ಜ್ಯೂಸ್ ಅಂದ್ಕೊಂಡು ಕಳೆನಾಶಕ ಕುಡಿದಿದ್ದ ಬಾಲಕ ಬೆಂಗಳೂರಿನಲ್ಲಿ ಸಾವು

ಚಿಕ್ಕಮಗಳೂರು: ಜ್ಯೂಸ್ ಎಂದು ತಿಳಿದು ಕಳೆನಾಶಕ ಸೇವಿಸಿದ್ದ ಮೂರು ವರ್ಷದ ಕಂದಮ್ಮ ಸಾವಿಗೀಡಾಗಿದ್ದಾನೆ. ಪ್ರವೀಣ್-ಪೂಜಿತಾ ದಂಪತಿಯ ಪುತ್ರ ಅಗಸ್ತ್ಯ(3) ಮೃತಪಟ್ಟ ಬಾಲಕ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವಿಗೀಡಾಗಿದ್ದಾನೆ. 18 ದಿನಗಳ ಚಿಕಿತ್ಸೆ ಫಲ ನೀಡಲಿಲ್ಲ: ಅಗಸ್ತ್ಯ, ಅಕ್ಟೋಬರ್​ 24ರಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಳೆನಾಶಕ ಸೇವಿಸಿದ್ದ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಜ್ಯೂಸ್ ಅಂದ್ಕೊಂಡು ಕಳೆನಾಶಕ ಕುಡಿದಿದ್ದ ಬಾಲಕ ಬೆಂಗಳೂರಿನಲ್ಲಿ ಸಾವು
ಸಾಧು ಶ್ರೀನಾಥ್​

Updated on: Nov 12, 2019 | 12:20 PM

ಚಿಕ್ಕಮಗಳೂರು: ಜ್ಯೂಸ್ ಎಂದು ತಿಳಿದು ಕಳೆನಾಶಕ ಸೇವಿಸಿದ್ದ ಮೂರು ವರ್ಷದ ಕಂದಮ್ಮ ಸಾವಿಗೀಡಾಗಿದ್ದಾನೆ. ಪ್ರವೀಣ್-ಪೂಜಿತಾ ದಂಪತಿಯ ಪುತ್ರ ಅಗಸ್ತ್ಯ(3) ಮೃತಪಟ್ಟ ಬಾಲಕ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವಿಗೀಡಾಗಿದ್ದಾನೆ.

18 ದಿನಗಳ ಚಿಕಿತ್ಸೆ ಫಲ ನೀಡಲಿಲ್ಲ:
ಅಗಸ್ತ್ಯ, ಅಕ್ಟೋಬರ್​ 24ರಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ಕಳೆನಾಶಕ ಸೇವಿಸಿದ್ದ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

Published On - 11:55 am, Tue, 12 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us