AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chintamani: ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದು ರೈತ ದಂಪತಿ ಆತ್ಮಹತ್ಯೆ

ಕಳೆದ ಒಂದು ವರ್ಷದಿಂದ ತಮ್ಮ ಜಮೀನಿನಲ್ಲಿ ಬಂಡವಾಳ ಹಾಕಿ ಮೊದಲು ಕ್ಯಾರೆಟ್, ನಂತರ ಕೊತ್ತಂಬರಿ ಸೊಪ್ಪು, ನಂತರ ಟೊಮ್ಯಾಟೊ ಬೆಳೆ ಬೆಳೆದಿದ್ದರು ನತದೃಷ್ಟ ದಂಪತಿ. ಆದರೆ ಕೊರೊನಾ ಸೋಂಕಿನ ಭೀತಿಯಿಂದ ಸರ್ಕಾರ ಲಾಕ್ ಡೌನ್ ಹಾಗೂ ಕಠಿಣ ನಿಯಮಾವಳಿ ವಿಧಿಸಿದ್ದ ಕಾರಣ ರೈತ ವೆಂಕಟರೆಡ್ಡಿ ಬೆಳೆದಿದ್ದ ಬೆಳೆಗೆ ಸೂಕ್ತ ಬೆಲೆ ಬಂದಿರಲಿಲ್ಲ ಎನ್ನಲಾಗಿದೆ.

Chintamani: ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದು ರೈತ ದಂಪತಿ ಆತ್ಮಹತ್ಯೆ
ಚಿಂತಾಮಣಿ: ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದು ರೈತ ದಂಪತಿ ಆತ್ಮಹತ್ಯೆ
TV9 Web
| Edited By: ಸಾಧು ಶ್ರೀನಾಥ್​|

Updated on:Sep 18, 2021 | 12:50 PM

Share

ಚಿಕ್ಕಬಳ್ಳಾಪುರ: ಮೂರು ಲಕ್ಷ ರೂಪಾಯಿ ಸಾಲ ಮಾಡಿ ಟೊಮ್ಯಾಟೊ ಬೆಳೆ ಬೆಳೆದಿದ್ದ ರೈತನೊರ್ವ, 5 ಲಕ್ಷ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ. ಆದ್ರೆ ಟೊಮ್ಯಾಟೊಗೆ ಬೆಲೆ ಬಾರದೆ, ಬೆಳೆ ಜಮೀನಿನಲ್ಲಿಯೇ ಹಾಳಾಯಿತು. ಆದ್ರೆ ಮಾಡಿದ್ದ ಕೈ ಸಾಲ ತಿರಿಸುವುದಾದ್ರು ಹೇಗೆ ಅಂತ ಚಿಂತೆಗೆ ಬಿದ್ದ ರೈತ ದಂಪತಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವೆಂಕಟರೆಡ್ಡಿ(52) ಮತ್ತು ರತ್ನಮ್ಮ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಒಂದು ಕಡೆ ಕೊರೊನಾ ಕಾಟ; ಮತ್ತೊಂದೆಡೆ ಸಾಲಗಾರರ ಕಾಟ: ಕಳೆದ ಒಂದು ವರ್ಷದಿಂದ ತಮ್ಮ ಜಮೀನಿನಲ್ಲಿ ಬಂಡವಾಳ ಹಾಕಿ ಮೊದಲು ಕ್ಯಾರೆಟ್, ನಂತರ ಕೊತ್ತಂಬರಿ ಸೊಪ್ಪು, ನಂತರ ಟೊಮ್ಯಾಟೊ ಬೆಳೆ ಬೆಳೆದಿದ್ದರು ನತದೃಷ್ಟ ದಂಪತಿ. ಆದರೆ ಕೊರೊನಾ ಸೋಂಕಿನ ಭೀತಿಯಿಂದ ಸರ್ಕಾರ ಲಾಕ್ ಡೌನ್ ಹಾಗೂ ಕಠಿಣ ನಿಯಮಾವಳಿ ವಿಧಿಸಿದ್ದ ಕಾರಣ ರೈತ ವೆಂಕಟರೆಡ್ಡಿ ಬೆಳೆದಿದ್ದ ಬೆಳೆಗೆ ಸೂಕ್ತ ಬೆಲೆ ಬಂದಿರಲಿಲ್ಲ ಎನ್ನಲಾಗಿದೆ.

ಮತ್ತೊಂದೆಡೆ ಕೈ ಸಾಲ ಮಾಡಿದವರು ಹಣಕ್ಕಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ದಂಪತಿ ನಿನ್ನೆ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಟ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read: ಮನ ಮಿಡಿಯುವ ಸಂಗತಿ; ನತದೃಷ್ಟ ಜೀಪ್ ಚಾಲಕ, ತಂದೆ ರಮೇಶ್ ಶವ ಆಸ್ಪತ್ರೆಯಲ್ಲಿದ್ರೂ ಬಿ.ಎಸ್ಸಿ ಪರೀಕ್ಷೆಗೆ ಹಾಜರಾದ ಮಗ

Also Read: ಒಡೆದ ಕುಟುಂಬ: 20 ದಿನ ಹಿಂದೆ ಮಗಳು ಕೈ ಕೊಯ್ದುಕೊಂಡಾಗ ‘ಎಲ್ಲಾ ಒಟ್ಟಿಗೆ ಸಾಯೋಣ’ ಎಂದಿದ್ದಳಂತೆ ದರ್ಪ ಪತ್ನಿ ಭಾರತಿ!

(chintamani farmer couple commits suicide due to crop loss and loan burden)

Published On - 12:46 pm, Sat, 18 September 21

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ