AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾಥ ಮಕ್ಕಳ ಆಶ್ರಮಗಳಲ್ಲಿ ಅದ್ಧೂರಿ ಹುಟ್ಟುಹಬ್ಬಕ್ಕೆ ಬ್ರೇಕ್!

ತಮ್ಮ ತಮ್ಮ ಹುಟ್ಟುಹಬ್ಬವನ್ನು ಅನಾಥ ಮಕ್ಕಳ ಜೊತೆ ಸೇರಿ ಆಚರಿಸುತ್ತಿದ್ದರು. ಆದರೆ ಈ ಪದ್ಧತಿಗೆ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬ್ರೇಕ್ ಹಾಕಿದೆ.

ಅನಾಥ ಮಕ್ಕಳ ಆಶ್ರಮಗಳಲ್ಲಿ ಅದ್ಧೂರಿ ಹುಟ್ಟುಹಬ್ಬಕ್ಕೆ ಬ್ರೇಕ್!
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Oct 19, 2021 | 9:14 AM

Share

ಬೆಂಗಳೂರು: ಅನಾಥ ಮಕ್ಕಳ ಆಶ್ರಮಗಳಲ್ಲಿ ಅದ್ಧೂರಿ ಹುಟ್ಟುಹಬ್ಬ (Birthday) ಆಚರಣೆಗೆ ಮಕ್ಕಳ ರಕ್ಷಣಾ ನಿರ್ದೇಶನಾಲಯ (Child Protection Society) ಬ್ರೇಕ್ ಹಾಕಿದೆ. ಸೆಲೆಬ್ರೆಟಿಗಳು, ರಾಜಕಾರಣಿಗಳಿಂದ ಹೊಸ ಟ್ರೆಂಡ್ ಶುರುವಾಗಿತ್ತು. ತಮ್ಮ ತಮ್ಮ ಹುಟ್ಟುಹಬ್ಬವನ್ನು ಅನಾಥ ಮಕ್ಕಳ ಜೊತೆ ಸೇರಿ ಆಚರಿಸುತ್ತಿದ್ದರು. ಆದರೆ ಈ ಪದ್ಧತಿಗೆ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬ್ರೇಕ್ ಹಾಕಿದೆ. ಇನ್ನು ಮುಂದೆ ಈ ರೀತಿಯ ಆಚರಣೆ ಕಂಡು ಬಂದರೆ ಶಿಕ್ಷಾರ್ಹ ಅಪರಾಧವಾಗಿ ಘೋಷಣೆ ಮಾಡಲಾಗುತ್ತದೆ ಅಂತ ಮಕ್ಕಳ ರಕ್ಷಣಾ ನಿರ್ದೇಶನಾಲಯ ತಿಳಿಸಿದಿದೆ.

ಸೆಲೆಬ್ರಿಟಿಗಳು, ರಾಜಕಾರಣಿಗಳಿಂದ ಅದ್ಧೂರಿ ಬರ್ತ್‌ಡೇಯಿಂದ ಅನಾಥ ಮಕ್ಕಳ ಮನಸಿನಲ್ಲಿ ಅಸಮಾನತೆ ಮೂಡುತ್ತದೆ. ಮಕ್ಕಳ ಮನಸಿನಲ್ಲಿ ತಾವು ಕೀಳೆಂಬ ಭಾವನೆ ಬರಬಹುದು. ತಾರತಮ್ಯ ಭಾವನೆ ಹೆಚ್ಚಾಗಿ ಖಿನ್ನತೆಗೆ ಕಾರಣವಾಗಬಹುದು. ಹೀಗಾಗಿ ಆಶ್ರಮಗಳಲ್ಲಿ ಅದ್ಧೂರಿ ಬರ್ತ್‌ಡೇ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಇನ್ನು ಮುಂದೆ ಹೊರಗಿನಿಂದ ಬಂದು ಹುಟ್ಟುಹಬ್ಬವನ್ನು ಆಚರಿಸುವಂತಿಲ್ಲ. ಅದ್ಧೂರಿ ಹುಟ್ಟುಹಬ್ಬ ಆಚರಿಸಿದರೆ ಶಿಕ್ಷಾರ್ಹ ಅಪರಾಧವಾಗುತ್ತದೆ.

ಸೆಲೆಬ್ರೆಟಿಗಳು ಮತ್ತು ರಾಜಕಾರಣಿಗಳು ಅನಾಥ ಮಕ್ಕಳ ಜೊತೆ ಕೇಕ್ ಕತ್ತರಿಸಿ ಸಂಭ್ರಮದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ದಿನೇ ದಿನೇ ಟ್ರೆಂಡ್ ಆಗುತ್ತಿರುವ ಈ ಪದ್ಧತಿಗೆ ಬ್ರೇಕ್ ಬಿದ್ದಿದೆ. ಅನಾಥ ಮಕ್ಕಳು, ಬಾಲಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ ಮಕ್ಕಳು, ಭಿಕ್ಷಾಟನೆಯಿಂದ ಹೊರಬಂದ ಮಕ್ಕಳು, ಬಾಲ್ಯವಿವಾಹಕ್ಕೆ ಒಳಗಾಗಿ ರಕ್ಷಿಸಲ್ಪಟ್ಟ ಮಕ್ಕಳು, ಮಾನಸಿಕ ಅಸ್ವಸ್ಥ ಮಕ್ಕಳು ಸೇರಿ ಅಬಲ ಮಕ್ಕಳ ಜೊತೆಗೆ ಇನ್ನು ಮುಂದೆ ಹುಟ್ಟುಹಬ್ಬ ಆಚರಿಸುವಂತಿಲ್ಲ.

ಅದ್ಧೂರಿ ಬರ್ತ್‌ಡೇ ಬಗ್ಗೆ ಮಕ್ಕಳ ರಕ್ಷಣಾ ನಿರ್ದೇಶನಾಯ ಸೂಕ್ಷ್ಮವಾಗಿ ಗಮನಿಸಿ ಈ ನಿರ್ಧಾರ ಕೈಗೊಂಡಿದೆ. ಹುಟ್ಟುಹಬ್ಬವನ್ನು ಅನಾಥ ಮಕ್ಕಳ ಜೊತೆ ಆಚರಿಸಿಕೊಳ್ಳುವುದರಿಂದ ಮಕ್ಕಳ ಮನಸಲ್ಲಿ ಅಸಮಾನತೆ ಮೂಡುತ್ತದೆ. ಮಕ್ಕಳ ಮನಸ್ಸಿನಲ್ಲಿ ನಾವು ಕೀಳು ಎಂಬ ಭಾವನೆಯೂ ಬರಬಹುದು. ಹೀಗಾಗಿ ಮಕ್ಕಳ ರಕ್ಷಣಾ ನಿರ್ದೇಶನಾಯ ಈ ನಿರ್ಧಾರ ತೆಗೆದುಕೊಂಡಿದೆ.

ಇದನ್ನೂ ಓದಿ

ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್​ಐಆರ್ ದಾಖಲು, ಆರೋಪಿ ನಾಪತ್ತೆ

ಎಎಸ್ಐ ಮತ್ತು ಪುತ್ರನಿಂದ ಹಲ್ಲೆ ಆರೋಪ; ಮಗಳನ್ನು ಕಿಡ್ನಾಪ್ ಮಾಡಲು ಬಂದಿದ್ದಾರೆಂದು ಹಿಗ್ಗಾಮುಗ್ಗಾ ಥಳಿತ

Published On - 8:59 am, Tue, 19 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ