AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಗಿಳಿದು ಧರಣಿ ನಡೆಸಿದ ಚಿತ್ರದುರ್ಗ ರೈತರು; ನ್ಯಾಯ ಕೊಡಿಸುವ ಭರವಸೆ ನೀಡಿದ ಮಾಜಿ ಸಚಿವ

ರೈತರ ಪ್ರತಿಭಟನೆಗೆ ಹೊಳಲ್ಕೆರೆ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಸಾಥ್ ನೀಡಿದರು. ಈ ವೇಳೆ ಪ್ರತಿಕ್ರಿಯಿಸಿದ ಅವರು ನಾನು ಸಮಾಜ ಕಲ್ಯಾಣ ಸಚಿವನಾಗಿದ್ದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಗಂಗಾ ಕಲ್ಯಾಣ ಯೋಜನೆ ಅಡಿ 600 ಕೊಳವೆಬಾವಿ ತಂದಿದ್ದೆ.

ಬೀದಿಗಿಳಿದು ಧರಣಿ ನಡೆಸಿದ ಚಿತ್ರದುರ್ಗ ರೈತರು; ನ್ಯಾಯ ಕೊಡಿಸುವ ಭರವಸೆ ನೀಡಿದ ಮಾಜಿ ಸಚಿವ
ರೈತರಿಗೆ ಭರವಸೆ ನೀಡಿದ ಮಾಜಿ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ
sandhya thejappa
sandhya thejappa|

Updated on: Mar 25, 2021 | 3:31 PM

Share

ಚಿತ್ರದುರ್ಗ: ಬಯಲು ಸೀಮೆ ರೈತರ ಕೃಷಿ ಕಾಯಕಕ್ಕೆ ಕೊಳವೆ ಬಾವಿಯೇ ಮೂಲ ಆಧಾರ. ಆದರೆ ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ಗಂಗಾ ಕಲ್ಯಾಣ ಯೋಜನೆಯ ಸ್ಥಿತಿ ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ ರೈತರು ಬೀದಿಗಿಳಿದು ಅನಿರ್ಧಿಷ್ಠಾವಧಿ ಹೋರಾಟಕ್ಕೆ ಇಳಿದರು.

2017-18ರಲ್ಲಿ ಹೊಳಲ್ಕೆರೆ ಕ್ಷೇತ್ರಕ್ಕೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 600 ಕೊಳವೆ ಬಾವಿಗಳು ಮಂಜೂರಾಗಿದ್ದು, ಫಲಾನುಭವಿಗಳ ಆಯ್ಕೆ ಪಟ್ಟಿಯೂ ಅಂತಿಮವಾಗಿದೆ. ಆದರೆ ತದನಂತರ ಆಯ್ಕೆಯಾಗಿ ಬಂದ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿರುವ ಆಯ್ಕೆ ಪಟ್ಟಿ ಎಂಬ ಕಾರಣಕ್ಕೆ ತಡೆ ಹಿಡಿದಿದ್ದಾರೆ. ಕಳೆದ ಮೂರು ವರ್ಷದಿಂದ ಯಾರಿಗೂ ಕೊಳವೆ ಬಾವಿ ಯೋಜನೆ ನೀಡಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ನೂರಾರು ಜನ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದ್ದು ರೈತ ಸಂಘದ ನೇತೃತ್ವದಲ್ಲಿ ಅನಿರ್ಧಿಷ್ಠಾವಧಿ ಧರಣಿ ನಡೆಸಿದ್ದಾರೆ. ಸರ್ಕಾರ ಮತ್ತು ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ರಾಜಕಾರಣ ಬದಿಗೊತ್ತಿ ಕೂಡಲೆ ರೈತರಿಗೆ ಕೊಳವೆ ಬಾವಿ ಕೊರೆಸಬೇಕೆಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ಧರಣಿ ನಡೆಸಿದ ರೈತರು

ರೈತರ ಪ್ರತಿಭಟನೆಗೆ ಹೊಳಲ್ಕೆರೆ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಸಾಥ್ ನೀಡಿದರು. ಈ ವೇಳೆ ಪ್ರತಿಕ್ರಿಯಿಸಿದ ಅವರು ನಾನು ಸಮಾಜ ಕಲ್ಯಾಣ ಸಚಿವನಾಗಿದ್ದ ಸಂದರ್ಭದಲ್ಲಿ ಕ್ಷೇತ್ರಕ್ಕೆ ಗಂಗಾ ಕಲ್ಯಾಣ ಯೋಜನೆ ಅಡಿ 600 ಕೊಳವೆ ಬಾವಿ ತಂದಿದ್ದೆ. ನಿಯಮಾನುಸಾರವೇ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗಿದೆ. ಆದರೆ ಕೊಳವೆ ಬಾವಿ ಕೊರೆಯುವುದನ್ನು ತಡೆ ಹಿಡಿದು ಹೃದಯವೇ ಇಲ್ಲದ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಜನ ವಿರೋಧಿ ನೀತಿಯಿಂದ ನಡೆಯುತ್ತಿದ್ದಾರೆ. ಶಾಸಕರಾಗಿ‌ ತಿನ್ನುವ ತಟ್ಟೆ ಕಸಿದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ನಾನು ರೈತರ ಪರವಾಗಿ ನಿಲ್ಲುತ್ತೇನೆ ಎಂದು ರೈತ ಚಳುವಳಿ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರ ಗಮನಕ್ಕೆ ತಂದು ರೈತರಿಗೆ ನ್ಯಾಯ ಕೊಡಿಸುವ ಕೆಲಸ ಭರವಸೆ ನೀಡಿದರು.

ಇದನ್ನೂ ಓದಿ

ಸೋಲಿಗರ ಜಮೀನಿನಲ್ಲಿ ಬೋರ್​ವೆಲ್ ಕೊರೆಯಲು ಅರಣ್ಯ ಇಲಾಖೆ ಹಸ್ತಕ್ಷೇಪ; ಸಮಸ್ಯೆ ಬಗೆಹರಿಸಲು ಚಾಮರಾಜನಗರ ಜಿಲ್ಲಾಡಳಿತ ಭರವಸೆ

ಏಕಪತ್ನಿ ವ್ರತಸ್ಥ: ಬಾಯಿ ತೆಗೆದರೆ ರಾಮನ ಪಕ್ಷದವರು ಅಂತಾರೆ.. ಆದ್ರೆ ಅವರ ಬಾಯಲ್ಲಿ ಇಂತಹ ಮಾತುಗಳು ಬರುತ್ತಿವೆ -ಲಕ್ಷ್ಮೀ‌ ಹೆಬ್ಬಾಳ್ಕರ್

Follow Us
sandhya thejappa
sandhya thejappa
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ