AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur News: ದಶಕಗಳಿಂದ ಮನವಿ ಮಾಡಿದ್ರು ಸ್ಪಂದಿಸದ ಜನಪ್ರತಿನಿಧಿಗಳು: ತಮ್ಮೂರಿನ ರಸ್ತೆಯನ್ನು ತಾವೇ ದುರಸ್ತಿ ಮಾಡಿಕೊಂಡ ಗ್ರಾಮಸ್ಥರು

ನಿತ್ಯ ಸಾವಿರಾರು ಜನ ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಾಹನಗಳು ಸಂಚಾರ ಮಾಡಲು ಕಷ್ಟವಾಗಿದ್ದ ರಸ್ತೆಗೆ ಗ್ರಾಮಸ್ಥರು ಸೇರಿ ಮಣ್ಣನ್ನ ಹಾಕಿದ್ದಾರೆ. ಕೊಪ್ಪ ಪಟ್ಟಣಕ್ಕೆ ಸಂಪರ್ಕಿಸುವ ಮೂರು ಕಿಮೀ ವರೆಗೂ ಮಣ್ಣನ್ನ ಹಾಕಿ ದುರಸ್ತಿ ಕಾರ್ಯವನ್ನ ಗ್ರಾಮಸ್ಥರೇ ಮಾಡಿದ್ದಾರೆ. ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Chikmagalur News: ದಶಕಗಳಿಂದ ಮನವಿ ಮಾಡಿದ್ರು ಸ್ಪಂದಿಸದ ಜನಪ್ರತಿನಿಧಿಗಳು: ತಮ್ಮೂರಿನ ರಸ್ತೆಯನ್ನು ತಾವೇ ದುರಸ್ತಿ ಮಾಡಿಕೊಂಡ ಗ್ರಾಮಸ್ಥರು
ತಮ್ಮೂರಿನ ರಸ್ತೆಯನ್ನು ತಾವೇ ದುರಸ್ತಿ ಮಾಡಿಕೊಂಡ ಗ್ರಾಮಸ್ಥರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Nov 06, 2023 | 12:10 PM

Share

ಚಿಕ್ಕಮಗಳೂರು, ನ.05: ಒಂದು ಸಾವಿರ ಜನಸಂಖ್ಯೆ ಇರುವ ಗ್ರಾಮದ ರಸ್ತೆ ದುರಸ್ತಿ ಮಾಡುವಂತೆ ದಶಕಗಳಿಂದ ಮನವಿ ಮಾಡಿದರೂ ಗ್ರಾಮಸ್ಥರಿಗೆ ಸ್ಪಂದಿಸದ ಜಿಲ್ಲಾಡಳಿತ, ಸ್ಥಳೀಯ ಜನಪ್ರತಿನಿಧಿಗಳಿಗೆ ಸೆಡ್ಡು ಹೊಡೆದು ಎರಡು ಗ್ರಾಮಗಳ ಗ್ರಾಮಸ್ಥರೇ (Villagers) ಸೇರಿ ಹಣ ಸಂಗ್ರಹ ಮಾಡಿ ತಮ್ಮೂರಿನ ರಸ್ತೆಗೆ ಮಣ್ಣನ್ನ ಹಾಕಿ ರಸ್ತೆ ದುರಸ್ತಿ ಕಾರ್ಯ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ N.R ಪುರ ತಾಲೂಕಿನ ಕರ್ಕೇಶ್ವರ, ಗಬ್ಬೂರು ಗ್ರಾಮಸ್ಥರು ಸೇರಿಕೊಂಡು ರಸ್ತೆ ದುರಸ್ಥಿ ಕಾರ್ಯ ಮಾಡಿದ್ದಾರೆ.

ಎರಡು ದಶಕಗಳಿಂದ ಗ್ರಾಮಸ್ಥರು ಮನವಿ ಮಾಡಿದ್ರು ಸ್ಪಂದಿಸದ ಜನಪ್ರತಿನಿಧಿಗಳು, ಜಿಲ್ಲಾಡಳಿತ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಅದೆಷ್ಟೋ ಗ್ರಾಮಗಳಿಗೆ ಇನ್ನು ಸರಿಯಾದ ಮೂಲಭೂತ ಸೌಕರ್ಯಗಳು ಸಿಕ್ಕಿಲ್ಲ. ಒಂದು ಸಾವಿರ ಜನ ಸಂಖ್ಯೆ ಇರುವ N.R ಪುರ ತಾಲೂಕಿನ ಕರ್ಕೇಶ್ವರ ಮತ್ತು ಗಬ್ಬೂರು ಗ್ರಾಮದಿಂದ ಕೊಪ್ಪ ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟು 20 ವರ್ಷಗಳೇ ಕಳೆದ್ರೂ ಇನ್ನೂ ರಸ್ತೆ ದುರಸ್ತಿಯ ಭಾಗ್ಯ ಮಾತ್ರ ಗ್ರಾಮಸ್ಥರಿಗೆ ಸಿಕ್ಕಿಲ್ಲ. ರಸ್ತೆ ದುರಸ್ತಿಗಾಗಿ ನೂರಾರು ಬಾರಿ ಮನವಿ ಮಾಡಿದ್ರು ಸ್ಪಂದಿಸದ ಜಿಲ್ಲಾಡಳಿತ, ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಪ್ರತಿನಿತ್ಯ ಸಾವಿರಾರು ಜನ ಸಂಚಾರ ಮಾಡುವ ರಸ್ತೆಯ ದುರಸ್ತಿಗಾಗಿ ಕರ್ಕೇಶ್ವರ ಗಬ್ಬೂರು ಗ್ರಾಮದ ಗ್ರಾಮಸ್ಥರು ಸೇರಿ ಗ್ರಾಮಸ್ಥರ ಬಳಿ ಹಣ ಸಂಗ್ರಹ ಮಾಡಿ ಸ್ವತಃ ತಮ್ಮೂರಿನ ರಸ್ತೆಗೆ ಮಣ್ಣನ್ನ ಹಾಕಿ ರಸ್ತೆ ದುರಸ್ತಿ ಮಾಡಿದ್ದಾರೆ.

3 K.M ರಸ್ತೆಗೆ ಮಣ್ಣು ಹಾಕಿ ದುರಸ್ತಿ ಕಾರ್ಯ ಮಾಡಿದ ಗ್ರಾಮಸ್ಥರು

ನಿತ್ಯ ಸಾವಿರಾರು ಜನ ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಾಹನಗಳು ಸಂಚಾರ ಮಾಡಲು ಕಷ್ಟವಾಗಿದ್ದ ರಸ್ತೆಗೆ ಗ್ರಾಮಸ್ಥರು ಸೇರಿ ಮಣ್ಣನ್ನ ಹಾಕಿದ್ದಾರೆ. ಕೊಪ್ಪ ಪಟ್ಟಣಕ್ಕೆ ಸಂಪರ್ಕಿಸುವ ಮೂರು ಕಿಮೀ ವರೆಗೂ ಮಣ್ಣನ್ನ ಹಾಕಿ ದುರಸ್ತಿ ಕಾರ್ಯವನ್ನ ಗ್ರಾಮಸ್ಥರೇ ಮಾಡಿದ್ದು ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಶೃಂಗೇರಿ ಕ್ಷೇತ್ರದ ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಚಿಕ್ಕಮಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:03 pm, Mon, 6 November 23

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ