AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ನಿರ್ಮಾಣ ಕಾರ್ಯ ವಿಳಂಬ; ಚಿತ್ರದುರ್ಗದ ರೈತರಿಂದ ಆಕ್ರೋಶ

ಕಳೆದ ಮೂರು ವರ್ಷದಿಂದ ಯಾರಿಗೂ ಕೊಳವೆ ಬಾವಿ ಯೋಜನೆ ನೀಡಿಲ್ಲ. ಹೀಗಾಗಿ, ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದ್ದು ರೈತ ಸಂಘದ ನೇತೃತ್ವದಲ್ಲಿ ಅನೇಕ ಸಲ ಪ್ರತಿಭಟನೆ, ಧರಣಿ ನಡೆಸಲಾಗಿದೆ. ಕೊವಿಡ್ ನೆಪ ಹೇಳಿ ಧರಣಿ ಬಿಡಿಸಲಾಯಿತು. ಆದರೆ ಈವರೆಗೆ ರೈತರಿಗೆ ಕೊಳವೆ ಬಾವಿ ನೀಡಿಲ್ಲ ಎಂದು ಹೊಳಲ್ಕೆರೆ ರೈತ ಸಂಘದ ಅಧ್ಯಕ್ಷ್ಯ ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ನಿರ್ಮಾಣ ಕಾರ್ಯ ವಿಳಂಬ; ಚಿತ್ರದುರ್ಗದ ರೈತರಿಂದ ಆಕ್ರೋಶ
ಕೊಳವೆ ಬಾವಿ
TV9 Web
| Edited By: |

Updated on: Jul 06, 2021 | 8:11 AM

Share

ಚಿತ್ರದುರ್ಗ: ಮಳೆ ಹೆಚ್ಚಾಗಿ ಆಗದ ಬಯಲು ಸೀಮೆಯ ರೈತರ ಪಾಲಿಗೆ ಕೊಳವೆ ಬಾವಿಯೇ ಮೂಲಾಧಾರ. ಹೀಗಾಗಿ ಜಿಲ್ಲೆಯಲ್ಲಿ ಕೊಳವೆ ಬಾವಿಯ ಕನಸು ಹೊತ್ತು ಅನೇಕ ವರ್ಷಗಳಿಂದ ರೈತರು ಕಾಯುತ್ತಿದ್ದಾರೆ. ಆದರೆ ರೈತರ ನಿರೀಕ್ಷೆ ಹುಸಿಯಾಗಿದ್ದು, ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಕೊಳವೆ ಬಾವಿ ನಿರ್ಮಾಣ ಕಾರ್ಯ ಮಾತ್ರ ಆರಂಭವಾಗಿಲ್ಲ. ಇದರಿಂದ ಬೇಸತ್ತ ಚಿತ್ರದುರ್ಗದ ರೈತರು ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ ಹೋರಾಟಕ್ಕಿಳಿದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ. ಸಮಾಜ ಕಲ್ಯಾಣ ಸಚಿವರು ಪ್ರತಿನಿಧಿಸುವ ಜಿಲ್ಲೆಯಲ್ಲೇ ರಾಜಕೀಯ ಮೇಲಾಟದಿಂದಾಗಿ ಗಂಗಾಕಲ್ಯಾಣ ಯೋಜನೆ ಹಳ್ಳ ಹಿಡಿದಿದ್ದು, ಸಹಜವಾಗಿಯೇ ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

2017-18ರಲ್ಲಿ ಹೊಳಲ್ಕೆರೆ ಕ್ಷೇತ್ರಕ್ಕೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 600 ಕೊಳವೆ ಬಾವಿಗಳು ಮಂಜೂರಾಗಿದ್ದು, ಫಲಾನುಭವಿಗಳ ಆಯ್ಕೆ ಪಟ್ಟಿಯೂ ಅಂತಿಮವಾಗಿದೆ. ಆದರೆ ತದನಂತರ ಆಯ್ಕೆಯಾಗಿ ಬಂದ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿರುವ ಅದರಲ್ಲೂ ಹೊಳಲ್ಕೆರೆ ಕಾಂಗ್ರೆಸ್ ಶಾಸಕ ಹೆಚ್.ಆಂಜನೇಯ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಸಿದ್ಧಪಡಿಸಿದ ಪಟ್ಟಿ ಎಂಬ ಕಾರಣಕ್ಕೆ ತಡೆ ಹಿಡಿಯಲಾಗಿದೆ. ಇಬ್ಬರ ರಾಜಕೀಯ ದ್ವೇಷಕ್ಕೆ ರೈತರು ಬಲಿಪಶುಗಳಾಗುವಂತಾಗಿದೆ. ಕಳೆದ ಮೂರು ವರ್ಷದಿಂದ ಯಾರಿಗೂ ಕೊಳವೆ ಬಾವಿ ಯೋಜನೆ ನೀಡಿಲ್ಲ. ಹೀಗಾಗಿ, ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದ್ದು ರೈತ ಸಂಘದ ನೇತೃತ್ವದಲ್ಲಿ ಅನೇಕ ಸಲ ಪ್ರತಿಭಟನೆ, ಧರಣಿ ನಡೆಸಲಾಗಿದೆ. ಕೊವಿಡ್ ನೆಪ ಹೇಳಿ ಧರಣಿ ಬಿಡಿಸಲಾಯಿತು. ಆದರೆ ಈವರೆಗೆ ರೈತರಿಗೆ ಕೊಳವೆ ಬಾವಿ ನೀಡಿಲ್ಲ ಎಂದು ಹೊಳಲ್ಕೆರೆ ರೈತ ಸಂಘದ ಅಧ್ಯಕ್ಷ್ಯ ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಬಗ್ಗೆ ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಅವರನ್ನು ಕೇಳಿದರೆ ಹೊಳಲ್ಕೆರೆ ತಾಲೂಕಿನ ಗಂಗಾ ಕಲ್ಯಾಣ ಯೋಜನೆಯ ಆಯ್ಕೆ ಪಟ್ಟಿ ಗೊಂದಲ ಕೋರ್ಟಿನಲ್ಲಿತ್ತು. ಹೀಗಾಗಿ, ವಿಳಂಬ ಆಗಿದ್ದು, ಶೀಘ್ರ ಗಂಗಾ ಕಲ್ಯಾಣ ಯೋಜನೆ ಅಡಿ ಕೊಳವೆ ಬಾವಿ ನೀಡಲಾಗುವುದು. ಎರಡು ದಿನಗಳ ಹಿಂದಷ್ಟೇ ಗಂಗಾ ಕಲ್ಯಾಣ ಯೋಜನೆ ಅಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಖಾತೆಗೆ ಹಣ ಸಂದಾಯ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ಹೊಳಲ್ಕೆರೆ ಕ್ಷೇತ್ರದಲ್ಲಿ ರೈತರಿಗೆ ಕೊಳವೆ ಬಾವಿ ನೀಡುವ ವಿಚಾರದಲ್ಲಿ ರಾಜಕಾರಣ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಹೀಗಾಗಿ, ಸರ್ಕಾರ ಮತ್ತು ಸಚಿವರು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಆ ಮೂಲಕ ರೈತರಿಗೆ ನೆರವಿನ ಹಸ್ತ ಚಾಚಬೇಕಿದೆ.

ಇದನ್ನೂ ಓದಿ: ಅಂತರ್ಜಲ ಅಧ್ಯಯನಕ್ಕಾಗಿಯೇ ರಾಜ್ಯದ 1199 ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಯಲು ಸಿದ್ಧತೆ

ಸಾವಯವ ಕೃಷಿ ಮೂಲಕ ಸೊಪ್ಪು ಬೆಳೆದು ಸ್ವಾವಲಂಬಿ ಬದುಕು ಕಟ್ಟಿಕೊಂಡ ದಾವಣಗೆರೆ ರೈತ; ಸುಡು ಬಿಸಿಲಿನಲ್ಲಿ ಸೊಪ್ಪಿನ ಸಂತೆ

Follow Us
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ