AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!

ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ.

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!
ಬಿಸಿಯೂಟ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 08, 2021 | 1:55 PM

Share

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವಂತೆ ಸರ್ಕಾರ ಸೂಚಿಸಿದೆ. ಆದರೆ ಬೆಲೆ ಏರಿಕೆ ಬಿಸಿ ಶಾಲೆಗಳಲ್ಲಿ ಮಕ್ಕಳ ಬಿಸಿಯೂಟಕ್ಕೂ ತಟ್ಟಿದ್ದು, ಸರ್ಕಾರ ನಿಗದಿ ಪಡಿಸಿರುವ ಹಣದಲ್ಲಿ ಮಕ್ಕಳಿಗೆ ರುಚಿರುಚಿಯಾದ ಅಡುಗೆ ಮಾಡುವುದು ಕಷ್ಟವಾಗಿದೆ. ಮಕ್ಕಳಿಗೆ ಅನ್ನ, ಸಾಂಬಾರ್, ಬಿಸಿಬೇಳೆ ಬಾತ್, ಉಪ್ಪಿಟ್ಟು, ಪಲಾವ್ ಸೇರಿದಂತೆ ವಿವಿಧ ಖಾದ್ಯಗಳನ್ನ ತಯಾರಿಸಬೇಕು. ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ.

ಮಕ್ಕಳ ವಯಸ್ಸಿನ ಆಧಾರದ ಮೇಲೆ ಸರ್ಕಾರ ಹಣ ನಿಗದಿ ಪಡಿಸಿದೆ. 1ರಿಂದ 5ನೇ ತರಗತಿ ಮಕ್ಕಳಿಗೆ 4.97 ರೂಪಾಯಿ, 6ರಿಂದ 8ನೇ ತರಗತಿಯ ಮಕ್ಕಳಿಗೆ 7.45 ರೂಪಾಯಿ, 9ರಿಂದ 10ನೇ ತರಗತಿ ಮಕ್ಕಳಿಗೆ 11.41 ರೂ. ಹಣವನ್ನು ಸರ್ಕಾರ ನಿಗದಿ ಪಡಿಸಿದೆ. ಆದರೆ ಇದೀಗ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆ ಸರ್ಕಾರ ನೀಡುವ ಹಣದಲ್ಲಿ ಮಕ್ಕಳಿಗೆ ರುಚಿಯಾದ ಊಟ ನೀಡುವುದು ಕಷ್ಟಕರವಾಗಿದೆ.

ಸರ್ಕಾರ ನಿಗದಿ ಪಡಿಸಿದ ಹಣದಲ್ಲಿ ಮಕ್ಕಳಿಗೆ ಅಕ್ಕಿ, ಬೇಳೆ, ತರಕಾರಿ, ಎಣ್ಣೆ, ಖಾರದ ಪುಡಿ, ಅಡುಗೆ ಅನಿಲ ಸೇರಿರುತ್ತವೆ. ಆದರೆ ತರಕಾರಿ ಬೆಲೆ ಏರಿಕೆಯಾಗಿದೆ. ಹೀಗಾಗಿ ಸರ್ಕಾರ ನೀಡುವ ಹಣದಲ್ಲಿ ಮಕ್ಕಳಿಗೆ ಊಟ ಹಾಕುವುದು ಸವಾಲಿನ ಕೆಲಸವಾಗಿದೆ. ಕಡಿಮೆ ಬೆಲೆಯ ಅಡುಗೆ ವಸ್ತುಗಳನ್ನು ಅಡುಗೆ ತಯಾರಕರು ತರಬೇಕು. ಇಲ್ಲದಿದ್ದರೆ ಕಡಿಮೆ ಪ್ರಮಾಣದಲ್ಲಿ ತರಕಾರಿ ಬಳಸಬೇಕಾಗುತ್ತದೆ. ಹೀಗಾಗಿ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗುತ್ತಿದೆ.

ಇದನ್ನೂ ಓದಿ

Virat Kohli: ಆರ್​ಸಿಬಿ ಹೊಸ ನಾಯಕನ ಸ್ಥಾನಕ್ಕೆ ಇಬ್ಬರು ಆಟಗಾರರ ಶಾರ್ಟ್​ ಲಿಸ್ಟ್ ರೆಡಿ: ಸದ್ಯದಲ್ಲೇ ಘೋಷಣೆ

ಮೇಕೆದಾಟು ಯೋಜನೆ ರಾಜ್ಯದ ಪ್ರತಿಯೊಬ್ಬರ ಅಪೇಕ್ಷೆ, ಕಾಂಗ್ರೆಸ್​ಗೆ ಈಗೇಕೆ ಮೇಕೆದಾಟು ನೆನಪಿಗೆ ಬಂತು? – ಸಚಿವ ಈಶ್ವರಪ್ಪ ಪ್ರಶ್ನೆ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್