AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chintamani: ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದು ರೈತ ದಂಪತಿ ಆತ್ಮಹತ್ಯೆ

ಕಳೆದ ಒಂದು ವರ್ಷದಿಂದ ತಮ್ಮ ಜಮೀನಿನಲ್ಲಿ ಬಂಡವಾಳ ಹಾಕಿ ಮೊದಲು ಕ್ಯಾರೆಟ್, ನಂತರ ಕೊತ್ತಂಬರಿ ಸೊಪ್ಪು, ನಂತರ ಟೊಮ್ಯಾಟೊ ಬೆಳೆ ಬೆಳೆದಿದ್ದರು ನತದೃಷ್ಟ ದಂಪತಿ. ಆದರೆ ಕೊರೊನಾ ಸೋಂಕಿನ ಭೀತಿಯಿಂದ ಸರ್ಕಾರ ಲಾಕ್ ಡೌನ್ ಹಾಗೂ ಕಠಿಣ ನಿಯಮಾವಳಿ ವಿಧಿಸಿದ್ದ ಕಾರಣ ರೈತ ವೆಂಕಟರೆಡ್ಡಿ ಬೆಳೆದಿದ್ದ ಬೆಳೆಗೆ ಸೂಕ್ತ ಬೆಲೆ ಬಂದಿರಲಿಲ್ಲ ಎನ್ನಲಾಗಿದೆ.

Chintamani: ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದು ರೈತ ದಂಪತಿ ಆತ್ಮಹತ್ಯೆ
ಚಿಂತಾಮಣಿ: ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದು ರೈತ ದಂಪತಿ ಆತ್ಮಹತ್ಯೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 18, 2021 | 12:50 PM

ಚಿಕ್ಕಬಳ್ಳಾಪುರ: ಮೂರು ಲಕ್ಷ ರೂಪಾಯಿ ಸಾಲ ಮಾಡಿ ಟೊಮ್ಯಾಟೊ ಬೆಳೆ ಬೆಳೆದಿದ್ದ ರೈತನೊರ್ವ, 5 ಲಕ್ಷ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ. ಆದ್ರೆ ಟೊಮ್ಯಾಟೊಗೆ ಬೆಲೆ ಬಾರದೆ, ಬೆಳೆ ಜಮೀನಿನಲ್ಲಿಯೇ ಹಾಳಾಯಿತು. ಆದ್ರೆ ಮಾಡಿದ್ದ ಕೈ ಸಾಲ ತಿರಿಸುವುದಾದ್ರು ಹೇಗೆ ಅಂತ ಚಿಂತೆಗೆ ಬಿದ್ದ ರೈತ ದಂಪತಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವೆಂಕಟರೆಡ್ಡಿ(52) ಮತ್ತು ರತ್ನಮ್ಮ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಒಂದು ಕಡೆ ಕೊರೊನಾ ಕಾಟ; ಮತ್ತೊಂದೆಡೆ ಸಾಲಗಾರರ ಕಾಟ: ಕಳೆದ ಒಂದು ವರ್ಷದಿಂದ ತಮ್ಮ ಜಮೀನಿನಲ್ಲಿ ಬಂಡವಾಳ ಹಾಕಿ ಮೊದಲು ಕ್ಯಾರೆಟ್, ನಂತರ ಕೊತ್ತಂಬರಿ ಸೊಪ್ಪು, ನಂತರ ಟೊಮ್ಯಾಟೊ ಬೆಳೆ ಬೆಳೆದಿದ್ದರು ನತದೃಷ್ಟ ದಂಪತಿ. ಆದರೆ ಕೊರೊನಾ ಸೋಂಕಿನ ಭೀತಿಯಿಂದ ಸರ್ಕಾರ ಲಾಕ್ ಡೌನ್ ಹಾಗೂ ಕಠಿಣ ನಿಯಮಾವಳಿ ವಿಧಿಸಿದ್ದ ಕಾರಣ ರೈತ ವೆಂಕಟರೆಡ್ಡಿ ಬೆಳೆದಿದ್ದ ಬೆಳೆಗೆ ಸೂಕ್ತ ಬೆಲೆ ಬಂದಿರಲಿಲ್ಲ ಎನ್ನಲಾಗಿದೆ.

ಮತ್ತೊಂದೆಡೆ ಕೈ ಸಾಲ ಮಾಡಿದವರು ಹಣಕ್ಕಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ದಂಪತಿ ನಿನ್ನೆ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಟ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read: ಮನ ಮಿಡಿಯುವ ಸಂಗತಿ; ನತದೃಷ್ಟ ಜೀಪ್ ಚಾಲಕ, ತಂದೆ ರಮೇಶ್ ಶವ ಆಸ್ಪತ್ರೆಯಲ್ಲಿದ್ರೂ ಬಿ.ಎಸ್ಸಿ ಪರೀಕ್ಷೆಗೆ ಹಾಜರಾದ ಮಗ

Also Read: ಒಡೆದ ಕುಟುಂಬ: 20 ದಿನ ಹಿಂದೆ ಮಗಳು ಕೈ ಕೊಯ್ದುಕೊಂಡಾಗ ‘ಎಲ್ಲಾ ಒಟ್ಟಿಗೆ ಸಾಯೋಣ’ ಎಂದಿದ್ದಳಂತೆ ದರ್ಪ ಪತ್ನಿ ಭಾರತಿ!

(chintamani farmer couple commits suicide due to crop loss and loan burden)

Published On - 12:46 pm, Sat, 18 September 21

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ