ ಉಳಿದಿದ್ದ (Left over Food) ಅನ್ನವನ್ನು ತಿಂದು ಎರಡು ಹಸುಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ವೈಕುಂಠಪುರ ಗ್ರಾಮದಲ್ಲಿ ನಡೆದಿದೆ. ಯಾತ್ರೆ ಮುಗಿದ ಎರಡು ದಿನಗಳ ಬಳಿಕ ನಿನ್ನೆ ಹಾಗೂ ಇಂದು ಎರಡು ಹಸುಗಳು ಸಾವನ್ನಪ್ಪಿವೆ.

ಜೆಡಿಎಸ್ ನಾಯಕ ಹೆಚ್​ ಡಿ ಕುಮಾರಸ್ವಾಮಿ ಬರುತ್ತಾರೆ ಎಂದು ಶೃಂಗೇರಿ ತಾಲೂಕಿನ ವೈಕುಂಠಪುರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದರು. ಅಂದು 2000 ಜನರಿಗೆ ಅಡುಗೆ ಮಾಡಿಸಿದ್ದರು. ಆದರೆ ಊಟ ಮಾಡಿದ್ದು 1000 ಜನ ಮಾತ್ರ. ಉಳಿದ ಆಹಾರ ಹಾಗೂ ಪ್ಲಾಸ್ಟಿಕ್ ಗಳನ್ನ (Plastic) ಅರಣ್ಯ ಪ್ರದೇಶದಲ್ಲಿ ಎಸೆದಿದ್ದರು. ಅದನ್ನ ತಿಂದು ಇದೀಗ ಎರಡು ಹಸುಗಳು ಸಾವನ್ನಪ್ಪಿವೆ.

ಬೆಳಗ್ಗೆ ಮೇವಿಗೆ ಹೋಗಿದ್ದ ರಾಸುಗಳು ಸಂಜೆ ಮನೆಗೆ ಬಂದ ಬಳಿಕ ಹೊಟ್ಟೆ ಉಬ್ಬರಿಸಿಕೊಂಡು ಬೆಳಗಾಗುವುದರಲ್ಲಿ ಎರಡು ಹಸುಗಳು ಸಾವನ್ನಪ್ಪಿವೆ. ಹೈನುಗಾರಿಕೆಯಿಂದಲೇ ಬದುಕು ಕಟ್ಟಿಕೊಂಡಿದ್ದ ಕುಟುಂಬಗಳು ಹಸುಗಳು ಸಾವನ್ನಪ್ಪಿರುವುದರಿಂದ ಕಂಗಾಲಾಗಿವೆ. ಪಂಚರತ್ನ ಯಾತ್ರೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬದುಕಿಗೆ ಅನಿವಾರ್ಯವಾಗಿದ್ದ ರಾಸುಗಳು ಸಾವನ್ನಪ್ಪಿವೆ. ಅದಕ್ಕೆ ಜವಾಬ್ದಾರಿ ಯಾರೆಂದು ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.

Published On - 1:23 pm, Tue, 28 February 23

ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!