AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!

ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ.

ಮಕ್ಕಳ ಬಿಸಿಯೂಟಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ!
ಬಿಸಿಯೂಟ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 08, 2021 | 1:55 PM

Share

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ನೀಡುವಂತೆ ಸರ್ಕಾರ ಸೂಚಿಸಿದೆ. ಆದರೆ ಬೆಲೆ ಏರಿಕೆ ಬಿಸಿ ಶಾಲೆಗಳಲ್ಲಿ ಮಕ್ಕಳ ಬಿಸಿಯೂಟಕ್ಕೂ ತಟ್ಟಿದ್ದು, ಸರ್ಕಾರ ನಿಗದಿ ಪಡಿಸಿರುವ ಹಣದಲ್ಲಿ ಮಕ್ಕಳಿಗೆ ರುಚಿರುಚಿಯಾದ ಅಡುಗೆ ಮಾಡುವುದು ಕಷ್ಟವಾಗಿದೆ. ಮಕ್ಕಳಿಗೆ ಅನ್ನ, ಸಾಂಬಾರ್, ಬಿಸಿಬೇಳೆ ಬಾತ್, ಉಪ್ಪಿಟ್ಟು, ಪಲಾವ್ ಸೇರಿದಂತೆ ವಿವಿಧ ಖಾದ್ಯಗಳನ್ನ ತಯಾರಿಸಬೇಕು. ತರಕಾರಿಗಳನ್ನ ಬಳಸಿ ಅಡುಗೆ ಮಾಡಲು ಸೂಚಿಸಲಾಗಿದೆ. ಆದರೆ ಬೆಲೆ ಏರಿಕೆಯಿಂದ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗಿದೆ.

ಮಕ್ಕಳ ವಯಸ್ಸಿನ ಆಧಾರದ ಮೇಲೆ ಸರ್ಕಾರ ಹಣ ನಿಗದಿ ಪಡಿಸಿದೆ. 1ರಿಂದ 5ನೇ ತರಗತಿ ಮಕ್ಕಳಿಗೆ 4.97 ರೂಪಾಯಿ, 6ರಿಂದ 8ನೇ ತರಗತಿಯ ಮಕ್ಕಳಿಗೆ 7.45 ರೂಪಾಯಿ, 9ರಿಂದ 10ನೇ ತರಗತಿ ಮಕ್ಕಳಿಗೆ 11.41 ರೂ. ಹಣವನ್ನು ಸರ್ಕಾರ ನಿಗದಿ ಪಡಿಸಿದೆ. ಆದರೆ ಇದೀಗ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆ ಸರ್ಕಾರ ನೀಡುವ ಹಣದಲ್ಲಿ ಮಕ್ಕಳಿಗೆ ರುಚಿಯಾದ ಊಟ ನೀಡುವುದು ಕಷ್ಟಕರವಾಗಿದೆ.

ಸರ್ಕಾರ ನಿಗದಿ ಪಡಿಸಿದ ಹಣದಲ್ಲಿ ಮಕ್ಕಳಿಗೆ ಅಕ್ಕಿ, ಬೇಳೆ, ತರಕಾರಿ, ಎಣ್ಣೆ, ಖಾರದ ಪುಡಿ, ಅಡುಗೆ ಅನಿಲ ಸೇರಿರುತ್ತವೆ. ಆದರೆ ತರಕಾರಿ ಬೆಲೆ ಏರಿಕೆಯಾಗಿದೆ. ಹೀಗಾಗಿ ಸರ್ಕಾರ ನೀಡುವ ಹಣದಲ್ಲಿ ಮಕ್ಕಳಿಗೆ ಊಟ ಹಾಕುವುದು ಸವಾಲಿನ ಕೆಲಸವಾಗಿದೆ. ಕಡಿಮೆ ಬೆಲೆಯ ಅಡುಗೆ ವಸ್ತುಗಳನ್ನು ಅಡುಗೆ ತಯಾರಕರು ತರಬೇಕು. ಇಲ್ಲದಿದ್ದರೆ ಕಡಿಮೆ ಪ್ರಮಾಣದಲ್ಲಿ ತರಕಾರಿ ಬಳಸಬೇಕಾಗುತ್ತದೆ. ಹೀಗಾಗಿ ಮಕ್ಕಳಿಗೆ ಕೊಡುವ ಬಿಸಿಯೂಟ ಸಪ್ಪೆಯಾಗುತ್ತಿದೆ.

ಇದನ್ನೂ ಓದಿ

Virat Kohli: ಆರ್​ಸಿಬಿ ಹೊಸ ನಾಯಕನ ಸ್ಥಾನಕ್ಕೆ ಇಬ್ಬರು ಆಟಗಾರರ ಶಾರ್ಟ್​ ಲಿಸ್ಟ್ ರೆಡಿ: ಸದ್ಯದಲ್ಲೇ ಘೋಷಣೆ

ಮೇಕೆದಾಟು ಯೋಜನೆ ರಾಜ್ಯದ ಪ್ರತಿಯೊಬ್ಬರ ಅಪೇಕ್ಷೆ, ಕಾಂಗ್ರೆಸ್​ಗೆ ಈಗೇಕೆ ಮೇಕೆದಾಟು ನೆನಪಿಗೆ ಬಂತು? – ಸಚಿವ ಈಶ್ವರಪ್ಪ ಪ್ರಶ್ನೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?