Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಮಣಿ: ಸೈಬರ್ ವಂಚಕರನ್ನು ನಂಬಿ ಸ್ವತಃ 16 ಲಕ್ಷ ರೂಪಾಯಿ ಕಳೆದುಕೊಂಡ ಖಾಸಗಿ ಬ್ಯಾಂಕ್ ಉದ್ಯೋಗಿ

Chintamani cyber fraud: ಆನ್‍ಲೈನ್ ವಂಚಕರು, ಸೈಬರ್ ವಂಚಕರು, ಬ್ಯಾಂಕ್‍ಗಳ ಹೆಸರಿನಲ್ಲಿ ಮೋಸ ಹೋಗುವ ಜನರಿಗೆ ಜಾಗೃತಿ ಮೂಡಿಸಿ ವಂಚನೆಯನ್ನು ತಡೆಯಬೇಕಿದ್ದ ಬ್ಯಾಂಕ್ ಉದ್ಯೋಗಿಯೋರ್ವ ಸ್ವತಃ ತಾನೇ ಸೈಬರ್ ವಂಚಕರನ್ನು ನಂಬಿ 16,27,849 ರೂಪಾಯಿಗಳನ್ನು ಕಳೆದುಕೊಂಡ ಪ್ರಸಂಗ ನಡೆದಿದೆ.

ಚಿಂತಾಮಣಿ: ಸೈಬರ್ ವಂಚಕರನ್ನು ನಂಬಿ ಸ್ವತಃ 16 ಲಕ್ಷ ರೂಪಾಯಿ ಕಳೆದುಕೊಂಡ ಖಾಸಗಿ ಬ್ಯಾಂಕ್ ಉದ್ಯೋಗಿ
ಸೈಬರ್ ವಂಚನೆ- 16 ಲಕ್ಷ ರೂ ಕಳಕೊಂಡ ಬ್ಯಾಂಕ್ ಉದ್ಯೋಗಿ! ಮೋಡಸ್​ ಆಪರೆಂಡಿ ಏನು?
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​

Updated on: Oct 09, 2023 | 1:39 PM

ಚಿಕ್ಕಬಳ್ಳಾಪುರ, ಅಕ್ಟೋಬರ್​ 9: ಆನ್‍ಲೈನ್ ವಂಚಕರು, ಸೈಬರ್ ವಂಚಕರು, ಬ್ಯಾಂಕ್‍ಗಳ ಹೆಸರಿನಲ್ಲಿ ಮೋಸ ಹೋಗುವ ಜನರಿಗೆ ಜಾಗೃತಿ ಮೂಡಿಸಿ ವಂಚನೆಯನ್ನು (cyber fraudsters) ತಡೆಯಬೇಕಿದ್ದ ಬ್ಯಾಂಕ್ ಉದ್ಯೋಗಿಯೋರ್ವ ಸ್ವತಃ ತಾನೇ ಸೈಬರ್ ವಂಚಕರನ್ನು ನಂಬಿ 16,27,849 ರೂಪಾಯಿಗಳನ್ನು ಕಳೆದುಕೊಂಡ ಪ್ರಸಂಗ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ (Chintamani) ತಾಲ್ಲೂಕು ಚನ್ನಭೈರೇನಹಳ್ಳಿ ಗ್ರಾಮದ ಕೋಟಕ್ ಮಹೇಂದ್ರ ಬ್ಯಾಂಕ್ ಉದ್ಯೋಗಿ (private bank employee) ಶ್ರೀನಿವಾಸ್ ಸಿ.ವಿ. ಮೋಸ ಹೋದ ಬ್ಯಾಂಕ್ ಉದ್ಯೋಗಿ.

ಹೇಗೆ ಮೋಸ ಮಾಡಲಾಗಿದೆ, ಮೋಡಸ್​ ಆಪರೆಂಡಿ ಏನು?

‘ಸುಮ್ಮನಿರಲಾರದೇ ಮೈಗೆ ಇರುವೆ ಬಿಟ್ಟುಕೊಂಡರು’ ಎನ್ನುವಾಗೆ ಶ್ರೀನಿವಾಸ್ ತನ್ನ ಮೊಬೈಲ್‍ಗೆ ಬಂದ ಈ-ಸ್ಕೈ ಆಪ್ ಓಪನ್ ಮಾಡಿದ್ದಾನೆ. ಅದರಲ್ಲಿ ವಿವಿಧ ಏರ್​​ಲೈನ್​​ಗಳಿಗೆ ಸ್ಯಾಟಿಸ್ಪೈ ಆಗಿರುವ ಬಗ್ಗೆ ರೇಟಿಂಗ್ಸ್ ನೀಡಿದರೆ ಹಣ ನೀಡುವುದಾಗಿ ಆಮಿಷವೊಡ್ಡಲಾಗಿದೆ. ಅದನ್ನು ನಂಬಿದ ಬ್ಯಾಂಕ್ ಉದ್ಯೋಗಿ ಶ್ರೀನಿವಾಸ್ ಈ-ಸ್ಕೈ ಆಪ್ ಇನ್ಸ್ಟಾಲ್ ಮಾಡಿಕೊಂಡು ಅವರು ಹೇಳಿದಂತೆ ಮಾಡಿದ್ದಾನೆ!

ಇದನ್ನೂ ಓದಿ: ಪರ್ಸೆಂಟ್​ ಲೆಕ್ಕಾಚಾರ ಇಲ್ಲಿದೆ! ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಮಂಜೂರಾದ ಬಾಕಿ ಬಿಲ್ ಕಮೀಷನ್‍ಗಾಗಿ ಯುದ್ದವೇ ನಡೆಯುತ್ತಿದೆ

ಇವರು ಹಾಕಿದ ಹಣಕ್ಕೆ ಅವರು ಪ್ರಾಫಿಟ್ ತೋರಿಸುತ್ತಾ ಹೋಗಿದ್ದಾರೆ. ಆದರೆ ಡ್ರಾ ಮಾಡಿಕೊಳ್ಳುವ ಅವಕಾಶವಿರಲಿಲ್ಲ. ಕೊನೆಗೆ ಪ್ರಾಫಿಟ್ ಹಣ ಡ್ರಾ ಮಾಡಿಕೊಳ್ಳಲು ಶೇ. 50 % ರಷ್ಟು ಹಣ ಸಂದಾಯ ಮಾಡಿದರೆ ಪೂರಾ ಹಣ ಖಾತೆಗೆ ಬರುವುದಾಗಿ ತಿಳಿಸಿದ್ದಾರೆ. ಅದನ್ನೂ ನಂಬಿದ ಶ್ರೀನಿವಾಸ್ ತನ್ನ 3 ಬ್ಯಾಂಕ್ ಖಾತೆಗಳು, ಜೊತೆಗೆ ಸಾಲದು ಅಂತಾ ತನ್ನ ಸ್ನೇಹಿತರ ಖಾತೆಗಳಿಂದಲೂ ಬರೋಬ್ಬರಿ 16,27,849 ರೂಪಾಯಿಗಳನ್ನು ಖದೀಮನ ಆಪ್ ಖಾತೆಗೆ ಹಾಕಿದ್ದಾನೆ.

ಕೊನೆಗೆ ಅದು ಸೈಬರ್ ವಂಚನೆ ಎಂದು ಗೊತ್ತಾಗುತ್ತಿದ್ದಂತೆ ಚಿಕ್ಕಬಳ್ಳಾಪುರ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿ ನ್ಯಾಯಕ್ಕಾಗಿ ಅಂಗಲಾಚಿದ್ದಾನೆ/ ಅಲೆದಾಡುತ್ತಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್