AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು, ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ, ಎಲ್ಲರೂ ರಾಮ ಜಪ ಮಾಡುವಂತೆ ಶೃಂಗೇರಿ ಶ್ರೀಗಳು ಕರೆ

ಅಯೋಧ್ಯೆ ಶ್ರೀರಾಮ ಮಂದಿಯರದಲ್ಲಿ ರಾಮಲಲ್ಲಾನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಕಾರ್ಯಕ್ರಮದಿಂದ ಶಂಕರ ಮಠಗಳು ದೂರ ಉಳಿದಿವೆ ಎಂದು ಅಪಪ್ರಚಾರಗಳು ನಡೆಯುತ್ತಿವೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠದ ಕಿರಿಯ ಸ್ವಾಮೀಜಿ ವಿಧುಶೇಖರ ಶ್ರೀ, ಸುಳ್ಳು, ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ, ಎಲ್ಲರೂ ರಾಮ ಜಪ ಮಾಡುವಂತೆ ಕರೆ ನೀಡಿದರು.

ಸುಳ್ಳು, ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ, ಎಲ್ಲರೂ ರಾಮ ಜಪ ಮಾಡುವಂತೆ ಶೃಂಗೇರಿ ಶ್ರೀಗಳು ಕರೆ
ಸುಳ್ಳು, ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ, ಎಲ್ಲರೂ ರಾಮ ಜಪ ಮಾಡುವಂತೆ ಶೃಂಗೇರಿ ಶ್ರೀಗಳು ಕರೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Rakesh Nayak Manchi|

Updated on:Jan 16, 2024 | 10:30 PM

Share

ಚಿಕ್ಕಮಗಳೂರು, ಜ.16: ಅಯೋಧ್ಯೆ ಶ್ರೀರಾಮ ಮಂದಿಯರದಲ್ಲಿ (Ayodhya Ram Mandir) ರಾಮಲಲ್ಲಾನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಕಾರ್ಯಕ್ರಮದಿಂದ ಶಂಕರ ಮಠಗಳು ದೂರ ಉಳಿದಿವೆ ಎಂದು ಅಪಪ್ರಚಾರಗಳು ನಡೆಯುತ್ತಿವೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ (Sringeri) ಮಠದ ಕಿರಿಯ ಸ್ವಾಮೀಜಿ ವಿಧುಶೇಖರ ಶ್ರೀ, ಸುಳ್ಳು, ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ, ಎಲ್ಲರೂ ರಾಮ ಜಪ ಮಾಡುವಂತೆ ಕರೆ ನೀಡಿದರು.

ಮಕರ ಸಂಕ್ರಮಣದಿಂದ ಸೂರ್ಯ ತನ್ನ ಪಥ ಬದಲಿಸುತ್ತಾನೆ. ದಕ್ಷಿಣದಿಂದ ಉತ್ತರಾಯಣದ ಕಡೆಗೆ ಪಥ ಬದಲಾವಣೆಯಾಗಿದೆ. ದೇಶದ ನಾಸ್ತಿಕರ ಚಿತ್ತ ಉತ್ತರದತ್ತ ನೆಟ್ಟಿದೆ. ಈ ಉತ್ತರಾಯಣದಲ್ಲಿ ಉತ್ತರದಲ್ಲಿ ವಿಶೇಷವಾದ ಕಾರ್ಯಕ್ರಮ ನಡೆಯುತ್ತಿದೆ. ನಮ್ಮ ಗಮನ ದಕ್ಷಿಣದಿಂದ ಉತ್ತರದತ್ತ ಹೋಗಿದೆ ಎಂದರು.

ನಾಸ್ತಿಕರ ಮನದಲ್ಲಿ ಎರಡು ವಿಚಾರಗಳು ಕೇಂದ್ರೀಕೃತವಾಗಿದೆ. ಒಂದು, ಸೂರ್ಯ ದಕ್ಷಿಣದಿಂದ ಉತ್ತರಕ್ಕೆ ಪಥ ಬದಲಿಸಿರುವುದು, ಮತ್ತೊಂದು ಉತ್ತರದ ಅಯೋಧ್ಯೆಯಲ್ಲಿ ನಡೆಯುತ್ತಿರುವ ಧರ್ಮಕಾರ್ಯ. ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮಜನ್ಮ ಭೂಮಿ ಸಂಪನ್ನವಾಗಲಿದೆ. ಅಯೋಧ್ಯೆಯಲ್ಲಿ ಭವ್ಯ ಮತ್ತು ನವ್ಯಮಂದಿರ ಲೋಕಾರ್ಪಣೆಗೊಳ್ಳಲಿದೆ ಎಂದರು.

ಇದನ್ನೂ ಓದಿ: Ram Janmbhoomi Case 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದಿಂದ ಅಯೋಧ್ಯೆ ರಾಮಮಂದಿರ ನಿರ್ಮಾಣದವರೆಗೆ; ಟೈಮ್​ಲೈನ್

ಕೆಲವರು ದಕ್ಷಿಣದಿಂದ ಉತ್ತರಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಮತ್ತಲವರು ಅಯೋಧ್ಯೆಯ ರಾಮಮಂದಿರಕ್ಕೆ ಮನಸ್ಸಲ್ಲೇ ಖುಷಿ ಪಡುತ್ತಿದ್ದಾರೆ. 5 ಶತಮಾನಗಳ ಬಳಿಕ ಈ ಶುಭಕಾರ್ಯ ನಡೆಯುತ್ತಿದೆ. ಪ್ರತಿಯೊಬ್ಬ ನಾಸ್ತಿಕನಿಗೂ ಇದು ಸಂತಸದ ಸಂಗತಿಯಾಗಿದೆ. ಪ್ರತಿಯೊಬ್ಬರೂ ಅಯೋಧ್ಯೆಗೆ ಹೋಗಿ ಶ್ರೀರಾಮನ ದರ್ಶನ ಪಡೆಯಬೇಕು ಎಂದು ಮನವಿ ಮಾಡಿದರು.

ಅಯೋಧ್ಯೆ, ಶೃಂಗೇರಿಯಲ್ಲೂ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದೆ. ಸೂರ್ಯವಂಶದಲ್ಲಿ ಶ್ರೀರಾಮನ ಅವತಾರವಾಗಿದೆ, ಇದು ಸೂರ್ಯವಂಶದ ಬಹದೊಡ್ಡ ಸೌಭಾಗ್ಯ. ಸೂರ್ಯ ದಕ್ಷಿಣದಿಂದ ಉತ್ತರಕ್ಕೆ ಪಥ ಬದಲಿಸಿದ್ದಾನೆ. ಸೂರ್ಯದೇವ ಕೂಡ ದಕ್ಷಿಣದಿಂದ ಉತ್ತರದ ಕಡೆ ಹೋಗಿ ನೋಡುತ್ತಿದ್ದಾನೆ. ಪ್ರಾಣಪ್ರತಿಷ್ಠಾಪನೆ ಪವಿತ್ರ ಕಾರ್ಯವನ್ನು ಸೂರ್ಯದೇವ ನೋಡುತ್ತಿದ್ದಾನೆ ಎಂದರು.

ರಾಮಭುಜಂಗ ಸ್ತೋತ್ರ ಪಠಣ

ಭಗವಾನ್ ಶ್ರೀರಾಮನ ರಾಮಭುಜಂಗ ಸ್ತೋತ್ರ ಪಠಣ ಮಾಡುವಂತೆ ಶ್ರೀಗಳು ಕರೆ ನೀಡಿದ್ದು, ಶಂಕರಾಚಾರ್ಯರು ಪಠಣ ಮಾಡಿರುವ ರಾಮನ ಶ್ಲೋಕದಲ್ಲಿ ಅದ್ಭುತ ಅರ್ಥವಿದೆ. ಕಳೆದ ದೀಪಾವಳಿಯಲ್ಲೇ ರಾಮ ಜಪ ಮಾಡಲು ಹೇಳಿದ್ದೇವೆ. ನಾಸ್ತಿಕರು ಕೂಡ ರಾಮಜಪ ಮಾಡುತ್ತಿದ್ದಾರೆ ಎಂದರು.

ಸುಳ್ಳು, ಅಪಪ್ರಚಾರಕ್ಕೆ ಕಿವಿಗೊಡಬೇಡಿ

ಅಯೋಧ್ಯೆಗೂ ಶೃಂಗೇರಿಗೂ ಅವಿನಾಭಾವ ಸಂಬಂಧವಿದೆ. ಸುಳ್ಳು, ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ. ಎಲ್ಲರೂ ರಾಮ ಜಪ ಮಾಡುವಂತೆ ಶೃಂಗೇರಿಯ ಕಿರಿಯ ಜಗದ್ಗುರು ವಿಧುಶೇಖರ ಶ್ರೀಗಳು ಕರೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Tue, 16 January 24

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್