Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆ: ಮಕ್ಕಳ ಬಗ್ಗೆ ಇರಲಿ ಎಚ್ಚರ, ಬೆಂಗಳೂರಿನಲ್ಲಿ ಕೊರೊನಾಗೆ ಚಿಕ್ಕ ಚಿಕ್ಕ ಮಕ್ಕಳು ಗುರಿ

ಎರಡನೇ ಅಲೆಯ ಕೊರೊನಾ ಭೀತಿ ಮಕ್ಕಳಲ್ಲಿ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ 163 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಎರಡನೇ ಅಲೆ: ಮಕ್ಕಳ ಬಗ್ಗೆ ಇರಲಿ ಎಚ್ಚರ, ಬೆಂಗಳೂರಿನಲ್ಲಿ ಕೊರೊನಾಗೆ ಚಿಕ್ಕ ಚಿಕ್ಕ ಮಕ್ಕಳು ಗುರಿ
ಪ್ರಾತಿನಿಧಿಕ ಚಿತ್ರ
Follow us
preethi shettigar
| Updated By: shruti hegde

Updated on:Mar 22, 2021 | 12:45 PM

ಬೆಂಗಳೂರು: ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಈಗಾಗಲೇ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಸರ್ಕಾರ ಮುಂದಾಗಿದೆ. ಲಾಕ್​ಡೌನ್ ಆಗುವ ಸಾಧ್ಯತೆಗಳು ಕೂಡ ಇದೆ ಎಂಬ ಮಾತುಗಳು ಕೇಳಿ ಬಂದರು ಸದ್ಯದ ಮಟ್ಟಿಗೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯವನ್ನಷ್ಟೇ ಸರ್ಕಾರ ಸೂಚಿಸಿದೆ. ಅದರೆ ಈ ಎರಡನೇ ಅಲೆಯ ಕೊರೊನಾ ಭೀತಿ ಮಕ್ಕಳಲ್ಲಿ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ 163 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಹೀಗಾಗಿ ಮಕ್ಕಳನ್ನು ಮನೆಯಿಂದ ಹೊರಗೆ ಕರೆದುಕೊಂಡು ಬರುವಾಗ ಪೋಷಕರು ಹೆಚ್ಚಿನ ಮುಂಜಾಗೃತ ಕ್ರಮವನ್ನು ಅನುಸರಿಸುವುದು ಅನಿವಾರ್ಯವಾಗಿದೆ. ನಿನ್ನೆ ಒಂದೇ ದಿನ10 ವರ್ಷದೊಳಗಿನ 32 ಮಕ್ಕಳಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಮಕ್ಕಳ ಮೇಲೆ ಎರಡನೇ ಅಲೆ ಹೆಚ್ಚು ಪರಿಣಾಮಕಾರಿಯಾದ ಪರಿಣಾಮ ಬೀರುತ್ತಿದೆ.

ಕಳೆದ ವಾರ ಮಕ್ಕಳಲ್ಲಿ ಸೋಂಕು ದೃಢ:

    • ಸೋಮವಾರ 16 ಮಕ್ಕಳಿಗೆ ಸೋಂಕು ದೃಢ
    • ಮಂಗಳವಾರ 12 ಮಕ್ಕಳಿಗೆ ಸೋಂಕು
    • ಬುಧವಾರ 20 ಮಕ್ಕಳಿಗೆ ಕೊರೊನಾ ಸೋಂಕು ದೃಢ
    • ಗುರುವಾರ 20 ಮಕ್ಕಳಿಗೆ ಸೋಂಕು ‌ದೃಢ
    • ಶುಕ್ರವಾರ 30 ಮಕ್ಕಳಿಗೆ ಕೊರೊನಾ ಸೋಂಕು ದೃಢ
    • ಶನಿವಾರ 33 ಮಕ್ಕಳಿಗೆ ಸೋಂಕು ದೃಢ
    • ಭಾನುವಾರ 32 ಮಕ್ಕಳಿಗೆ ಸೋಂಕು ದೃಢ ಪಟ್ಟಿದೆ

ರಾಜ್ಯದಲ್ಲಿ ಕೊವಿಡ್‌ಗೆ ಈವರೆಗೆ ಒಟ್ಟು 12,434 ಜನರು ಬಲಿಯಾಗಿದ್ದಾರೆ.‌ ಬೆಂಗಳೂರಿನಲ್ಲಿ ಈವರೆಗೆ ಒಟ್ಟು 4,550 ಜನರು ಕೊರೊನಾ‌ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರಲ್ಲಿ 70 ವರ್ಷ ಮೇಲ್ಪಟ್ಟವರೇ ಹೆಚ್ಚಾಗಿದ್ದು, ಅವರಲ್ಲಿ 70 ವರ್ಷ ಮೇಲ್ಪಟ್ಟವರು 1,475 ಜನ, 60 ವರ್ಷ ಮೇಲ್ಪಟ್ಟವರು 1,222 ಜನರು ಹಾಗೂ 50 ವರ್ಷ ಮೇಲ್ಪಟ್ಟವರು 981 ಜನರಾಗಿದ್ದಾರೆ.

ಇನ್ನು, 40 ವರ್ಷ ಮೇಲ್ಪಟ್ಟ 499 ಜನರು, 30 ವರ್ಷ ಮೇಲ್ಪಟ್ಟವರಲ್ಲಿ 218 ಜನರು, 20 ವರ್ಷ ಮೇಲ್ಪಟ್ಟವರಲ್ಲಿ 89 ಜನರು ಹಾಗೂ 10 ವರ್ಷ ಮೇಲ್ಪಟ್ಟವರಲ್ಲಿ 18 ಜನರು ಕೊವಿಡ್‌ಗೆ ಬಲಿಯಾಗಿದ್ದಾರೆ. 9 ವರ್ಷದೊಳಗಿನ 10 ಮಕ್ಕಳು ಕೊವಿಡ್‌ಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್ ಏರಿಕೆ ಹೆಚ್ಚಳ ಹಿನ್ನೆಲೆಯಲ್ಲಿ, ಗಮನಿಸಿದರೆ ಮಾರ್ಚ್ ಅಂತ್ಯದೊಳಗೆ ನಿತ್ಯ ಎರಡು ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಅಂದಾಜಿಸಿದೆ.

ಮಾರ್ಚ್ 1 ನೇ ತಾರೀಕು 240ರ ಆಸುಪಾಸಿನಲ್ಲಿದ್ದ ಸೋಂಕಿತರ ಸಂಖ್ಯೆ ಇದೀಗ ಪ್ರತಿ ನಿತ್ಯ 1 ಸಾವಿರ ಕೇಸ್​ಗಳು ಪತ್ತೆಯಾಗುತ್ತಿವೆ. ಮೊನ್ನೆವರೆಗೂ ಸೋಂಕಿತರಿಗಾಗಿ 340 ಬೆಡ್​ಗಳನ್ನ ಮಾತ್ರ ಮೀಸಲಿಡಲಾಗಿತ್ತು. ಇದೀಗ ವಿಕ್ಟೋರಿಯಾ ಸಿ.ವಿ ರಾಮನ್ ಆಸ್ಪತ್ರೆ ಸೇರಿದಂತೆ ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ಸಾವಿರ ಬೆಡ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:

Corona Cases and Lockdown News LIVE: ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ: ಸಚಿವ ಡಾ. ಸುಧಾಕರ್

Coronavirus Case Updates: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾರ್ಭಟ; ಒಂದು ದಿನದಲ್ಲಿ 35 ಸಾವಿರ ಕೇಸ್​ಗಳು ದಾಖಲು..ಮತ್ತೆ ಅಪಾಯದಲ್ಲಿ ಮಹಾರಾಷ್ಟ್ರ

Published On - 12:39 pm, Mon, 22 March 21

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ