AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ರಕ್ಷಿತಾಳ ಅಂಗಾಂಗ ದಾನ: ವೈದ್ಯ ಚಂದ್ರಶೇಖರ್ ಸಾಲಿಮಠ್ ಹೇಳಿದ್ದೇನು?

ಬಸ್ಸಿನಿಂದ ಬಿದ್ದ ರಕ್ಷಿತಾಳ ಆರ್ಗನ್ಸ್​ಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರ ತಂಡದಲ್ಲಿದ್ದ ಚಂದ್ರಶೇಖರ್ ಸಾಲಿಮಠ್ ಟಿವಿ9ಗೆ ಎಕ್ಸ್ ಕ್ಲೂಸಿವ್ ಹೇಳಿಕೆ ನೀಡಿದ್ದಾರೆ.

ಯುವತಿ ರಕ್ಷಿತಾಳ ಅಂಗಾಂಗ ದಾನ: ವೈದ್ಯ ಚಂದ್ರಶೇಖರ್ ಸಾಲಿಮಠ್ ಹೇಳಿದ್ದೇನು?
ವೈದ್ಯ ಚಂದ್ರಶೇಖರ್ ಸಾಲಿಮಠ್, ಮೃತ ಯುವತಿ ರಕ್ಷಿತಾ
TV9 Web
| Edited By: |

Updated on: Sep 22, 2022 | 7:31 PM

Share

ಚಿಕ್ಕಮಗಳೂರು: ಈ ದಿನ ಚಿಕ್ಕಮಗಳೂರು ಜಿಲ್ಲೆಗೆ ಹೆಮ್ಮೆಯ ದಿನ. ಹಿಂದೆಂದೂ ನಡೆಯದ ಕಾರ್ಯ ಈ ದಿನ ನಡೆದಿದೆ. ರಕ್ಷಿತಾಳ ಅಂಗಾಂಗಗಳನ್ನು ದಾನ (organ donation) ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ ಎಂದು ಬಸ್ಸಿನಿಂದ ಬಿದ್ದ ರಕ್ಷಿತಾಳ ಆರ್ಗನ್ಸ್​ಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರ ತಂಡದಲ್ಲಿದ್ದ ಚಂದ್ರಶೇಖರ್ ಸಾಲಿಮಠ್ ಟಿವಿ9ಗೆ ಎಕ್ಸ್ ಕ್ಲೂಸಿವ್ ಹೇಳಿಕೆ ನೀಡಿದರು. ಹೃದಯವನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಕಳುಹಿಸಿದ್ದೇವೆ. 9 ವರ್ಷದ ಬಾಲಕನಿಗೆ ಈಗಾಗಲೇ ಯಶಸ್ವಿಯಾಗಿ ಜೋಡಣೆ ಮಾಡಲಾಗಿದೆ. ಲಿವರನ್ನ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಕಣ್ಣು, ಕಿಡ್ನಿಗಳನ್ನು ಮಣಿಪಾಲಿನ ಕೆಎಂಸಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಹಾರ್ಟನ್ನ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ 3 ಗಂಟೆ ಒಳಗೆ ತಲುಪಿಸಬೇಕಿತ್ತು.

ನಿಗದಿತ ಸಮಯದಲ್ಲಿ ಹೃದಯ ಜೋಡಣೆ ನಮಗೆ ಸವಾಲಾಗಿತ್ತು. ಹಾಗಾಗಿ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಹಾರ್ಟನ್ನ ಏರ್ಲಿಫ್ಟ್ ಮಾಡಿದ್ದೆವು. ಉಳಿದ ಅಂಗಾಂಗಗಳನ್ನು ಜೀರೋ ಟ್ರಾಫಿಕ್ ಮೂಲಕ ಮಂಗಳೂರಿಗೆ ತಲುಪಿಸಿದ್ದೇವೆ. 30ಕ್ಕೂ ಹೆಚ್ಚು ವೈದ್ಯರ ತಂಡದಿಂದ ಯಶಸ್ವಿ ಕಾರ್ಯ ಮಾಡಿದ್ದೇವೆ ಎಂದು ಹೇಳಿದರು.

ರಕ್ಷಿತಾಳಿಗೆ ಕಾಲೇಜು ವಿದ್ಯಾರ್ಥಿನಿಯರಿಂದ ಭಾವಪೂರ್ಣ ವಿದಾಯ: 

ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ವಿದ್ಯಾರ್ಥಿನಿ ರಕ್ಷಿತಾಗೆ ಸಾವಿರಾರು ವಿದ್ಯಾರ್ಥಿನಿಯರಿಂದ ಕಣ್ಣೀರಿನ ವಿದಾಯ ನೀಡಲಾಯಿತು. ಸ್ನೇಹಿತೆಯನ್ನು ಕಳೆದುಕೊಂಡು ಬಿಕ್ಕಳಿಸಿ ಬಿಕ್ಕಳಿಸಿ ಅಂತ ವಿದ್ಯಾರ್ಥಿನಿಯರು. ರಕ್ಷಿತಾಳ ಮೃತದೇಹ ನೋಡಿ ಶಿಕ್ಷಕರು, ಸಾರ್ವಜನಿಕರು ಕಣ್ಣೀರಿಟ್ಟರು. ಚಿಕ್ಕಮಗಳೂರು ನಗರದಿಂದ ಸ್ವಗ್ರಾಮಕ್ಕೆ ರಕ್ಷಿತಾ ಮೃತದೇಹ ರವಾನೆ ಮಾಡಲಾಯಿತು.

ತಂಗಿಗಾಗಿ ಅಣ್ಣನ ಭಾವುಕ ಹಾಡು:

ಒಂದು ಮುತ್ತಿನ ಕಥೆಯ ಹೇಳಿತು ಈ ಗೊಂಬೆ ಎಂದು ನನ್ನ ತಂಗಿಗಾಗಿ ಕೊನೆಯದಾಗಿ ಅಣ್ಣ ಹಾಡು ಹೇಳಿದ್ದು, ಅಣ್ಣನ ಈ ಒಂದು ಮಾತಿಗೆ ಇಡೀ ಕಾಲೇಜು ಭಾವುಕವಾಗಿತ್ತು. ಪುನೀತ್ ರಾಜಕುಮಾರ ಹಾಡನ್ನು ವಿದ್ಯಾರ್ಥಿನಿಯರು ಗುನುಗಿದ್ದು, ಕಣ್ಣೀರಿಡುತ್ತಲೇ ರಕ್ಷಿತಾಳನ್ನ ಕಳುಹಿಸಿಕೊಟ್ಟರು. ಹೋಗ್ಬೇಡ, ಬಿಟ್ಹೋಗ್ಬೇಡ ಅಂತಾ ರಕ್ಷಿತಾ ಸಹಪಾಠಿಗಳು ಕಣ್ಣೀರಿಟ್ಟಿದ್ದು, ಕಾಲೇಜಿನಲ್ಲಿ ಕಣ್ಣೀರಧಾರೆ ಹರಿದಿದ್ದು, ಆಕ್ರಂದನ ಮುಗಿಲು ಮುಟ್ಟಿತ್ತು.

ಹಿನ್ನೆಲೆ:

ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿತನಕ್ಕೆ ಯುವತಿ ರಕ್ಷಿತಾ ಬಲಿಯಾಗಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿರುವಂತಹ ಘಟನೆ ನಡೆದಿದೆ. ತಾಲೂಕಿನ ಸೋಮನಹಳ್ಳಿ ತಾಂಡ್ಯದ ರಕ್ಷಿತಾ ಮೃತ ಯುವತಿ. ಬಸ್​ನಿಂದ ಕೆಳಗೆ ಬಿದ್ದು ರಕ್ಷಿತಾ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು. ಮಗಳ ಅಂಗಾಂಗ ದಾನಕ್ಕೆ ಪೋಷಕರಾದ ತಾಯಿ ಲಕ್ಷ್ಮಿ ಬಾಯಿ, ತಂದೆ ಸುರೇಶ್ ನಾಯಕ್​ ಒಪ್ಪಿಗೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ