AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆ: ಮಕ್ಕಳ ಬಗ್ಗೆ ಇರಲಿ ಎಚ್ಚರ, ಬೆಂಗಳೂರಿನಲ್ಲಿ ಕೊರೊನಾಗೆ ಚಿಕ್ಕ ಚಿಕ್ಕ ಮಕ್ಕಳು ಗುರಿ

ಎರಡನೇ ಅಲೆಯ ಕೊರೊನಾ ಭೀತಿ ಮಕ್ಕಳಲ್ಲಿ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ 163 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರು: ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಈಗಾಗಲೇ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸರ್ಕಾರ ಮುಂದಾಗಿದೆ. ಲಾಕ್​ಡೌನ್ ಆಗುವ ಸಾಧ್ಯತೆಗಳು ಕೂಡ ಇದೆ ಎಂಬ ಮಾತುಗಳು ಕೇಳಿ ಬಂದರು ಸದ್ಯದ ಮಟ್ಟಿಗೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯವನ್ನಷ್ಟೇ ಸರ್ಕಾರ ಸೂಚಿಸಿದೆ. ಅದರೆ ಈ ಎರಡನೇ ಅಲೆಯ ಕೊರೊನಾ ಭೀತಿ ಮಕ್ಕಳಲ್ಲಿ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ 163 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಎರಡನೇ ಅಲೆ: ಮಕ್ಕಳ ಬಗ್ಗೆ ಇರಲಿ ಎಚ್ಚರ, ಬೆಂಗಳೂರಿನಲ್ಲಿ ಕೊರೊನಾಗೆ ಚಿಕ್ಕ ಚಿಕ್ಕ ಮಕ್ಕಳು ಗುರಿ
ಪ್ರಾತಿನಿಧಿಕ ಚಿತ್ರ
preethi shettigar
| Edited By: |

Updated on:Jul 06, 2026 | 10:38 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಈಗಾಗಲೇ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸರ್ಕಾರ ಮುಂದಾಗಿದೆ. ಲಾಕ್​ಡೌನ್ ಆಗುವ ಸಾಧ್ಯತೆಗಳು ಕೂಡ ಇದೆ ಎಂಬ ಮಾತುಗಳು ಕೇಳಿ ಬಂದರು ಸದ್ಯದ ಮಟ್ಟಿಗೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯವನ್ನಷ್ಟೇ ಸರ್ಕಾರ ಸೂಚಿಸಿದೆ. ಅದರೆ ಈ ಎರಡನೇ ಅಲೆಯ ಕೊರೊನಾ ಭೀತಿ ಮಕ್ಕಳಲ್ಲಿ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ 163 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಹೀಗಾಗಿ ಮಕ್ಕಳನ್ನು ಮನೆಯಿಂದ ಹೊರಗೆ ಕರೆದುಕೊಂಡು ಬರುವಾಗ ಪೋಷಕರು ಹೆಚ್ಚಿನ ಮುಂಜಾಗೃತ ಕ್ರಮವನ್ನು ಅನುಸರಿಸುವುದು ಅನಿವಾರ್ಯವಾಗಿದೆ. ನಿನ್ನೆ ಒಂದೇ ದಿನ10 ವರ್ಷದೊಳಗಿನ 32 ಮಕ್ಕಳಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಮಕ್ಕಳ ಮೇಲೆ ಎರಡನೇ ಅಲೆ ಹೆಚ್ಚು ಪರಿಣಾಮಕಾರಿಯಾದ ಪರಿಣಾಮ ಬೀರುತ್ತಿದೆ.

ಕಳೆದ ವಾರ ಮಕ್ಕಳಲ್ಲಿ ಸೋಂಕು ದೃಢ:

    • ಸೋಮವಾರ 16 ಮಕ್ಕಳಿಗೆ ಸೋಂಕು ದೃಢ
    • ಮಂಗಳವಾರ 12 ಮಕ್ಕಳಿಗೆ ಸೋಂಕು
    • ಬುಧವಾರ 20 ಮಕ್ಕಳಿಗೆ ಕೊರೊನಾ ಸೋಂಕು ದೃಢ
    • ಗುರುವಾರ 20 ಮಕ್ಕಳಿಗೆ ಸೋಂಕು ‌ದೃಢ
    • ಶುಕ್ರವಾರ 30 ಮಕ್ಕಳಿಗೆ ಕೊರೊನಾ ಸೋಂಕು ದೃಢ
    • ಶನಿವಾರ 33 ಮಕ್ಕಳಿಗೆ ಸೋಂಕು ದೃಢ
    • ಭಾನುವಾರ 32 ಮಕ್ಕಳಿಗೆ ಸೋಂಕು ದೃಢ ಪಟ್ಟಿದೆ

ರಾಜ್ಯದಲ್ಲಿ ಕೊವಿಡ್‌ಗೆ ಈವರೆಗೆ ಒಟ್ಟು 12,434 ಜನರು ಬಲಿಯಾಗಿದ್ದಾರೆ.‌ ಬೆಂಗಳೂರಿನಲ್ಲಿ ಈವರೆಗೆ ಒಟ್ಟು 4,550 ಜನರು ಕೊರೊನಾ‌ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರಲ್ಲಿ 70 ವರ್ಷ ಮೇಲ್ಪಟ್ಟವರೇ ಹೆಚ್ಚಾಗಿದ್ದು, ಅವರಲ್ಲಿ 70 ವರ್ಷ ಮೇಲ್ಪಟ್ಟವರು 1,475 ಜನ, 60 ವರ್ಷ ಮೇಲ್ಪಟ್ಟವರು 1,222 ಜನರು ಹಾಗೂ 50 ವರ್ಷ ಮೇಲ್ಪಟ್ಟವರು 981 ಜನರಾಗಿದ್ದಾರೆ.

ಇನ್ನು, 40 ವರ್ಷ ಮೇಲ್ಪಟ್ಟ 499 ಜನರು, 30 ವರ್ಷ ಮೇಲ್ಪಟ್ಟವರಲ್ಲಿ 218 ಜನರು, 20 ವರ್ಷ ಮೇಲ್ಪಟ್ಟವರಲ್ಲಿ 89 ಜನರು ಹಾಗೂ 10 ವರ್ಷ ಮೇಲ್ಪಟ್ಟವರಲ್ಲಿ 18 ಜನರು ಕೊವಿಡ್‌ಗೆ ಬಲಿಯಾಗಿದ್ದಾರೆ. 9 ವರ್ಷದೊಳಗಿನ 10 ಮಕ್ಕಳು ಕೊವಿಡ್‌ಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್ ಏರಿಕೆ ಹೆಚ್ಚಳ ಹಿನ್ನೆಲೆಯಲ್ಲಿ, ಗಮನಿಸಿದರೆ ಮಾರ್ಚ್ ಅಂತ್ಯದೊಳಗೆ ನಿತ್ಯ ಎರಡು ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಅಂದಾಜಿಸಿದೆ.

ಮಾರ್ಚ್ 1 ನೇ ತಾರೀಕು 240ರ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ ಇದೀಗ ಪ್ರತಿ ನಿತ್ಯ 1 ಸಾವಿರ ಕೇಸ್​ಗಳು ಪತ್ತೆಯಾಗುತ್ತಿವೆ. ಮೊನ್ನೆವರೆಗೂ ಸೋಂಕಿತರಿಗಾಗಿ 340 ಬೆಡ್​ಗಳನ್ನ ಮಾತ್ರ ಮೀಸಲಿಡಲಾಗಿತ್ತು. ಇದೀಗ ವಿಕ್ಟೋರಿಯಾ ಸಿ.ವಿ ರಾಮನ್ ಆಸ್ಪತ್ರೆ ಸೇರಿದಂತೆ ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ಸಾವಿರ ಬೆಡ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:

Coronavirus Case Updates: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾರ್ಭಟ; ಒಂದು ದಿನದಲ್ಲಿ 35 ಸಾವಿರ ಕೇಸ್​ಗಳು ದಾಖಲು..ಮತ್ತೆ ಅಪಾಯದಲ್ಲಿ ಮಹಾರಾಷ್ಟ್ರ

Published On - 12:39 pm, Mon, 22 March 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ