AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಂದಾವನದಲ್ಲಿ ಗೌಡ ಸಂಪ್ರದಾಯದಂತೆ ಇಂದು ಮಧ್ಯಾಹ್ನ ಚಿರು ಸಮಾಧಿ

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಚಂದನವನವನ್ನ ಬಿಟ್ಟು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ನಿನ್ನೆ ಈ ವಿಷಯ ತಿಳಿಯುತ್ತಿದ್ದಂತೆ ಮನೆಯ ಹಿರಿಯರಂತಿರುವ ಅರ್ಜುನ್ ಸರ್ಜಾ ತಮಿಳುನಾಡಿನ ವೇಲೂರಿನಿಂದ ಓಡೋಡಿ ಬಂದಿದ್ದಾರೆ. ಚಿರು ಮೃತ ದೇಹದ ಬಳಿ ಕೂತು ಬಿಕ್ಕಿ ಬಿಕ್ಕಿ ಅಂತಿದ್ದಾರೆ. ರಾತ್ರಿ ಮನೆ ಮಂದಿಯೆಲ್ಲ ಕೂತು ಅಂತ್ಯಕ್ರಿಯೆ ನಡೆಸುವ ಕುರಿತು ಮಾತನಾಡಿದ್ದಾರೆ. ನಂತರ ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಮಾಡಲು ನಿರ್ಧರಿಸಿದ್ದಾರೆ. ಇಂದು ಕನಕಪುರ ರಸ್ತೆಯ ನೆಲಗುಳಿ ಬಳಿಯಿರೋ ಧ್ರುವಾ ಸರ್ಜಾ ಫಾರ್ಮ್​ಹೌಸ್​ಗೆ ಚಿರು […]

ಬೃಂದಾವನದಲ್ಲಿ ಗೌಡ ಸಂಪ್ರದಾಯದಂತೆ ಇಂದು ಮಧ್ಯಾಹ್ನ ಚಿರು ಸಮಾಧಿ
ಆಯೇಷಾ ಬಾನು
|

Updated on:Jun 08, 2020 | 2:16 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ ಚಿರಂಜೀವಿ ಸರ್ಜಾ(39) ಚಂದನವನವನ್ನ ಬಿಟ್ಟು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ನಿನ್ನೆ ಈ ವಿಷಯ ತಿಳಿಯುತ್ತಿದ್ದಂತೆ ಮನೆಯ ಹಿರಿಯರಂತಿರುವ ಅರ್ಜುನ್ ಸರ್ಜಾ ತಮಿಳುನಾಡಿನ ವೇಲೂರಿನಿಂದ ಓಡೋಡಿ ಬಂದಿದ್ದಾರೆ. ಚಿರು ಮೃತ ದೇಹದ ಬಳಿ ಕೂತು ಬಿಕ್ಕಿ ಬಿಕ್ಕಿ ಅಂತಿದ್ದಾರೆ. ರಾತ್ರಿ ಮನೆ ಮಂದಿಯೆಲ್ಲ ಕೂತು ಅಂತ್ಯಕ್ರಿಯೆ ನಡೆಸುವ ಕುರಿತು ಮಾತನಾಡಿದ್ದಾರೆ. ನಂತರ ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಮಾಡಲು ನಿರ್ಧರಿಸಿದ್ದಾರೆ.

ಇಂದು ಕನಕಪುರ ರಸ್ತೆಯ ನೆಲಗುಳಿ ಬಳಿಯಿರೋ ಧ್ರುವಾ ಸರ್ಜಾ ಫಾರ್ಮ್​ಹೌಸ್​ಗೆ ಚಿರು ಪಾರ್ಥಿವ ಶರೀರ ಕೊಂಡೊಯ್ಯಲಿದ್ದಾರೆ. ಸಹೋದರ ಚಿರಂಜೀವಿ ಸರ್ಜಾ ತನ್ನ ಜತೆ ಇರಬೇಕೆಂದು ಧ್ರುವ ಸರ್ಜಾ ಬೇಡಿಕೆಯಂತೆ ನಟ ಧ್ರುವ ಸರ್ಜಾ ಫಾರ್ಮ್​ಹೌಸ್​ನಲ್ಲೇ ಚಿರು ಅಂತ್ಯಕ್ರಿಯೆ ನಡೆಯಲಿದೆ. ಧ್ರುವಾ ಸರ್ಜಾ ಬೇಡಿಕೆಗೆ ಕುಟುಂಬ ಕೂಡ ಸಮ್ಮತಿ ಸೂಚಿಸಿದ್ದು ಇಂದು ಮಧ್ಯಾಹ್ನ 2ರಿಂದ 3 ಗಂಟೆ ವೇಳೆಗೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಅಂತ್ಯಕ್ರಿಯೆ ಸ್ಥಳದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನೆಲಗುಳಿ ಗ್ರಾಮದ ಬಳಿಯ ಫಾರ್ಮ್ ಹೌಸ್​ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭದ್ರತೆಗೆ ಒಬ್ಬರು ಸಿಪಿಐ, ಐವರು ಪಿಎಸ್​ಐ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

Published On - 9:16 am, Mon, 8 June 20

Follow Us
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್