ಚಿತ್ರದುರ್ಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಾಟ: ಮಹತ್ತರ ಕೆಡಿಪಿ ಸಭೆಯನ್ನು ಮೊಬೈಲ್ ಫ್ಲ್ಯಾಶ್ ಲೈಟ್ ಬೆಳಕಲ್ಲಿ ನಡೆಸಿದ ಸಚಿವ ಡಿ ಸುಧಾಕರ್!  

ಇಲ್ಲಿ ಉದ್ಭವಿಸುವ ಸಮಸ್ಯೆ ಏನೆಂದರೆ, ಸಭೆ ನಡೆಯುತ್ತಿದ್ದ ಹಾಲ್ ನಲ್ಲಿ ಬೆಳಕಿಗಾಗಿ ಒಂದು ಪರ್ಯಾಯ ವ್ಯವಸ್ಥೆ ಇರಲಿಲ್ಲವೇ ಅನ್ನೋದು. ಕೆಡಿಪಿಯಂಥ ಮಹತ್ತರ ಸಭೆಯನ್ನು ಮೊಬೈಲ್ ಫ್ಲ್ಯಾಶ್ ಲೈಟ್ ಗಳಲ್ಲಿ ಮಾಡೋದಾ? ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು ಅಂಡರ್ ಪರ್ಫಾರ್ಮಿಂಗ್ ಅಧಿಕಾರಿಗಳಿಗೆ ವರದಾನವಾಗಿ ಲಭ್ಯವಾಗಿರುತ್ತದೆ! ಸಚಿವರು ರೇಗಾಡೋದಾದ್ರೆ ರೇಗಾಡಲಿ ತಮ್ಮ ಮುಖವಂತೂ ಯಾರಿಗೂ ಕಾಣಲ್ಲ!! 

ಚಿತ್ರದುರ್ಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಾಟ: ಮಹತ್ತರ ಕೆಡಿಪಿ ಸಭೆಯನ್ನು ಮೊಬೈಲ್ ಫ್ಲ್ಯಾಶ್ ಲೈಟ್ ಬೆಳಕಲ್ಲಿ ನಡೆಸಿದ ಸಚಿವ ಡಿ ಸುಧಾಕರ್!  
|

Updated on:Nov 08, 2023 | 4:46 PM

ಚಿತ್ರದುರ್ಗ: ಅಂಧೇರ ಛಾಯೆ ರಹೇ, ಕತ್ತಲೆ ಸಾಮ್ರಾಜ್ಯ, ಕತ್ತಲೆ ಭಾಗ್ಯ ಮೊದಲಾದ ಪದಗಳು ಈ ವಿಡಿಯೋ ನೋಡುವಾಗೆ ತಲೆಗೆ ಹೊಳೆಯದಿರಲಾರವು. ನಿಮಗೆ ನೆನಪಿರಬಹುದು, ಸಿದ್ದರಾಮಯ್ಯ (Siddaramaiah) ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ (2013-2018) ಹಲವು ಭಾಗ್ಯಗಳನ್ನು ಘೋಷಿಸಿದ್ದರು. ಒಮ್ಮೆ ವಿಧಾನಸಭಾ ಅಧಿವೇಶನ ನಡೆಯುತ್ತಿದ್ದಾಗ ಇದ್ದ್ದಕ್ಕಿದ್ದಂತೆ ವಿದ್ಯುತ್ ಪೂರೈಕೆ ಕಡಿತಗೊಂಡು ಸದನವನ್ನು ಕತ್ತಲೆ ಆವರಿಸಿತ್ತು. ಆಗ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ (KS EShwarappa), ‘ಕತ್ತಲೆ ಭಾಗ್ಯ!’ ಅಂತ ಜೋರಾಗಿ ಕೂಗಿದ್ದರು! ಅಂದಹಾಗೆ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ (D Sudhakar) ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದಾಗ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡಿತು. ರಾಜ್ಯದಲ್ಲಿ ಈ ವರ್ಷ ನೀರಿನ ಜೊತೆ ವಿದ್ಯುತ್ ಅಭಾವ ಸಹ ತಲೆದೋರಿದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೇಳೋದನ್ನು ಕನ್ನಡಿಗರೆಲ್ಲ ಕೇಳಿದ್ದಾರೆ. ಚಿತ್ರದುರ್ಗದಲ್ಲಿ ಕೆಡಿಪಿ ಸಭೆಯಲ್ಲಿ ವಿದ್ಯುತ್ ಸಮಸ್ಯೆ ಆಗಿದ್ದು ಓಕೆ, ರಾಜ್ಯದೆಲ್ಲೆಡೆ ಹೀಗೆ ಅಗುತ್ತಿದೆ, ಪ್ರಶ್ನೆ ಅದಲ್ಲ; ಇಲ್ಲಿ ಉದ್ಭವಿಸುವ ಸಮಸ್ಯೆ ಏನೆಂದರೆ, ಸಭೆ ನಡೆಯುತ್ತಿದ್ದ ಹಾಲ್ ನಲ್ಲಿ ಬೆಳಕಿಗಾಗಿ ಒಂದು ಪರ್ಯಾಯ ವ್ಯವಸ್ಥೆ ಇರಲಿಲ್ಲವೇ ಅನ್ನೋದು. ಕೆಡಿಪಿಯಂಥ ಮಹತ್ತರ ಸಭೆಯನ್ನು ಮೊಬೈಲ್ ಫ್ಲ್ಯಾಶ್ ಲೈಟ್ ಗಳಲ್ಲಿ ಮಾಡೋದಾ? ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು ಅಂಡರ್ ಪರ್ಫಾರ್ಮಿಂಗ್ ಅಧಿಕಾರಿಗಳಿಗೆ ವರದಾನವಾಗಿ ಲಭ್ಯವಾಗಿರುತ್ತದೆ! ಸಚಿವರು ರೇಗಾಡೋದಾದ್ರೆ ರೇಗಾಡಲಿ ತಮ್ಮ ಮುಖವಂತೂ ಯಾರಿಗೂ ಕಾಣಲ್ಲ!!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published On - 4:45 pm, Wed, 8 November 23

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ