AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಬಸ್​​ ಭಸ್ಮ: ಮೂವರು ನಾಪತ್ತೆ, ಸಾವಿನ ಸಂಖ್ಯೆಯಲ್ಲಿ ಗೊಂದಲ

ಚಿತ್ರದುರ್ಗದಲ್ಲಿ ಬಸ್​​ ಭಸ್ಮ: ಮೂವರು ನಾಪತ್ತೆ, ಸಾವಿನ ಸಂಖ್ಯೆಯಲ್ಲಿ ಗೊಂದಲ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Dec 25, 2025 | 12:43 PM

Share

ಚಿತ್ರದುರ್ಗದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ ಬಗ್ಗೆ ಅಧಿಕಾರಿಗಳು ಮತ್ತು ಸಚಿವರ ನಡುವೆ ಗೊಂದಲವಿದೆ. ಐಜಿಪಿ ಒಂಭತ್ತು ಮೃತದೇಹಗಳ ಬಗ್ಗೆ ಮಾಹಿತಿ ನೀಡಿದರೆ, ಸಾರಿಗೆ ಸಚಿವರು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಹಾಸನ ಮೂಲದ ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ನವ್ಯಾ ಮತ್ತು ಮಾನಸ ಸೇರಿದಂತೆ ನಾಪತ್ತೆಯಾಗಿರುವ ಮೂವರಿಗಾಗಿ ಹುಡುಕಾಟ ಮುಂದುವರೆದಿದೆ.

ಚಿತ್ರದುರ್ಗ, ಡಿಸೆಂಬರ್​​ 25: ಗೊರ್ಲತ್ತು ಬಳಿ ಸಂಭವಿಸಿರುವ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಕುರಿತು ಅಧಿಕಾರಿಗಳು ಮತ್ತು ಸಚಿವರ ನಡುವೆ ಗೊಂದಲ ಉಂಟಾಗಿದೆ. ಆರಂಭದಲ್ಲಿ, ಐಜಿಪಿ ರವಿಕಾಂತೇಗೌಡ ಅವರು ಒಂಭತ್ತು ಮಂದಿ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಆದರೆ, ಸಾರಿಗೆ ಸಚಿವರು ಐವರು ಪ್ರಯಾಣಿಕರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ ಬಸ್​​ನಲ್ಲಿದ್ದ ಮೂವರು ಪ್ರಯಾಣಿಕರು ನಾಪತ್ತೆಯಾಗಿದ್ದು, ಅವರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯಾ ಹಾಗೂ ಚನ್ನರಾಯಪಟ್ಟಣದ ಮಾನಸ ಸೇರಿ ಮತ್ತೊಬ್ಬರು ನಾಪತ್ತೆಯಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 25, 2025 12:06 PM