AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur Naxals Arrested: ಕರ್ನಾಟಕ ಮೂಲದ ಇಬ್ಬರು ನಕ್ಸಲರು ಕೇರಳದಲ್ಲಿ ಅರೆಸ್ಟ್

ಬಂಧಿತ ಇಬ್ಬರು ಮಲೆನಾಡ ನಕ್ಸಲಿಸಂನಲ್ಲಿ ಮುಂಚೂಣಿಯಲ್ಲಿದ್ದವರು. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಬುಕ್ಕಡಿ ಬೈಲು ಮೂಲದ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ 2003ರಲ್ಲಿ ಭೂಗತನಾಗಿದ್ದ.

Chikmagalur Naxals Arrested: ಕರ್ನಾಟಕ ಮೂಲದ ಇಬ್ಬರು ನಕ್ಸಲರು ಕೇರಳದಲ್ಲಿ ಅರೆಸ್ಟ್
ಕರ್ನಾಟಕ ಮೂಲದ ಇಬ್ಬರು ನಕ್ಸಲ್ಸ್ ಕೇರಳದಲ್ಲಿ ಅರೆಸ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on:Nov 10, 2021 | 8:27 AM

Share

ಚಿಕ್ಕಮಗಳೂರು: ಕೇರಳ ಪೊಲೀಸರು ಚಿಕ್ಕಮಗಳೂರು ಮೂಲದ ಇಬ್ಬರು ನಕ್ಸಲರನ್ನು ಬಂಧಿಸಿದ್ದಾರೆ. ಕೇರಳದ ಸುಲ್ತಾನ್ ಬತ್ತೇರಿಯಲ್ಲಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ (48), ಸಾವಿತ್ರಿಯನ್ನು ಎಟಿಎಸ್ ಬಂಧಿಸಿದೆ.

ಬಂಧಿತ ಇಬ್ಬರು ಮಲೆನಾಡ ನಕ್ಸಲಿಸಂನಲ್ಲಿ ಮುಂಚೂಣಿಯಲ್ಲಿದ್ದವರು. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಬುಕ್ಕಡಿ ಬೈಲು ಮೂಲದ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ 2003ರಲ್ಲಿ ಭೂಗತನಾಗಿದ್ದ. ಕೃಷ್ಣಮೂರ್ತಿ ತಂದೆ ಗೋಪಾಲ್‌ ರಾವ್ ನಿಧನರಾದಾಗಲೂ ಈತ ಬಂದಿರಲಿಲ್ಲ. ಶೃಂಗೇರಿಯಲ್ಲಿ ಪದವಿ, ಶಿವಮೊಗ್ಗದಲ್ಲಿ ಎಲ್‌.ಎಲ್‌.ಬಿ. ಶಿಕ್ಷಣ ಪಡೆದಿದ್ದ ಕೃಷ್ಣಮೂರ್ತಿ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದ ವೇಳೆ ನಕ್ಸಲ್‌ ಸೇರ್ಪಡೆಯಾಗಿದ್ದ. 2003ರಿಂದಲೂ ಬಿ.ಜಿ.ಕೃಷ್ಣಮೂರ್ತಿ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಸದ್ಯ ಈಗ ಕೇರಳದಲ್ಲಿ ಸೆರೆ ಹಿಡಿಯಲಾಗಿದೆ.

ಬಂಧಿತ ನಕ್ಸಲ್ ಸಾವಿತ್ರಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಮಾವಿನಕೆರೆಯ ನಿವಾಸಿ. ಕೃಷ್ಣಮೂರ್ತಿ ವಿರುದ್ಧ 53, ಸಾವಿತ್ರಿ ವಿರುದ್ಧ 22 ಪ್ರಕರಣಗಳಿವೆ.

ಇದನ್ನೂ ಓದಿ: ಛತ್ತೀಸ್‌ಗಢ ಮತ್ತು ಜಾರ್ಖಂಡ್‌ ನಕ್ಸಲ್ ಪೀಡಿತ ಪ್ರದೇಶಗಳ ಮೇಲೆ ದಾಳಿ ನಡೆಸಲು ಸಜ್ಜಾದ ಭದ್ರತಾ ಪಡೆ

Published On - 7:58 am, Wed, 10 November 21

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ