AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕರ್ ಮೂಲಕ ನೀರು ತುಂಬಿಸುವಾಗ ಸಂಪ್​ಗೆ ಬಿದ್ದ ಮಗು.. ಒಂದೂವರೆ ನಿಮಿಷದ ಬಳಿಕ ರಕ್ಷಣೆ

ನಿನ್ನೆ ಎಲೆಕ್ಟ್ರಾನಿಕ್ ಸಿಟಿ ಫೇಸ್ ಟು ಬಳಿ ಈ ಘಟನೆ ನಡೆದಿದೆ. ಸಾಯಿ ಬಾಲಾಜಿ ಆಂಧ್ರ ಮೆಸ್ ಹೋಟೆಲ್​ನ ಮುಂಭಾಗವಿದ್ದ ನೀರಿನ ಸಂಪ್​ಗೆ ಟ್ಯಾಂಕರ್ ಮೂಲಕ ನೀರು ತುಂಬಿಸಲಾಗುತ್ತಿತ್ತು. ಈ ವೇಳೆ ನಡೆದುಕೊಂಡು ಬಂದ ಪುಟ್ಟ ಮಗು ಓಪನ್ ಇದ್ದ ಸಂಪ್​ಗೆ ಬಿದ್ದಿದೆ.

ಟ್ಯಾಂಕರ್ ಮೂಲಕ ನೀರು ತುಂಬಿಸುವಾಗ ಸಂಪ್​ಗೆ ಬಿದ್ದ ಮಗು.. ಒಂದೂವರೆ ನಿಮಿಷದ ಬಳಿಕ ರಕ್ಷಣೆ
ಸಂಪ್​ಗೆ ಬಿದ್ದ ಮಗು
ಆಯೇಷಾ ಬಾನು
|

Updated on:Apr 13, 2021 | 1:05 PM

Share

ಬೆಂಗಳೂರು: ಟ್ಯಾಂಕರ್ ನೀರು ಸಂಪಿಗೆ ತುಂಬಿಸುವಾಗ ಓಪನ್ ಇದ್ದ ಸಂಪ್​ಗೆ ಪುಟ್ಟ ಮಗು ಬಿದ್ದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. ಈ ಘಟನೆಯ ದೃಶ್ಯಗಳನ್ನು ನೋಡಿದ್ರೆ ಎಂತವರಿಗೂ ಆತಂಕವಾಗುತ್ತದೆ. ಹೊರಗಡೆ ಆಟವಾಡುತ್ತಿದ್ದ ಪುಟ್ಟ ಮಗು ಸಂಪ್ ತೆರೆದಿರುವುದನ್ನು ನೋಡದೆ ಸಂಪಿಗೆ ಬಿದ್ದಿದೆ. ಅದೃಷ್ಟವಶಾತ್ ತಕ್ಷಣವೇ ಮಗುವನ್ನು ಸಂಪಿನಿಂದ ಹೊರ ತೆಗೆದು ರಕ್ಷಣೆ ಮಾಡಲಾಗಿದೆ.

ನಿನ್ನೆ ಎಲೆಕ್ಟ್ರಾನಿಕ್ ಸಿಟಿ ಫೇಸ್ ಟು ಬಳಿ ಈ ಘಟನೆ ನಡೆದಿದೆ. ಸಾಯಿ ಬಾಲಾಜಿ ಆಂಧ್ರ ಮೆಸ್ ಹೋಟೆಲ್​ನ ಮುಂಭಾಗವಿದ್ದ ನೀರಿನ ಸಂಪ್​ಗೆ ಟ್ಯಾಂಕರ್ ಮೂಲಕ ನೀರು ತುಂಬಿಸಲಾಗುತ್ತಿತ್ತು. ಈ ವೇಳೆ ನಡೆದುಕೊಂಡು ಬಂದ ಪುಟ್ಟ ಮಗು ಓಪನ್ ಇದ್ದ ಸಂಪ್​ಗೆ ಬಿದ್ದಿದೆ. ಸಂಪ್ ರಸ್ತೆ ಬದಿ ಇದ್ದು ಅಕ್ಕ ಪಕ್ಕದಲ್ಲೇ ಜನ, ವಾಹನಗಳು ಓಡಾಡುತ್ತಿದ್ದವು. ಆದರೆ ಮಗು ಬಿದ್ದಿರುವುದು ಯಾರ ಗಮನಕ್ಕೂ ಬಂದಿಲ್ಲ. ಮಗು ಸಂಪ್​ಗೆ ಬಿದ್ದು ಸುಮಾರು ಒಂದೂವರೆ ನಿಮಿಷದ ನಂತರ ಮಗುವಿನ ತಂದೆ ಆಚೆ ಬಂದಿದ್ದಾರೆ. ಈ ವೇಳೆ ಮಗುವನ್ನು ಹುಡುಕಾಡುವಾಗ ಮಗು ಸಂಪಿಗೆ ಬಿದ್ದಿರುವುದು ಅರಿವಿಗೆ ಬಂದಿದೆ.

ಬಳಿಕ ತಕ್ಷಣ ಚಪ್ಪಲಿ ಬಿಚ್ಚಿ ಸಂಪ್​ನೊಳಗೆ ಇಳಿದಿದ್ದಾರೆ. ಮಗುವನ್ನ ಹೊರಕ್ಕೆ ತೆಗೆದಿದ್ದಾರೆ. ಇದೇ ವೇಳೆ ಮಗು ತಾಯಿ ಹೊರಕ್ಕೆ ಬಂದಿದ್ದು ಮಗುವನ್ನು ಎತ್ತಿಕೊಂಡು ಅದಕ್ಕೆ ಆರೈಕೆ ಮಾಡಿ ಮಗುವನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಮಗುವಿಗೆ ಪ್ರಾಣ ಹಾನಿ ಸಂಭವಿಸಿಲ್ಲ. ಚಿಕ್ಕ ಪುಟ್ಟ ಗಾಯಗಳಾಗಿವೆ. ನಿನ್ನೆ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Child Fall in open sump

ಸಂಪ್​ಗೆ ಬಿದ್ದ ಮಗು ರಕ್ಷಿಸಿದ ತಂದೆ

Child Fall in open sump

ಸಂಪ್​ಗೆ ಬಿದ್ದ ಮಗು

ಇದನ್ನೂ ಓದಿ: ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು

(Child Fall in Open Sump in Electronic City Bengaluru)

Published On - 11:14 am, Tue, 13 April 21

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್