AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಆ್ಯಕ್ಸಿಜನ್​ ಖಾಲಿಯಾಗಿ ದಾರಿ ಮಧ್ಯ ಕೊರೊನಾ ಸೋಂಕು ತಗುಲಿದ್ದ ವೃದ್ಧೆ ಸಾವು

ಆ್ಯಂಬುಲೆನ್ಸ್​ನಲ್ಲಿ ಆಕ್ಸಿಜನ್ ಮುಗಿದು ದಾರಿಯಲ್ಲಿಯೇ ಕೊರೊನಾ​ ಸೋಂಕು ತಗುಲಿದ್ದ ವೃದ್ಧೆ ಸಾವಿಗೀಡಾದ ಘಟನೆ ನಡೆದಿದೆ.

ಚಿತ್ರದುರ್ಗ: ಆ್ಯಕ್ಸಿಜನ್​ ಖಾಲಿಯಾಗಿ ದಾರಿ ಮಧ್ಯ ಕೊರೊನಾ ಸೋಂಕು ತಗುಲಿದ್ದ ವೃದ್ಧೆ ಸಾವು
ಮಹದೇವಮ್ಮ
Follow us
shruti hegde
|

Updated on:Apr 05, 2021 | 1:29 PM

ಚಿತ್ರದುರ್ಗ: ಆ್ಯಂಬುಲೆನ್ಸ್​ನಲ್ಲಿ ಆಕ್ಸಿಜನ್ ಮುಗಿದು ದಾರಿಯಲ್ಲಿಯೇ ಕೊವಿಡ್​ ಸೋಂಕು ತಗುಲಿದ್ದ ವೃದ್ಧೆಯೋರ್ವರು ಅಸುನೀಗಿದ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯ ಆ್ಯಂಬುಲೆನ್ಸ್​ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಹಿರಿಯೂರು ಪಟ್ಟಣದ ವೇದಾವತಿ ಬಡಾವಣೆಯ 65 ವರ್ಷದ ವೃದ್ಧೆ ಮಹದೇವಮ್ಮರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗುತ್ತಿತ್ತು. ಈ ವೇಳೆ ದಾರಿಯ ಮಧ್ಯೆ ಆಕ್ಸಿಜನ್ ಖಾಲಿಯಾದ ಹಿನ್ನೆಲೆಯಲ್ಲಿ ವೃದ್ಧೆ ದಾರಿಯಲ್ಲಿಯೇ ಮರಣ ಹೊಂದಿದ್ದಾರೆ. ಜಿಲ್ಲಾಸ್ಪತ್ರೆ ಆ್ಯಂಬುಲೆನ್ಸ್​ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ವೃದ್ಧೆಯ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

ಆ್ಯಂಬುಲೆನ್ಸ್​ನಲ್ಲಿ ಆ್ಯಕ್ಸಿಜನ್​ ವ್ಯವಸ್ಥೆಗೆಂದು ಚಾಲಕ 2 ಸಾವಿರ ರೂಪಾಯಿ ಲಂಚ ಪಡೆದಿದ್ದರು. ಚಿತ್ರದುರ್ಗದಿಂದ 10 ಕಿಲೋಮೀಟರ್​ ದೂರ ಕ್ರಮಿಸಿ ಆಗಿತ್ತು. ದಾರಿಯ ಮಧ್ಯದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾವಿಗೀಡಾದ ವೃದ್ಧೆಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಚಿತ್ರದುರ್ಗ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಾಲ್ಕು ದಿನಗಳ ಹಿಂದೆ ಹಿರಿಯೂರು ಮೂಲದ ಕೊವಿಡ್ ರೋಗಿ ಅಡ್ಮಿಟ್ ಆಗಿದ್ದರು. ಪರಿಸ್ಥಿತಿ ಚಿಂತಾಜನಕ ಆಗಿರುವ ಕಾರಣ ಬೇರೆಡೆ ಸ್ಥಳಾಂತರಿಸುವುದು ಬೇಡ ಎಂದು ಸಲಹೆ ನೀಡಿದ್ದೆವು. ಕುಟುಂಬದವರು ದಾವಣಗೆರೆಗೆ ಸ್ಥಳಾಂತರಿಸಲು ಮುಂದಾದಾಗ ಅಂಬುಲೆನ್ಸ್​ನಲ್ಲಿ ಮೃತಪಟ್ಟಿದ್ದಾರೆ. ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿಲ್ಲ. ಅಂಬುಲೆನ್ಸ್ ಚಾಲಕ ಮುಖ್ತಾರ್ ಡೀಸೆಲ್​ಗಾಗಿ ಹಣ ಕೇಳಿದ್ದಾನೆ. ಆಸ್ಪತ್ರೆ ನರ್ಸ್ ದೀಪಿಕಾಗೆ ನಿರ್ಲಕ್ಷ ಸಲ್ಲದು ಎಂದು ವಾರ್ನಿಂಗ್ ಮಾಡಿದ್ದೇನೆ ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಬಸವರಾಜ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: Coronavirus India Update: ಒಂದೇ ದಿನ 1 ಲಕ್ಷಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣ

ವಿಚಾರಣೆಗೆ 15 ದಿನ ಕ್ವಾರಂಟೈನ್?: ‘ರಮೇಶ್ ಜಾರಕಿಹೊಳಿಗೆ ಕೊರೊನಾ ಇದೆ’ ಎಂದ ಸಚಿವ ಭೈರತಿ ಬಸವರಾಜು

Published On - 11:16 am, Mon, 5 April 21

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?