AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಆ್ಯಕ್ಸಿಜನ್​ ಖಾಲಿಯಾಗಿ ದಾರಿ ಮಧ್ಯ ಕೊರೊನಾ ಸೋಂಕು ತಗುಲಿದ್ದ ವೃದ್ಧೆ ಸಾವು

ಆ್ಯಂಬುಲೆನ್ಸ್​ನಲ್ಲಿ ಆಕ್ಸಿಜನ್ ಮುಗಿದು ದಾರಿಯಲ್ಲಿಯೇ ಕೊರೊನಾ​ ಸೋಂಕು ತಗುಲಿದ್ದ ವೃದ್ಧೆ ಸಾವಿಗೀಡಾದ ಘಟನೆ ನಡೆದಿದೆ.

ಚಿತ್ರದುರ್ಗ: ಆ್ಯಕ್ಸಿಜನ್​ ಖಾಲಿಯಾಗಿ ದಾರಿ ಮಧ್ಯ ಕೊರೊನಾ ಸೋಂಕು ತಗುಲಿದ್ದ ವೃದ್ಧೆ ಸಾವು
ಮಹದೇವಮ್ಮ
shruti hegde
|

Updated on:Apr 05, 2021 | 1:29 PM

Share

ಚಿತ್ರದುರ್ಗ: ಆ್ಯಂಬುಲೆನ್ಸ್​ನಲ್ಲಿ ಆಕ್ಸಿಜನ್ ಮುಗಿದು ದಾರಿಯಲ್ಲಿಯೇ ಕೊವಿಡ್​ ಸೋಂಕು ತಗುಲಿದ್ದ ವೃದ್ಧೆಯೋರ್ವರು ಅಸುನೀಗಿದ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯ ಆ್ಯಂಬುಲೆನ್ಸ್​ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಹಿರಿಯೂರು ಪಟ್ಟಣದ ವೇದಾವತಿ ಬಡಾವಣೆಯ 65 ವರ್ಷದ ವೃದ್ಧೆ ಮಹದೇವಮ್ಮರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗುತ್ತಿತ್ತು. ಈ ವೇಳೆ ದಾರಿಯ ಮಧ್ಯೆ ಆಕ್ಸಿಜನ್ ಖಾಲಿಯಾದ ಹಿನ್ನೆಲೆಯಲ್ಲಿ ವೃದ್ಧೆ ದಾರಿಯಲ್ಲಿಯೇ ಮರಣ ಹೊಂದಿದ್ದಾರೆ. ಜಿಲ್ಲಾಸ್ಪತ್ರೆ ಆ್ಯಂಬುಲೆನ್ಸ್​ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ವೃದ್ಧೆಯ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಆ್ಯಂಬುಲೆನ್ಸ್​ನಲ್ಲಿ ಆ್ಯಕ್ಸಿಜನ್​ ವ್ಯವಸ್ಥೆಗೆಂದು ಚಾಲಕ 2 ಸಾವಿರ ರೂಪಾಯಿ ಲಂಚ ಪಡೆದಿದ್ದರು. ಚಿತ್ರದುರ್ಗದಿಂದ 10 ಕಿಲೋಮೀಟರ್​ ದೂರ ಕ್ರಮಿಸಿ ಆಗಿತ್ತು. ದಾರಿಯ ಮಧ್ಯದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾವಿಗೀಡಾದ ವೃದ್ಧೆಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಚಿತ್ರದುರ್ಗ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಾಲ್ಕು ದಿನಗಳ ಹಿಂದೆ ಹಿರಿಯೂರು ಮೂಲದ ಕೊವಿಡ್ ರೋಗಿ ಅಡ್ಮಿಟ್ ಆಗಿದ್ದರು. ಪರಿಸ್ಥಿತಿ ಚಿಂತಾಜನಕ ಆಗಿರುವ ಕಾರಣ ಬೇರೆಡೆ ಸ್ಥಳಾಂತರಿಸುವುದು ಬೇಡ ಎಂದು ಸಲಹೆ ನೀಡಿದ್ದೆವು. ಕುಟುಂಬದವರು ದಾವಣಗೆರೆಗೆ ಸ್ಥಳಾಂತರಿಸಲು ಮುಂದಾದಾಗ ಅಂಬುಲೆನ್ಸ್​ನಲ್ಲಿ ಮೃತಪಟ್ಟಿದ್ದಾರೆ. ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲ. ಅಂಬುಲೆನ್ಸ್ ಚಾಲಕ ಮುಖ್ತಾರ್ ಡೀಸೆಲ್​ಗಾಗಿ ಹಣ ಕೇಳಿದ್ದಾನೆ. ಆಸ್ಪತ್ರೆ ನರ್ಸ್ ದೀಪಿಕಾಗೆ ನಿರ್ಲಕ್ಷ ಸಲ್ಲದು ಎಂದು ವಾರ್ನಿಂಗ್ ಮಾಡಿದ್ದೇನೆ ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಬಸವರಾಜ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: Coronavirus India Update: ಒಂದೇ ದಿನ 1 ಲಕ್ಷಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣ

ವಿಚಾರಣೆಗೆ 15 ದಿನ ಕ್ವಾರಂಟೈನ್?: ‘ರಮೇಶ್ ಜಾರಕಿಹೊಳಿಗೆ ಕೊರೊನಾ ಇದೆ’ ಎಂದ ಸಚಿವ ಭೈರತಿ ಬಸವರಾಜು

Published On - 11:16 am, Mon, 5 April 21

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ