AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಐಸೋಲೇಷನ್ ಬದಲು ಸಾಂಸ್ಥಿಕ ಕ್ವಾರಂಟೈನ್​ಗೆ ಚಿತ್ರದುರ್ಗ ಜಿಲ್ಲಾಡಳಿತ ಮುಂದಾಗಿದೆ: ಡಿಸಿ ಕವಿತಾ ಮನ್ನಿಕೇರಿ

ಕೊವಿಡ್ ಕೇರ್ ಸೆಂಟರ್ ಆಸ್ಪತ್ರೆ ಮಾದರಿಯ ಸೌಕರ್ಯ ಕಲ್ಪಿಸಿಕೊಡಲಿದ್ದು, ಕೊವಿಡ್ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಹೋಂ ಐಸೋಲೇಷನ್ ಬದಲು ಸಾಂಸ್ಥಿಕ ಕ್ವಾರಂಟೈನ್​ಗೆ ಚಿತ್ರದುರ್ಗ ಜಿಲ್ಲಾಡಳಿತ ಮುಂದಾಗಿದೆ: ಡಿಸಿ ಕವಿತಾ ಮನ್ನಿಕೇರಿ
ಡಿಸಿ ಕವಿತಾ ಮನ್ನಿಕೇರಿ
preethi shettigar
|

Updated on: May 12, 2021 | 8:19 AM

Share

ಚಿತ್ರದುರ್ಗ : ಜಿಲ್ಲೆಯಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಸಾಗಿದೆ. ಅನೇಕರು ಹೋಂ ಐಸೋಲೇಷನ್ ಮೊರೆ ಹೋಗುತ್ತಿದ್ದು ಮನೆ ಮಂದಿಗೆಲ್ಲಾ ಸೋಂಕು ಹರಡುತ್ತಿದೆ. ಕೆಲವರು ಸೋಂಕಿನ ಪ್ರಮಾಣ ಹೆಚ್ಚಾದ ಬಳಿಕ ಆಸ್ಪತ್ರೆಗೆ ಬರುತ್ತಿದ್ದು, ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ಕೊವಿಡ್ ಚೈನ್ ಬ್ರೇಕ್ ಮಾಡಲು ಜಿಲ್ಲೆಯಲ್ಲಿ ಹೋಂ ಐಸೊಲೇಷನ್ ಬದಲು ಸಾಂಸ್ಥಿಕ ಕ್ವಾರಂಟೈನ್​ಗೆ ಜಿಲ್ಲಾಡಳಿತ ಮುಂದಾಗಿದೆ. ಈ ನಿಟ್ಟಿನಲ್ಲಿ ಕೊವಿಡ್ ಕೇರ್ ಸೆಂಟರ್ ನಿರ್ಮಾಣದ ಮೂಲಕ ಸೋಂಕಿತರನ್ನು ಕೇರ್‌ಸೆಂಟರ್​ಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ.

ನಗರದ ಈಶ್ವರ ಬಡಾವಣೆಯಲ್ಲಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖೆಯ ನೂತನ ಹಾಸ್ಟಲ್​ವೊಂದರಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆದಿದೆ. ಆರ್.ಪ್ರವೀಣ್ ಚಂದ್ರ ಒಡೆತನದ ಇಆರ್​ಎಂ ಸಮೂಹ ಸಂಸ್ಥೆ ಕೊವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ನೆರವು ನೀಡಿದೆ. 250 ಬೆಡ್​ಗಳ ಸುಸಜ್ಜಿತ ಕೇಂದ್ರ ನಿರ್ಮಿಸಿಕೊಟ್ಟಿದೆ ಎಂದು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಹೇಳಿದರು.

ಹಾಸ್ಟಲ್​ನ ಪ್ರತಿ ಕೋಣೆಯಲ್ಲಿ ನಾಲ್ಕು ಬೆಡ್​ಗಳನ್ನು ಹಾಕಲಾಗಿದೆ. ಮಂಚ, ಹಾಸಿಗೆ, ಹೊದಿಕೆ, ಟೇಬಲ್, ಸೊಳ್ಳೆ ಪರದೆ, ಕಸದ ಬುಟ್ಟಿ, ಫ್ಯಾನ್ ಸಹಿತ ಕೇರ್ ಸೆಂಟರ್​ಗೆ ಬೇಕಾದ ಎಲ್ಲಾ ವ್ಯವಸ್ಥೆ ನಿರ್ಮಿಸಲಾಗಿದೆ. ವೈದ್ಯಕೀಯ ಸಿಬ್ಬಂದಿ , ಅಡುಗೆ ತಯಾರಿಕರಿಗಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಈ ಕೊವಿಡ್ ಕೇರ್ ಸೆಂಟರ್ ಆಸ್ಪತ್ರೆ ಮಾದರಿಯ ಸೌಕರ್ಯ ಕಲ್ಪಿಸಿಕೊಡಲಿದ್ದು, ಕೊವಿಡ್ ರೋಗಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೊವಿಡ್ ಪೀಡತರಿಗೆ ಹೋಂ ಐಸೊಲೇಷನ್ ಬದಲಿಗೆ ಕೊವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆ ಮೂಲಕ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಜಿಲ್ಲಾಡಳಿತ ಸಜ್ಜಾಗಿದೆ. ಜಿಲ್ಲಾಡಳಿತದ ಈ ಯೋಜನೆ ಎಷ್ಟರ ಮಟ್ಟಿಗೆ ಯಶಸ್ಸು ಕಾಣಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:

‘ನಾಲ್ವರು ಆಪ್ತರನ್ನು ಕಳೆದುಕೊಂಡೆ..ನನ್ನ ಹಳ್ಳಿಯಲ್ಲಿ ಸಾಲುಸಾಲು ಹೆಣಗಳು ಬೀಳುತ್ತಿವೆ’-ಕೊರೊನಾ ಭೀಕರತೆ ಬಿಚ್ಚಿಟ್ಟ ನಾಗತಿಹಳ್ಳಿ ಚಂದ್ರಶೇಖರ್​

ಚಿತ್ರದುರ್ಗದಲ್ಲಿ ನೂರು‌ ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ಧತೆ; ಜಿಲ್ಲಾಡಳಿತದ ಜತೆ ಕೈ ಜೊಡಿಸಿದ ವೇದಾಂತ ಮೈನ್ಸ್ ಸಂಸ್ಥೆ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ