ಶರಣಾಗಿರುವ ನಕ್ಸಲರನ್ನು ವಶಕ್ಕೆ ಪಡೆದ ಚಿಕ್ಕಮಗಳೂರು ಪೊಲೀಸ್, ನಾಳೆ ಕೋರ್ಟ್ ಎದುರು ಹಾಜರು

ಅರುಣ್​ ಕುಮಾರ್​ ಬೆಳ್ಳಿ

Updated on: Jan 08, 2025 | 11:13 PM

ಶರಣಾಗಿರುವ ನಕ್ಸಲರಿಗೆ ಎಲ್ಲ ರೀತಿಯ ನೆರವು ಒದಗಿಸುವ ಭರವಸೆಯನ್ನು ಸಿದ್ದರಾಮಯ್ಯ ಸರ್ಕಾರ ನೀಡಿದೆ. ಬಹಳ ವರ್ಷಗಳ ನಂತರ ನಕ್ಸಲ್ ಪಡೆಯೊಂದು ಮುಖ್ಯವಾಹಿನಿಗೆ ಬರುವ ಉದ್ದೇಶದಿಂದ ಶರಣಾಗಿದೆ. ಶರಣಾಗಿರುವ ನಕ್ಸಲರಿಗೆ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಅಡಿ ತಲಾ ಮೂರು ಲಕ್ಷ ರೂ. ಸಹಾಯಧನ ನೀಡುವ ಘೋಷಣೆಯನ್ನು ಸರ್ಕಾರ ಮಾಡಿದೆ.

ಬೆಂಗಳೂರು: ಇಂದು ಸರ್ಕಾರಕ್ಕೆ ಶರಣಾಗಿರುವ 6 ನಕ್ಸಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುದ್ದಿಗೋಷ್ಠಿಯ ಬಳಿಕ ಚಿಕ್ಕಮಗಳೂರು ಪೊಲೀಸ್ ಮತ್ತು ಆ್ಯಂಟಿ ನಕ್ಸಲ್ ಫೋರ್ಸ್ ವಶಕ್ಕೆ ಪಡೆಯಿತು. ಪೊಲೀಸರ ವಶದಲ್ಲಿರುವ ನಕ್ಸಲರನ್ನು ಕಾರುಗಳಲ್ಲಿ ವಿಚಾರಣೆಗೆ ಕರೆದೊಯ್ಯುತ್ತಿರುವ ದೃಶ್ಯಗಳನ್ನು ಇಲ್ಲಿ ನೋಡಬಹುದು. ನಮಗೆ ಲಭ್ಯವಿರುವ ಮಾಹಿತಿ ಪ್ರಕಾರ ಶರಣಾಗಿರುವ ನಕ್ಸಲರನ್ನು ಸ್ವಲ್ಪ ಹೊತ್ತು ವಿಚಾರಣೆ ನಡೆಸಿ ನಾಳೆ (ಗುರುವಾರ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಸಶಸ್ತ್ರ ಹೋರಾಟಕ್ಕೆ ಧುಮುಕಿದ್ಯಾಕೆ? ಶರಣಾಗುತ್ತಿರುವ 6 ನಕ್ಸಲರ ಬಗ್ಗೆ ಒಂದಿಷ್ಟು ಮಾಹಿತಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.