AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ನೆಪ ಹೇಳಿದ ತಪ್ಪಿಗೆ ಒಂದು ಗೊನೆ ಬಾಳೆಹಣ್ಣು ತೆಗೆದುಕೊಂಡು ಹೋದ ಚಿಕ್ಕಮಗಳೂರು ವ್ಯಕ್ತಿ

ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ವಿಧಿಸಿದ ಲಾಕ್​ಡೌನ್​ ನಮಗೆ ಅನ್ವಯಿಸಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಹೀಗೆ ಬೇಕಾಬಿಟ್ಟಿಯಾಗಿ ಓಡಾಡಿದ ವ್ಯಕ್ತಿಯೊಬ್ಬರನ್ನು ಪೊಲೀಸ್ ತಡೆಹಿಡಿದು ಪ್ರಶ್ನಿಸಿದ್ದಾರೆ.

Karnataka Lockdown: ನೆಪ ಹೇಳಿದ ತಪ್ಪಿಗೆ ಒಂದು ಗೊನೆ ಬಾಳೆಹಣ್ಣು ತೆಗೆದುಕೊಂಡು ಹೋದ ಚಿಕ್ಕಮಗಳೂರು ವ್ಯಕ್ತಿ
ಬಾಳೆಹಣ್ಣನ್ನು ಹೊತ್ತೊಯ್ಯುತ್ತಿರುವ ವ್ಯಕ್ತಿ
Follow us
sandhya thejappa
|

Updated on: May 10, 2021 | 8:44 AM

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಗಣನೀಯವಾಗಿ ಏರಿಯಾಗುತ್ತಿರುವ ಕಾರಣ ರಾಜ್ಯ ಸರ್ಕಾರ ಇಂದಿನಿಂದ (ಮೇ 10) ಲಾಕ್​ಡೌನ್​ ಜಾರಿಗೊಳಿಸಿದೆ. ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕೆಂದು ಸರ್ಕಾರ ತಿಳಿಸಿದೆ. ಆದರೆ ಜನರಿಗೆ ಮಾತ್ರ ಕೊರೊನಾ ಬಗ್ಗೆ ಇನ್ನೂ ನಿರ್ಲಕ್ಷ್ಯ ಮನೋಭಾವವನ್ನೆ ಹೊಂದಿದ್ದಾರೆ. ಬೇಕಾ ಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ವಿಧಿಸಿದ ಲಾಕ್​ಡೌನ್​ ನಮಗೆ ಅನ್ವಯಿಸಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಹೀಗೆ ಬೇಕಾಬಿಟ್ಟಿಯಾಗಿ ಓಡಾಡಿದ ವ್ಯಕ್ತಿಯೊಬ್ಬರನ್ನು ಪೊಲೀಸ್ ತಡೆಹಿಡಿದು ಪ್ರಶ್ನಿಸಿದ್ದಾರೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬರು ಬೈಕ್ನಲ್ಲಿ ಓಡಾಡುತ್ತಿದ್ದರು. ಈ ವೇಳೆ ಪೊಲೀಸರು ತಡೆದು ಪ್ರಶ್ನಿಸಿದಾಗ ವ್ಯಕ್ತಿ ಬಾಳೆಹಣ್ಣು ತರಬೇಕೆಂದು ನೆಪ ಹೇಳಿ ಪೇಚಿಗೆ ಸಿಲುಕಿದ್ದರು. ಒಂದೆರಡು ಬಾಳೆಹಣ್ಣು ತರಲು ಬೈಕಲ್ಲಿ ಬಂದಿದ್ದೀರಾ ಎಂದು ಪೊಲೀಸರು ಕೇಳಿದಾಗ ,ಇಲ್ಲ ಸರ್.. 1 ಕೆಜಿ ಬಾಳೆಹಣ್ಣು ಬೇಕಿತ್ತು ಎಂದ ವ್ಯಕ್ತಿ ಹೇಳಿದ್ದಾರೆ. 1 ಕೆಜಿ ಬಾಳೆಹಣ್ಣಿಗೆ ಬೈಕ್ ಏನಕ್ಕೆ ತಂದಿದ್ದೀರಿ ಎಂದು ಪೊಲೀಸರು ಗದರಿದರು. ಆ ಬಳಿಕ ಒಂದು ಗೊನೆ ಬಾಳೆಹಣ್ಣು ಬೇಕಿತ್ತು ಎಂದು ವ್ಯಕ್ತಿ ನೆಪ ಹೇಳಿದ್ದಾರೆ.

ನೆಂಟರ ಮನೆಗೆ ಹೋಗುವುದಕ್ಕೆ ಬಂದಿದ್ದ ವ್ಯಕ್ತಿ ಲಾಕ್ ಬೆಂಗಳೂರು: ರಾಜ್ಯದಲ್ಲಿ ಬಿಗಿ ಲಾಕ್​ಡೌನ್​ ಇದ್ದರೂ ವ್ಯಕ್ತಿ ತನ್ನ ಇಬ್ಬರು ಮಕ್ಕಳೊಂದಿಗೆ ನೆಂಟರ ಮನೆಗೆ ಹೋಗುವುದಕ್ಕೆ ರಾಮನಗರದಿಂದ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ವ್ಯಕ್ತಿಯನ್ನು ನೈಸ್ ಜಂಕ್ಷನ್ ಬಳಿ ಪೊಲೀಸರು ತಡೆದಿದ್ದಾರೆ. ನೀವೂ ಹೀಗೆ ಮನೆಯಿಂದ ಬೇಕಾಬಿಟ್ಟಿ ಬಂದರೆ ಅತ್ತ ಇಲ್ಲ ಇತ್ತ ಇಲ್ಲ ಆಗುತ್ತೀರಾ ಹುಷಾರ್ ಎಂದು ಪೊಲೀಸರು ಎಚ್ಚರಿಕೆ ನೀಡಿ ವ್ಯಕ್ತಿಯನ್ನು ರಾಮನಗರಕ್ಕೆ ವಾಪಾಸ್ ಕಳುಹಿಸಿದ್ದಾರೆ.

ಇದನ್ನೂ ಓದಿ

ಹೋಂ ಐಸೋಲೇಶನ್​ನಲ್ಲಿ ಇರುವವರು ಮತ್ತು ಅವರ ಮನೆಯವರು ಹೇಗಿರಬೇಕು? ಇಲ್ಲಿದೆ ಮಾರ್ಗಸೂಚಿ

ಇಂದಿನಿಂದ 14 ದಿನ ವಾಹನಗಳು ರಸ್ತೆಗಿಳಿಯುವಂತಿಲ್ಲ; ಲಸಿಕೆ ತೆಗೆದುಕೊಳ್ಳಲು ಹೋಗುವವರು ಮೆಸೇಜ್​ ತೋರಿಸಿದರೆ ಅನುಮತಿ

(Chikmagalur person is walking between lockdown and Police prevented man from walking)

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ