AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಕೇಸ್: ಬಂಧಿತ ಕಿಂಗ್ ಪಿನ್ ಅಬ್ದುಲ್ ಅಸಲಿಗೆ ವೈದ್ಯನೇ ಅಲ್ಲ

ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಕುರಿತಾಗಿ ಟಿವಿ9 ವರದಿ ಬೆನ್ನಲ್ಲೇ ಸ್ಥಳಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಎಸ್​​ಎಸ್​ ಸಿದ್ದನ್ನವರ್ ಭೇಟಿ ನೀಡಿದರು. ಕಿತ್ತೂರಿನ ಸೋಮವಾರಪೇಟೆಯಲ್ಲಿರುವ ಅಬ್ದುಲ್ ಕ್ಲಿನಿಕ್​ಗೆ ಭೇಟಿ ನೀಡಿ ವಿಚಾರಣೆ ಮಾಡಿದ್ದಾರೆ. ಅಧಿಕಾರಿಗಳು ಕೇಳಿದಾಗ ಹೆಂಡತಿ ಫರಹತ್ ಲಾಡಖಾನ್ ಹೆಸರು ಹೇಳಿದ್ದಾರೆ. ಆಕೆಯದ್ದು ಬಿ ಎಚ್​ಎಂಎಸ್​ ಆಗಿದೆ ಕ್ಲಿನಿಕ್ ಅನುಮತಿಗಾಗಿ ಅರ್ಜಿ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಕೇಸ್: ಬಂಧಿತ ಕಿಂಗ್ ಪಿನ್ ಅಬ್ದುಲ್ ಅಸಲಿಗೆ ವೈದ್ಯನೇ ಅಲ್ಲ
ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಕೇಸ್: ಬಂಧಿತ ಕಿಂಗ್ ಪಿನ್ ಅಬ್ದುಲ್ ಅಸಲಿಗೆ ವೈದ್ಯನೇ ಅಲ್ಲ
ಸಹದೇವ್​ ಮಾನೆ
| Edited By: |

Updated on: Jun 10, 2024 | 3:10 PM

Share

ಬೆಳಗಾವಿ, ಜೂನ್​ 10: ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ ಪ್ರಕರಣದಲ್ಲಿ (Child Trafficking) ಈಗಾಗಲೇ ಪೊಲೀಸರು ವೈದ್ಯ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆದರೆ ಅಸಲಿಗೆ ಬಂಧಿತ ವೈದ್ಯ ಕಿಂಗ್​ಪಿನ್ (Kingpin) ಅಬ್ದುಲ್ ಗಫರ್ ಲಾಡಖಾನ್ ವೈದ್ಯನೇ ಅಲ್ಲ. ಯಾವುದೇ ಅನುಮತಿ ಪಡೆಯದೆ ಕಳೆದ 10 ವರ್ಷಗಳಿಂದ ಕಿತ್ತೂರು ಪಟ್ಟಣದಲ್ಲಿ ಆರ್‌ಎಂಪಿ ವೈದ್ಯ ಎಂದು ಹೇಳಿಕೊಂಡು ಕ್ಲಿನಿಕ್ ನಡೆಸುತ್ತಿದ್ದ. ಈತನ ಬಗ್ಗೆ ಹಲವು ಬಾರಿ ಸ್ಥಳೀಯರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇನ್ನು ಮಕ್ಕಳ ಮಾರಾಟ ಅಷ್ಟೇ ಅಲ್ಲದೇ ಭ್ರೂಣಹತ್ಯೆ ಕೂಡ ಮಾಡಿದ್ದಾಗಿ ಮಾಹಿತಿ ಇದೆ.

ಪ್ರಕರಣ ಕುರಿತಾಗಿ ಟಿವಿ9 ವರದಿ ಬೆನ್ನಲ್ಲೇ ಸ್ಥಳಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಎಸ್​​ಎಸ್​ ಸಿದ್ದನ್ನವರ್ ಭೇಟಿ ನೀಡಿದರು. ಕಿತ್ತೂರಿನ ಸೋಮವಾರಪೇಟೆಯಲ್ಲಿರುವ ಅಬ್ದುಲ್ ಕ್ಲಿನಿಕ್​ಗೆ ಭೇಟಿ ನೀಡಿ ವಿಚಾರಣೆ ಮಾಡಿದ್ದಾರೆ. ಅಧಿಕಾರಿಗಳು ಕೇಳಿದಾಗ ಹೆಂಡತಿ ಫರಹತ್ ಲಾಡಖಾನ್ ಹೆಸರು ಹೇಳಿದ್ದಾರೆ. ಆಕೆಯದ್ದು ಬಿ ಎಚ್​ಎಂಎಸ್​ ಆಗಿದೆ ಕ್ಲಿನಿಕ್ ಅನುಮತಿಗಾಗಿ ಅರ್ಜಿ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ; ವೈದ್ಯ ಸೇರಿ ಐವರು ಅರೆಸ್ಟ್

ಇನ್ನು ತಾಲೂಕು ಆರೋಗ್ಯಾಧಿಕಾರಿಗೆ ಸ್ಥಳೀಯ ನಿವಾಸಿಗಳಿಂದ ತರಾಟೆ ತೆಗೆದುಕೊಳ್ಳಲಾಗಿದೆ. ಇವನಿಗೆ ಅನುಮತಿ ಹೇಗೆ ‌ಕೊಟ್ಟಿದ್ದೀರಿ. ನಕಲಿ ವೈದ್ಯನ ಮನೆ ಹರಾಜು ಹಾಕುವಂತೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ಅಬ್ದುಲ್ ಲಾಡಖಾನ್​ನ್ನು ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಕಿಂಗ್​ಪಿನ್ ಡಾ.ಅಬ್ದುಲ್ ಲಾಡಖಾನ್, ನೇಗಿನಹಾಳ ಗ್ರಾಮದ ಮಹಾದೇವಿ ಜೈನ್, ಚಂದನ ಸುಬೇದಾರ್, ಪವಿತ್ರಾ ಹಾಗೂ ಪ್ರವೀಣ್​ನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹೇಳಿದ್ದಿಷ್ಟು 

ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ್ದು, ಜೂನ್ 9 ರಂದು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಒಂದು ಮಗುವನ್ನ ನಾವು ರಕ್ಷಣೆ ಮಾಡಿದ್ದೇವೆ. ಪ್ರಕರಣ ಎ1 ಆರೋಪಿ ಮಗುವನ್ನ ಬೆಳಗಾವಿ ತಗೊಂಡು ಬರುವಾಗ ರಕ್ಷಣೆ ಮಾಡಿದ್ದೇವೆ. ಎ1 ಆರೋಪಿ ನರ್ಸಿಂಗ್ ಕೆಲಸ ಮಾಡುತ್ತಿದ್ದಾರೆ.

ಎ2 ಆರೋಪಿ ತನ್ನ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿದ್ದಾನೆ. ಆರೋಪಿ ಹೋಮಿಯೋಪಥಿ ಡಾಕ್ಟರ್ ಅಂತಾ ಹೇಳಿದ್ದಾನೆ. ಈ ಪ್ರಕರಣವನ್ನ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಅರೆಸ್ಟ್ ಆದ ನಾಲ್ವರು ಆರೋಪಿಗಳ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದೇವೆ. ಇದರಲ್ಲಿ ಮಗುವಿನ ತಂದೆ, ತಾಯಿ ಸಹ ಅರೆಸ್ಟ್ ಮಾಡಲಾಗಿದೆ. ಹಣಕ್ಕೆ ಮಾರಾಟ ಮಾಡಲು ಯತ್ನಿಸಿದ್ದಾರೆ. 60 ಸಾವಿರ‌ದಿಂದ ಒಂದೂವರೆ ಲಕ್ಷ ರೂ. ಮಗುವನ್ನ ಮಾರಾಟಕ್ಕೆ ಯತ್ನಿಸಿದ್ದಾರೆ. ಪ್ರಕರಣದ ಪೂರ್ಣ ತನಿಖೆ ಬಳಿಕವೇ ಅಸಲಿ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ