AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ರ ಮಹಾಮಳೆಯಿಂದಾದ ನಷ್ಟಕ್ಕೆ ಪರಿಹಾರ ಹೇಳಿ 3ದಿನಗಳಿಂದ ಸತ್ಯಾಗ್ರಹ ನಡೆಸುತ್ತಿದ್ದ ಕಳಸ ಮಹಿಳೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಕಳೆದ 3 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಪ್ರತಿಭಟನೆ ವೇಳೆ ಸಂತ್ರಸ್ತೆ ವೇದಾವತಿ ಅಸ್ವಸ್ಥಗೊಂಡಿದ್ದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

2019ರ ಮಹಾಮಳೆಯಿಂದಾದ ನಷ್ಟಕ್ಕೆ ಪರಿಹಾರ ಹೇಳಿ 3ದಿನಗಳಿಂದ ಸತ್ಯಾಗ್ರಹ ನಡೆಸುತ್ತಿದ್ದ ಕಳಸ ಮಹಿಳೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು
3ದಿನಗಳಿಂದ ಸತ್ಯಾಗ್ರಹ ನಡೆಸುತ್ತಿದ್ದ ಕಳಸ ಮಹಿಳೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು
TV9 Web
| Edited By: |

Updated on:Mar 07, 2022 | 7:09 PM

Share

ಚಿಕ್ಕಮಗಳೂರು: ಜಿಲ್ಲೆಯ ಕಳಸ ಪಟ್ಟಣದಲ್ಲಿ ಕಳೆದ 3 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಪ್ರತಿಭಟನೆ ವೇಳೆ ಸಂತ್ರಸ್ತೆ ವೇದಾವತಿ ಅಸ್ವಸ್ಥಗೊಂಡಿದ್ದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 2019ರ ಮಹಾಮಳೆಯಲ್ಲಿ ಮನೆ, ಜಮೀನು, ಪುತ್ರನನ್ನು ಕಳೆದುಕೊಂಡಿದ್ದ ವೇದಾವತಿಗೆ ಸರ್ಕಾರ ಇದುವರೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಹಾಗೂ ಬಾಡಿಗೆ ಮನೆಯಲ್ಲಿ ವಾಸವಿದ್ದರೂ ಜಿಲ್ಲಾಡಳಿತ ಬಾಡಿಗೆ ಹಣವನ್ನೂ ಪಾವತಿಸದಿದ್ದರಿಂದ ಜೀವನ ದುಸ್ತರವಾಗಿ ದಯಾಮರಣಕ್ಕೆ ಅವಕಾಶ ಕೋರಿದ್ದರು. ಕಳೆದ ಮೂರು ದಿನಗಳಿಂದ ಸಂತ್ರಸ್ತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಉಪವಾಸವಿದ್ದ ಸಂತ್ರಸ್ತ ಮಹಿಳೆ ವೇದಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆ ಹಿನ್ನೆಲೆ: 2019 ರ ಮಹಾಮಳೆಯಲ್ಲಿ ಮನೆ, ಜಮೀನು ಕಳೆದುಕೊಂಡಿದ್ದ ಜನರಿಗೆ ಈವರೆಗೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ. ಮನೆ, ಜಮೀನು ಕಳೆದುಕೊಂಡ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ಅಷ್ಟೇ ಅಲ್ಲದೆ, ಬಾಡಿಗೆ ಮನೆಯಲ್ಲಿ ವಾಸವಿದ್ದರೂ ಜಿಲ್ಲಾಡಳಿತ ಬಾಡಿಗೆ ಹಣ ನೀಡಿಲ್ಲ. ಸರ್ಕಾರ, ಜಿಲ್ಲಾಡಳಿತದ ಧೋರಣೆ ವಿರೋಧಿಸಿ ಸಂತ್ರಸ್ತರು ಧರಣಿ ನಡೆಸಿದ್ದಾರೆ. ಬದುಕಲು ಬಿಡಿ ಇಲ್ಲಾ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ.

ಪ್ರತಿಭಟನೆ ನಿರತ ಮಹಿಳೆಯರ ಪೈಕಿ ಸಂತ್ರಸ್ತೆ ವೇದಾವತಿ ಅಸ್ವಸ್ಥಗೊಂಡಿದ್ದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೇದಾವತಿಯವರು 2019ರಲ್ಲಿ ಮನೆ ಜೊತೆ ಪುತ್ರನನ್ನು ಕಳೆದುಕೊಂಡಿದ್ದರು.

ಇದನ್ನೂ ಓದಿ: ಉಕ್ರೇನ್‌ನ ಸುಮಿಯಲ್ಲಿ ಸ್ಥಳಾಂತರ ಪ್ರಕ್ರಿಯೆ ಸದ್ಯ ರದ್ದಾಗಿದೆ ಎಂದ ಭಾರತೀಯ ವಿದ್ಯಾರ್ಥಿಗಳು

ಗ್ರೀನ್ ಡ್ರೆಸ್ನಲ್ಲಿ ಹಾಟ್ ಆಗಿ ಪೂಜಾ ಹೆಗ್ಡೆ

Published On - 7:07 pm, Mon, 7 March 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ