AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ನೆಪ ಹೇಳಿದ ತಪ್ಪಿಗೆ ಒಂದು ಗೊನೆ ಬಾಳೆಹಣ್ಣು ತೆಗೆದುಕೊಂಡು ಹೋದ ಚಿಕ್ಕಮಗಳೂರು ವ್ಯಕ್ತಿ

ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ವಿಧಿಸಿದ ಲಾಕ್​ಡೌನ್​ ನಮಗೆ ಅನ್ವಯಿಸಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಹೀಗೆ ಬೇಕಾಬಿಟ್ಟಿಯಾಗಿ ಓಡಾಡಿದ ವ್ಯಕ್ತಿಯೊಬ್ಬರನ್ನು ಪೊಲೀಸ್ ತಡೆಹಿಡಿದು ಪ್ರಶ್ನಿಸಿದ್ದಾರೆ.

Karnataka Lockdown: ನೆಪ ಹೇಳಿದ ತಪ್ಪಿಗೆ ಒಂದು ಗೊನೆ ಬಾಳೆಹಣ್ಣು ತೆಗೆದುಕೊಂಡು ಹೋದ ಚಿಕ್ಕಮಗಳೂರು ವ್ಯಕ್ತಿ
ಬಾಳೆಹಣ್ಣನ್ನು ಹೊತ್ತೊಯ್ಯುತ್ತಿರುವ ವ್ಯಕ್ತಿ
sandhya thejappa
sandhya thejappa|

Updated on: May 10, 2021 | 8:44 AM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಗಣನೀಯವಾಗಿ ಏರಿಯಾಗುತ್ತಿರುವ ಕಾರಣ ರಾಜ್ಯ ಸರ್ಕಾರ ಇಂದಿನಿಂದ (ಮೇ 10) ಲಾಕ್​ಡೌನ್​ ಜಾರಿಗೊಳಿಸಿದೆ. ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕೆಂದು ಸರ್ಕಾರ ತಿಳಿಸಿದೆ. ಆದರೆ ಜನರಿಗೆ ಮಾತ್ರ ಕೊರೊನಾ ಬಗ್ಗೆ ಇನ್ನೂ ನಿರ್ಲಕ್ಷ್ಯ ಮನೋಭಾವವನ್ನೆ ಹೊಂದಿದ್ದಾರೆ. ಬೇಕಾ ಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ವಿಧಿಸಿದ ಲಾಕ್​ಡೌನ್​ ನಮಗೆ ಅನ್ವಯಿಸಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಹೀಗೆ ಬೇಕಾಬಿಟ್ಟಿಯಾಗಿ ಓಡಾಡಿದ ವ್ಯಕ್ತಿಯೊಬ್ಬರನ್ನು ಪೊಲೀಸ್ ತಡೆಹಿಡಿದು ಪ್ರಶ್ನಿಸಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬರು ಬೈಕ್ನಲ್ಲಿ ಓಡಾಡುತ್ತಿದ್ದರು. ಈ ವೇಳೆ ಪೊಲೀಸರು ತಡೆದು ಪ್ರಶ್ನಿಸಿದಾಗ ವ್ಯಕ್ತಿ ಬಾಳೆಹಣ್ಣು ತರಬೇಕೆಂದು ನೆಪ ಹೇಳಿ ಪೇಚಿಗೆ ಸಿಲುಕಿದ್ದರು. ಒಂದೆರಡು ಬಾಳೆಹಣ್ಣು ತರಲು ಬೈಕಲ್ಲಿ ಬಂದಿದ್ದೀರಾ ಎಂದು ಪೊಲೀಸರು ಕೇಳಿದಾಗ ,ಇಲ್ಲ ಸರ್.. 1 ಕೆಜಿ ಬಾಳೆಹಣ್ಣು ಬೇಕಿತ್ತು ಎಂದ ವ್ಯಕ್ತಿ ಹೇಳಿದ್ದಾರೆ. 1 ಕೆಜಿ ಬಾಳೆಹಣ್ಣಿಗೆ ಬೈಕ್ ಏನಕ್ಕೆ ತಂದಿದ್ದೀರಿ ಎಂದು ಪೊಲೀಸರು ಗದರಿದರು. ಆ ಬಳಿಕ ಒಂದು ಗೊನೆ ಬಾಳೆಹಣ್ಣು ಬೇಕಿತ್ತು ಎಂದು ವ್ಯಕ್ತಿ ನೆಪ ಹೇಳಿದ್ದಾರೆ.

ನೆಂಟರ ಮನೆಗೆ ಹೋಗುವುದಕ್ಕೆ ಬಂದಿದ್ದ ವ್ಯಕ್ತಿ ಲಾಕ್ ಬೆಂಗಳೂರು: ರಾಜ್ಯದಲ್ಲಿ ಬಿಗಿ ಲಾಕ್​ಡೌನ್​ ಇದ್ದರೂ ವ್ಯಕ್ತಿ ತನ್ನ ಇಬ್ಬರು ಮಕ್ಕಳೊಂದಿಗೆ ನೆಂಟರ ಮನೆಗೆ ಹೋಗುವುದಕ್ಕೆ ರಾಮನಗರದಿಂದ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ವ್ಯಕ್ತಿಯನ್ನು ನೈಸ್ ಜಂಕ್ಷನ್ ಬಳಿ ಪೊಲೀಸರು ತಡೆದಿದ್ದಾರೆ. ನೀವೂ ಹೀಗೆ ಮನೆಯಿಂದ ಬೇಕಾಬಿಟ್ಟಿ ಬಂದರೆ ಅತ್ತ ಇಲ್ಲ ಇತ್ತ ಇಲ್ಲ ಆಗುತ್ತೀರಾ ಹುಷಾರ್ ಎಂದು ಪೊಲೀಸರು ಎಚ್ಚರಿಕೆ ನೀಡಿ ವ್ಯಕ್ತಿಯನ್ನು ರಾಮನಗರಕ್ಕೆ ವಾಪಾಸ್ ಕಳುಹಿಸಿದ್ದಾರೆ.

ಇದನ್ನೂ ಓದಿ

ಹೋಂ ಐಸೋಲೇಶನ್​ನಲ್ಲಿ ಇರುವವರು ಮತ್ತು ಅವರ ಮನೆಯವರು ಹೇಗಿರಬೇಕು? ಇಲ್ಲಿದೆ ಮಾರ್ಗಸೂಚಿ

ಇಂದಿನಿಂದ 14 ದಿನ ವಾಹನಗಳು ರಸ್ತೆಗಿಳಿಯುವಂತಿಲ್ಲ; ಲಸಿಕೆ ತೆಗೆದುಕೊಳ್ಳಲು ಹೋಗುವವರು ಮೆಸೇಜ್​ ತೋರಿಸಿದರೆ ಅನುಮತಿ

(Chikmagalur person is walking between lockdown and Police prevented man from walking)

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್