AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೆ ಅಲೆ ಸನಿಹವಾಗುತ್ತಿದೆ.. ಆದ್ರೆ ರಾಜ್ಯದಲ್ಲಿ ಮಕ್ಕಳಿಗೆ ಚಿಕಿತ್ಸೆಗೆ ವೈದ್ಯರ ಕೊರತೆ.. 6 ಸಾವಿರ ಮಕ್ಕಳಿಗೆ ಒಬ್ಬ ವೈದ್ಯ

ಸದ್ಯ 3 ಸಾವಿರ ಮಕ್ಕಳ ವೈದ್ಯರಿಂದ ನೋಂದಣಿ ಮಾಡಿಕೊಳ್ಳಲಾಗಿದೆ. ಮಕ್ಕಳಿಗೆ ಚಿಕಿತ್ಸೆ ನೀಡುವುದಕ್ಕೆ ಮಕ್ಕಳ ತಜ್ಞರ ಕೊರತೆ ಇದೆ. ರಾಜ್ಯದಲ್ಲಿ 18 ವರ್ಷದೊಳಗಿನ 2.38 ಕೋಟಿ ಮಕ್ಕಳಿದ್ದಾರೆ. ಇದರಲ್ಲಿ ಶೇಕಡಾ 1ರಷ್ಟು ಮಕ್ಕಳಿಗೆ ಸೋಂಕು ಹರಡಬಹುದು. ಸೋಂಕು ತೀವ್ರ ಸ್ವರೂಪ ಪಡೆದ್ರೆ 3 ಲಕ್ಷ ಕೇಸ್ ಆಗಬಹುದು.

ಮೂರನೆ ಅಲೆ ಸನಿಹವಾಗುತ್ತಿದೆ.. ಆದ್ರೆ ರಾಜ್ಯದಲ್ಲಿ ಮಕ್ಕಳಿಗೆ ಚಿಕಿತ್ಸೆಗೆ ವೈದ್ಯರ ಕೊರತೆ.. 6 ಸಾವಿರ ಮಕ್ಕಳಿಗೆ ಒಬ್ಬ ವೈದ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 23, 2021 | 8:30 AM

Share

ಬೆಂಗಳೂರು: ಇನ್ನೇನು ಏಳೆಂಟು ವಾರಗಳಲ್ಲಿ ಕೊರೊನಾ ಮೂರನೇ ಅಲೆ ಶುರುವಾಗಲಿದೆ ಎಂದು ತಜ್ಞರ ಸಲಹೆ ನೀಡಿದ್ದಾರೆ. ಮತ್ತೊಂದು ಕಡೆ ಶಾಲೆ ತೆರೆಯಲು ಸರ್ಕಾರ ಸಿದ್ಧತೆ ಶುರು ಮಾಡಿದೆ. ಆದರೆ ಇದರ ನಡುವೆ ಮತ್ತೊಂದು ದೊಡ್ಡ ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡುವುದಕ್ಕೆ ವೈದ್ಯರ ಕೊರತೆ ಉಂಟಾಗಿದೆ. WHO ಪ್ರಕಾರ 1 ಸಾವಿರ ಮಕ್ಕಳಿಗೆ ಒಬ್ಬ ವೈದ್ಯನಿರಬೇಕು. ಆದರೆ ರಾಜ್ಯದಲ್ಲಿ ಮಕ್ಕಳ ವೈದ್ಯರ ಕೊರತೆ ಹೆಚ್ಚಾಗಿದೆ. ಮಕ್ಕಳ ತಜ್ಞರ ಕೊರತೆ ಕಾಡ್ತಿದೆ.

ಸದ್ಯ 3 ಸಾವಿರ ಮಕ್ಕಳ ವೈದ್ಯರಿಂದ ನೋಂದಣಿ ಮಾಡಿಕೊಳ್ಳಲಾಗಿದೆ. ಮಕ್ಕಳಿಗೆ ಚಿಕಿತ್ಸೆ ನೀಡುವುದಕ್ಕೆ ಮಕ್ಕಳ ತಜ್ಞರ ಕೊರತೆ ಇದೆ. ರಾಜ್ಯದಲ್ಲಿ 18 ವರ್ಷದೊಳಗಿನ 2.38 ಕೋಟಿ ಮಕ್ಕಳಿದ್ದಾರೆ. ಇದರಲ್ಲಿ ಶೇಕಡಾ 1ರಷ್ಟು ಮಕ್ಕಳಿಗೆ ಸೋಂಕು ಹರಡಬಹುದು. ಸೋಂಕು ತೀವ್ರ ಸ್ವರೂಪ ಪಡೆದ್ರೆ 3 ಲಕ್ಷ ಕೇಸ್ ಆಗಬಹುದು. ನಾರ್ಮಲ್ ಇದ್ದರೆ 1.50 ಲಕ್ಷ ಪ್ರಕರಣಗಳು ಆಗಬಹುದು. ಕನಿಷ್ಠ ಅಂದ್ರೂ 50 ಸಾವಿರದಿಂದ 1 ಲಕ್ಷ ಕೇಸ್ ಆಗಬಹುದು. ಸದ್ಯದ ಅನುಪಾತ ನೋಡಿದ್ರೆ ರಾಜ್ಯದಲ್ಲಿ 6 ಸಾವಿರ ಮಕ್ಕಳಿಗೆ ಒಬ್ಬ ವೈದ್ಯ ಮಾತ್ರ ಇದ್ದಾರೆ. ಸಾವಿರ ಮಕ್ಕಳಿಗೆ ಒಬ್ಬ ವೈದ್ಯ ಇರುವಂತೆ ನೋಡಿಕೊಳ್ಳಬೇಕು. ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ವೈದ್ಯರಿಗೆ ತರಬೇತಿ ನೀಡಬೇಕು. ರಾಜ್ಯ ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿದೆ. ಇಲ್ಲದಿದ್ದರೆ ಮುಂದೆ ದೊಡ್ಡ ಅನಾಹುತ ಕಟ್ಟಿಟ್ಟ ಬುತ್ತಿ.

7-15 ದಿನಗಳ‌ ಕ್ರಾಶ್ ಕೋರ್ಸ್ ಆರಂಭಿಸಿ ಇತರ ವೈದ್ಯರನ್ನ ಚಿಕಿತ್ಸೆ ನೀಡಲು ತಯಾರು ಮಾಡಬೇಕಿದೆ. ಆಸ್ಪತ್ರೆಗಳಲ್ಲಿರುವ ಆಕ್ಸಿಜನ್ ಬೆಡ್ಗಳನ್ನ ICU ಮಾಡಬೇಕಿದೆ. 5000 ಮಕ್ಕಳ ICU ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಸೆಂಟಿನಲ್ ಸರ್ವೇ ಆರಂಭಿಸಲು ಆದೇಶಿಸುವಂತೆ ಸೂಚನೆ ಕೊಡಬೇಕು. ಮಕ್ಕಳು ಸೂಪರ್ ಸ್ಪ್ರೆಡರ್ಸ್ ಅಲ್ಲ, ಮಕ್ಕಳು ಕೊವಿಡ್ ಕ್ಯಾರಿಯರ್ಸ್ ಅಲ್ಲ. ಆದರೆ ಮಕ್ಕಳಿಗೆ ಸೋಂಕು ಬಂದರೆ ಮನೆಯವರಿಂದಲೇ ಬರಬಹುದಾದ ಸಾಧ್ಯತೆಯೇ ಹೆಚ್ಚಿದೆ. ಸದ್ಯ ಮಕ್ಕಳಿಗೆ ಸೋಂಕು ತಗುಲಿದರೂ ಅನಾಹುತ ಸೃಷ್ಟಿ ಮಾಡಿರೋದು ಕಡಿಮೆ.

ಮಕ್ಕಳಲ್ಲಿ ಆಗುತ್ತಿರುವ ಸಾವಿನ ಪ್ರಮಾಣ ಕೂಡ ಕಡಿಮೆ ಇದೆ. ಆದರೂ ಮುಂಜಾಗ್ರತೆ ದೃಷ್ಟಿಯಿಂದ ಒಂದಷ್ಟು ತಯಾರಿಗಳನ್ನ ಮಾಡಿಕೊಳ್ಳಬೇಕು . ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳುವ ಮುನ್ನವೇ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡು ಮುಂದುವರಿಯಬೇಕು.

ಇದನ್ನೂ ಓದಿ: ಒಂದೆಡೆ ಮೂರನೇ ಅಲೆ ಎಚ್ಚರಿಕೆ, ಮತ್ತೊಂಡೆ ಶಾಲೆ ಆರಂಭದ ಸಲಹೆ; ತಜ್ಞರ ವರದಿಯಿಂದ ಗೊಂದಲದಲ್ಲಿ ಸರ್ಕಾರ.. ಮುಂದೇನು?

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..