AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕರ್ ಮೂಲಕ ನೀರು ತುಂಬಿಸುವಾಗ ಸಂಪ್​ಗೆ ಬಿದ್ದ ಮಗು.. ಒಂದೂವರೆ ನಿಮಿಷದ ಬಳಿಕ ರಕ್ಷಣೆ

ನಿನ್ನೆ ಎಲೆಕ್ಟ್ರಾನಿಕ್ ಸಿಟಿ ಫೇಸ್ ಟು ಬಳಿ ಈ ಘಟನೆ ನಡೆದಿದೆ. ಸಾಯಿ ಬಾಲಾಜಿ ಆಂಧ್ರ ಮೆಸ್ ಹೋಟೆಲ್​ನ ಮುಂಭಾಗವಿದ್ದ ನೀರಿನ ಸಂಪ್​ಗೆ ಟ್ಯಾಂಕರ್ ಮೂಲಕ ನೀರು ತುಂಬಿಸಲಾಗುತ್ತಿತ್ತು. ಈ ವೇಳೆ ನಡೆದುಕೊಂಡು ಬಂದ ಪುಟ್ಟ ಮಗು ಓಪನ್ ಇದ್ದ ಸಂಪ್​ಗೆ ಬಿದ್ದಿದೆ.

ಟ್ಯಾಂಕರ್ ಮೂಲಕ ನೀರು ತುಂಬಿಸುವಾಗ ಸಂಪ್​ಗೆ ಬಿದ್ದ ಮಗು.. ಒಂದೂವರೆ ನಿಮಿಷದ ಬಳಿಕ ರಕ್ಷಣೆ
ಸಂಪ್​ಗೆ ಬಿದ್ದ ಮಗು
ಆಯೇಷಾ ಬಾನು
ಆಯೇಷಾ ಬಾನು|

Updated on:Apr 13, 2021 | 1:05 PM

Share

ಬೆಂಗಳೂರು: ಟ್ಯಾಂಕರ್ ನೀರು ಸಂಪಿಗೆ ತುಂಬಿಸುವಾಗ ಓಪನ್ ಇದ್ದ ಸಂಪ್​ಗೆ ಪುಟ್ಟ ಮಗು ಬಿದ್ದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. ಈ ಘಟನೆಯ ದೃಶ್ಯಗಳನ್ನು ನೋಡಿದ್ರೆ ಎಂತವರಿಗೂ ಆತಂಕವಾಗುತ್ತದೆ. ಹೊರಗಡೆ ಆಟವಾಡುತ್ತಿದ್ದ ಪುಟ್ಟ ಮಗು ಸಂಪ್ ತೆರೆದಿರುವುದನ್ನು ನೋಡದೆ ಸಂಪಿಗೆ ಬಿದ್ದಿದೆ. ಅದೃಷ್ಟವಶಾತ್ ತಕ್ಷಣವೇ ಮಗುವನ್ನು ಸಂಪಿನಿಂದ ಹೊರ ತೆಗೆದು ರಕ್ಷಣೆ ಮಾಡಲಾಗಿದೆ.

ನಿನ್ನೆ ಎಲೆಕ್ಟ್ರಾನಿಕ್ ಸಿಟಿ ಫೇಸ್ ಟು ಬಳಿ ಈ ಘಟನೆ ನಡೆದಿದೆ. ಸಾಯಿ ಬಾಲಾಜಿ ಆಂಧ್ರ ಮೆಸ್ ಹೋಟೆಲ್​ನ ಮುಂಭಾಗವಿದ್ದ ನೀರಿನ ಸಂಪ್​ಗೆ ಟ್ಯಾಂಕರ್ ಮೂಲಕ ನೀರು ತುಂಬಿಸಲಾಗುತ್ತಿತ್ತು. ಈ ವೇಳೆ ನಡೆದುಕೊಂಡು ಬಂದ ಪುಟ್ಟ ಮಗು ಓಪನ್ ಇದ್ದ ಸಂಪ್​ಗೆ ಬಿದ್ದಿದೆ. ಸಂಪ್ ರಸ್ತೆ ಬದಿ ಇದ್ದು ಅಕ್ಕ ಪಕ್ಕದಲ್ಲೇ ಜನ, ವಾಹನಗಳು ಓಡಾಡುತ್ತಿದ್ದವು. ಆದರೆ ಮಗು ಬಿದ್ದಿರುವುದು ಯಾರ ಗಮನಕ್ಕೂ ಬಂದಿಲ್ಲ. ಮಗು ಸಂಪ್​ಗೆ ಬಿದ್ದು ಸುಮಾರು ಒಂದೂವರೆ ನಿಮಿಷದ ನಂತರ ಮಗುವಿನ ತಂದೆ ಆಚೆ ಬಂದಿದ್ದಾರೆ. ಈ ವೇಳೆ ಮಗುವನ್ನು ಹುಡುಕಾಡುವಾಗ ಮಗು ಸಂಪಿಗೆ ಬಿದ್ದಿರುವುದು ಅರಿವಿಗೆ ಬಂದಿದೆ.

ಬಳಿಕ ತಕ್ಷಣ ಚಪ್ಪಲಿ ಬಿಚ್ಚಿ ಸಂಪ್​ನೊಳಗೆ ಇಳಿದಿದ್ದಾರೆ. ಮಗುವನ್ನ ಹೊರಕ್ಕೆ ತೆಗೆದಿದ್ದಾರೆ. ಇದೇ ವೇಳೆ ಮಗು ತಾಯಿ ಹೊರಕ್ಕೆ ಬಂದಿದ್ದು ಮಗುವನ್ನು ಎತ್ತಿಕೊಂಡು ಅದಕ್ಕೆ ಆರೈಕೆ ಮಾಡಿ ಮಗುವನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಮಗುವಿಗೆ ಪ್ರಾಣ ಹಾನಿ ಸಂಭವಿಸಿಲ್ಲ. ಚಿಕ್ಕ ಪುಟ್ಟ ಗಾಯಗಳಾಗಿವೆ. ನಿನ್ನೆ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Child Fall in open sump

ಸಂಪ್​ಗೆ ಬಿದ್ದ ಮಗು ರಕ್ಷಿಸಿದ ತಂದೆ

Child Fall in open sump

ಸಂಪ್​ಗೆ ಬಿದ್ದ ಮಗು

ಇದನ್ನೂ ಓದಿ: ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು

(Child Fall in Open Sump in Electronic City Bengaluru)

Published On - 11:14 am, Tue, 13 April 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು