ಚಿಕ್ಕಮಗಳೂರು: ಈಜಲು ತುಂಗಾ ನದಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಈಜಲೆಂದು ತುಂಗಾ ನದಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳಿಬ್ಬರು ನೀರುಪಾಲದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದರೆ, ಇತ್ತ ಗದಗದಲ್ಲಿ ಬೈಕ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು: ಈಜಲು ತುಂಗಾ ನದಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಈಜಲು ತುಂಬಾ ನದಿಗೆ ಇಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು (ಸಾಂದರ್ಭಿಕ ಚಿತ್ರ)
Rakesh Nayak Manchi

Updated on: May 19, 2023 | 6:27 PM

ಚಿಕ್ಕಮಗಳೂರು: ಈಜಲೆಂದು ತುಂಗಾ ನದಿಗೆ (Tunga River) ಇಳಿದ ಇಬ್ಬರು ವಿದ್ಯಾರ್ಥಿಗಳಿಬ್ಬರು ನೀರುಪಾಲದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ (20) ಹಾಗೂ ರಕ್ಷಿತ್ (20) ನೀರುಪಾಲಾದ ವಿದ್ಯಾರ್ಥಿಗಳು. ಶೃಂಗೇರಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ರಕ್ಷಿತ್, ಪ್ರಜ್ವಲ್ ನೆಮ್ಮಾರಿನ ಸುಂಕದಮಕ್ಕಿ ತೂಗುಸೇತುವೆ ಬಳಿ ಈಜಲೆಂದು ನದಿಗಿಳಿದಿದ್ದಾರೆ. ಈ ವೇಳೆ ನೀರು ಪಾಲಾಗಿದ್ದಾರೆ. ಘಟನೆ ಸಂಬಂಧ ಶೃಂಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಕ್ಕೆ ಬೈಕ್ ಡಿಕ್ಕಿ, ಇಬ್ಬರು ಬಾಲಕರು ಸಾವು

ಮರಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿರುವ ಬಸ್ ಡಿಪೋ‌ ಬಳಿ ನಡೆದಿದೆ. ಅನೂಪ್​ ಇಟಗಿ (15), ಶ್ರೀಶಾಂತ್​ ಗಡಗಿ (15) ಮೃತ ಬಾಲಕರು. ಅಬ್ಬಿಗೇರಿ ಗ್ರಾಮದ ಬಳಿಯ ಕಲಾಕಾಶಿ ಈಜು‌ಕೊಳ್ಳದಿಂದ ವಾಪಸಾಗುವಾಗ ನಿಯಂತ್ರಣ ಕಳೆದುಕೊಂಡು ಮರಕ್ಕೆ ಬೈಕ್ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರಾಯಚೂರು: ಈಜಲು ಹೋಗಿದ್ದ ಅಣ್ಣ-ತಮ್ಮ ನದಿ ಪಾಲು

ಮೃತ ಬಾಲಕರು ರೋಣ ಪಟ್ಟಣದ ನಿವಾಸಿಗಳಾಗಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ ರೋಣಾ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Fri, 19 May 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us