CT Ravi: ಸಿ.ಟಿ. ರವಿ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತಾರಾ, ಸೊಲ್ತಾರಾ? ಚೌಡೇಶ್ವರಿ ದೇವಿ ಮೊರೆ ಹೋದ ಬೆಂಬಲಿಗರು

ಸೋಲು ಗೆಲುವು ಲೆಕ್ಕಚಾರವನ್ನ ಚಿಕ್ಕಮಗಳೂರು ಚೌಡೇಶ್ವರಿ ದೇವಿಯ ಮುಂದಿಟ್ಟಿದ್ದಾರೆ. ಸಿ.ಟಿ.ರವಿ ಬೆಂಬಲಿಗರು ಇಂದು ಚಿಕ್ಕಮಗಳೂರು ಚೌಡೇಶ್ವರಿ ದೇವಿಯ ಆಸ್ಥಾನಕ್ಕೆ ಬಂದು ತಮ್ಮ ನಾಯಕನ ರಾಜಕೀಯ ಭವಿಷ್ಯದ ಬಗ್ಗೆ ದೇವರ ಬಳಿ ಪ್ರಶ್ನೆ ಮಾಡಿದ್ದಾರೆ.

CT Ravi: ಸಿ.ಟಿ. ರವಿ ಮುಂದಿನ ಚುನಾವಣೆಯಲ್ಲಿ ಗೆಲ್ಲುತ್ತಾರಾ, ಸೊಲ್ತಾರಾ? ಚೌಡೇಶ್ವರಿ ದೇವಿ ಮೊರೆ ಹೋದ ಬೆಂಬಲಿಗರು
ಚೌಡೇಶ್ವರಿ ದೇವಿ
Follow us
| Updated By: Digi Tech Desk

Updated on:Feb 01, 2023 | 11:56 AM

ಚಿಕ್ಕಮಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಅವರ ಬೆಂಬಲಿಗರು ಕೂಡ ನಾನಾ ರೀತಿಯ ಸರ್ಕಸ್​ಗಳನ್ನು ಮಾಡುತ್ತಿದ್ದಾರೆ. ರಾಜಕೀಯ ರಣರಂಗದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗುತ್ತಿದೆ. ನಾಯಕರು ನಾ ಮುಂದು ತಾ ಮುಂದು ಎಂಬಂತೆ ಮತದಾರರ ಮನಸ್ಸು ಗೆಲ್ಲಲು ತಯಾರಿ ನಡೆಸುತ್ತಿದ್ದಾರೆ. ಸದ್ಯ ಸಿ.ಟಿ.ರವಿ ಸೊಲ್ತಾರೋ, ಗೆಲ್ತಾರೋ ಎಂದು ಸಿ.ಟಿ. ರವಿ ಬೆಂಬಲಿಗರು ದೇವರ ಮೊರೆ ಹೋಗಿದ್ದಾರೆ.

ಸೋಲು ಗೆಲುವು ಲೆಕ್ಕಚಾರವನ್ನ ಚಿಕ್ಕಮಗಳೂರು ಚೌಡೇಶ್ವರಿ ದೇವಿಯ ಮುಂದಿಟ್ಟಿದ್ದಾರೆ. ಸಿ.ಟಿ.ರವಿ ಬೆಂಬಲಿಗರು ಇಂದು ಚಿಕ್ಕಮಗಳೂರು ಚೌಡೇಶ್ವರಿ ದೇವಿಯ ಆಸ್ಥಾನಕ್ಕೆ ಬಂದು ತಮ್ಮ ನಾಯಕನ ರಾಜಕೀಯ ಭವಿಷ್ಯದ ಬಗ್ಗೆ ದೇವರ ಬಳಿ ಪ್ರಶ್ನೆ ಮಾಡಿದ್ದಾರೆ. ಹಗ್ಗ ಬಲಕ್ಕೆ ತಿರುಗಿದ್ರೆ ಬಿಜೆಪಿ. ಎಡಕ್ಕೆ ತಿರುಗಿದ್ರೆ ಕಾಂಗ್ರೆಸ್ ಗೆಲುವು ಅಪ್ಪಣೆ ನೀಡುವಂತೆ ಮೊರೆ ಇಟ್ಟಿದ್ದಾರೆ. ತಾಯಿಗೆ ಪೂಜೆ ಸಲ್ಲಿಸಿ ನಂತರ ಹಗ್ಗ ಕೈಯಲ್ಲಿ ಹಿಡಿದು ಅರ್ಚಕ ನಿಂತಿದ್ದು ಈ ವೇಳೆ ಸಿ.ಟಿ.ರವಿ ಗೆಲ್ತಾರೆ ಅಂತ ತಾಯಿ ಚೌಡೇಶ್ವರಿ ಅಪ್ಪಣೆ ನೀಡಿದ್ದಾರಂತೆ. ಅರ್ಚಕ ರವಿ, ಸಿ.ಟಿ.ರವಿ ಅಭಿಮಾನಿಗಳ ಬೇಡಿಕೆಯಂತೆ ಚೌಡೇಶ್ವರಿ ಅಪ್ಪಣೆ ಕೇಳಿದ್ರು. ಸದ್ಯ ತಾಯಿ ನೀಡಿದ ಅಪ್ಪಣೆಯಿಂದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇನ್ನು ಚಿಕ್ಕಮಗಳೂರಿನ ಶಾಂತಿನಗರದ ಚೌಡೇಶ್ವರಿ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಅಪ್ಪಣೆಗಾಗಿಯೇ ಭೇಟಿ ನೀಡುತ್ತಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:55 am, Wed, 1 February 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್