AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಲೋಕಸಭಾ ಅಖಾಡದಲ್ಲಿ ಕೋಟಿ ಕುಬೇರರ ಕಾಳಗ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿ ಆಸ್ತಿ ಎಷ್ಟಿದೆ ಗೊತ್ತಾ?

ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಇಂದು ನಾಮಪತ್ರ ಸಲ್ಲಿಸಿದ್ದು, 4.43 ಕೋಟಿ ರೂ. ಆಸ್ತಿ ಒಡೆಯ ಎಂದು ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. ಅದೇ ರೀತಿಯಾಗಿ ಕಾಂಗ್ರೆಸ್​ ಅಭ್ಯರ್ಥಿ ಬಿ.ಎನ್​​ ಚಂದ್ರಪ್ಪ ಕೂಡ ನಾಮಪತ್ರ ಸಲ್ಲಿಸಿದ್ದು, 14.33 ಕೋಟಿ ರೂ. ಆಸ್ತಿಯ ಒಡೆಯ ಎಂದು ಹೇಳಿದ್ದಾರೆ.

ಚಿತ್ರದುರ್ಗ ಲೋಕಸಭಾ ಅಖಾಡದಲ್ಲಿ ಕೋಟಿ ಕುಬೇರರ ಕಾಳಗ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿ ಆಸ್ತಿ ಎಷ್ಟಿದೆ ಗೊತ್ತಾ?
ಬಿಎನ್ ​ಚಂದ್ರಪ್ಪ, ಗೋವಿಂದ ಕಾರಜೋಳ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Apr 04, 2024 | 10:14 PM

Share

ಚಿತ್ರದುರ್ಗ, ಏಪ್ರಿಲ್​ 04: ಕೋಟೆನಾಡು ಚಿತ್ರದುರ್ಗ (Chitradurga) ಲೋಕಸಭಾ ಕ್ಷೇತ್ರದಿಂದ ಮಾಜಿ ಡಿಸಿಎಂ ಗೋವಿಂದ ಕಾರಜೋಳರನ್ನು ಬಿಜೆಪಿ ಕಣಕ್ಕಿಳಿಸಿದೆ. ಇಂದು ಗಾಂಧಿ ವೃತ್ತದಿಂದ ಡಿಸಿ ಕಚೇರಿವರೆಗೆ ರೋಡ್ ಶೋ ಮೂಲಕ ಮಧ್ಯಾಹ್ನ 3ಗಂಟೆ ವೇಳೆಗೆ ಡಿಸಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇನ್ನು ಗೋವಿಂದ ಕಾರಜೋಳ್​ ತಮ್ಮ ಬಳಿ 4.43 ಕೋಟಿ ರೂ. ಮೌಲ್ಯದ ಆಸ್ತಿ ಇರುವುದಾಗಿ ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. ಜೊತೆಗೆ ಕಾರಜೋಳ ಬಳಿ ವಾಹನ ಇಲ್ಲ, ಸಾಲ ಇಲ್ಲ, ಯಾವುದೇ ಕೇಸ್ ಸಹ ಇಲ್ಲ ಎಂದು ತಿಳಿಸಿದ್ದಾರೆ.

4.43 ಕೋಟಿ ರೂ. ಆಸ್ತಿ ಒಡೆಯ ಎನ್‌ಡಿಎ ಅಭ್ಯರ್ಥಿ ಕಾರಜೋಳ 

  • ಗೋವಿಂದ ಕಾರಜೋಳ ಚರಾಸ್ತಿ ಮೌಲ್ಯ 1.26 ಕೋಟಿ ರೂ.
  • ಸ್ಥಿರಾಸ್ತಿ ಮೌಲ್ಯ 1.62 ಕೋಟಿ ರೂ.
  • ಒಟ್ಟು ಆಸ್ತಿ 2.88 ಕೋಟಿ ರೂ.
  • ಕಾರಜೋಳ ಪತ್ನಿ ಶಾಂತಾದೇವಿ ಚರಾಸ್ತಿ ಮೌಲ್ಯ 73.13 ಲಕ್ಷ ರೂ.
  • ಶಾಂತಾದೇವಿ ಬಳಿ 65 ಲಕ್ಷ, ಕಾರಜೋಳ ಬಳಿ 9 ಲಕ್ಷ ನಗದು ಇದೆ.
  • ಪತ್ನಿ ಬಳಿ 2.5 ಲಕ್ಷ ರೂ. ಮೌಲ್ಯದ ಚಿನ್ನ, ಕಾರಜೋಳ ಬಳಿ ಚಿನ್ನ ಇಲ್ಲ.
  • ಪತ್ನಿ ಬಳಿ 1 ಕೆಜಿ 50 ಗ್ರಾಂ ಬೆಳ್ಳಿ ಇದೆ, ಕಾರಜೋಳ ಬಳಿ ಬೆಳ್ಳಿ ಇಲ್ಲ.

14.33 ಕೋಟಿ ರೂ. ಆಸ್ತಿಯ ಒಡೆಯ ಕಾಂಗ್ರೆಸ್​​ ಅಭ್ಯರ್ಥಿ ಬಿ.ಎನ್​​ ಚಂದ್ರಪ್ಪ

ಅದೇ ರೀತಿಯಾಗಿ ಕಾಂಗ್ರೆಸ್​ ಅಭ್ಯರ್ಥಿ ಬಿ.ಎನ್​​ ಚಂದ್ರಪ್ಪ ಕೂಡ ಇಂದು ಡಿಸಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದು, 14.33 ಕೋಟಿ ರೂ. ಆಸ್ತಿಯ ಒಡೆಯ ಎಂದು ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. 28.85 ಲಕ್ಷ ರೂ. ಸದ್ಯ ತಮ್ಮ ಕೈಯಲ್ಲಿ ಹೊಂದಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಂಡಾಯ ಶಮನ: ಬಿಜೆಪಿ ಶಾಸಕ ಚಂದ್ರಪ್ಪ ಮನವೊಲಿಕೆ ಯಶಸ್ವಿ; ನಿಟ್ಟುಸಿರು ಬಿಟ್ಟ ಗೋವಿಂದ ಕಾರಜೋಳ

ಪತ್ನಿ ಕಾವ್ಯಾ ಬಳಿ 1.22 ಲಕ್ಷ ರೂ, ಪುತ್ರ ಬಿ.ಸಿ.ಉತ್ಸವ್ ಬಳಿ 1.1 ಲಕ್ಷ ರೂ, 210 ಗ್ರಾಂ, 940 ಗ್ರಾಂ, 180 ಗ್ರಾಂ ಸೇರಿ ಒಟ್ಟು 72.46 ಲಕ್ಷ ಮೌಲ್ಯದ 1,330 ಗ್ರಾಂ ಚಿನ್ನ ಹೊಂದಿದ್ದಾರೆ. 84.90 ಲಕ್ಷ ರೂ., 35.47 ಲಕ್ಷ ರೂ., ಬ್ಯಾಂಕ್ ಖಾತೆಯಲ್ಲಿ 1.32 ಲಕ್ಷ ರೂ., 20.68 ಲಕ್ಷ ರೂ., 5.21 ಲಕ್ಷ ರೂ ಹೊಂದಿದ್ದು ಕುಟುಂಬದ ಒಟ್ಟು ಚರಾಸ್ತಿ 2.25 ಕೋಟಿ ರೂ.

ಸ್ಥಿರಾಸ್ತಿ: ವಿವರ ಕ್ರಮವಾಗಿ 10 ಎಕರೆ ಅಡಿಕೆ ತೋಟ ಸೇರಿ 22 ಎಕರೆ 16 ಗುಂಟೆ ಜಮೀನು 9.55 ಕೋಟಿ ರೂ. ಮೌಲ್ಯದ್ದಾಗಿದೆ. ಪತ್ನಿ ಹೆಸರಲ್ಲಿ ಜಮೀನು ಇಲ್ಲ. ಪುತ್ರನ ಹೆಸರಲ್ಲಿ 2 ಎಕರೆ, 24 ಗುಂಟೆ ಸೇರಿ 1.35 ಕೋಟಿ ರೂ.  ಮೌಲ್ಯ ಆಸ್ತಿ ಹೊಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ, ಚಿತ್ರದುರ್ಗ ಹಾಲಿ ಎಂಪಿಗೆ ಕೊಕ್, ಬಿಎಸ್​ವೈ ಆಪ್ತನಿಗೆ ಮಣೆ

ಬಿ ಎನ್ ಚಂದ್ರಪ್ಪ ಅವರು ನಿವೇಶನ-6, ಚದರ ಅಡಿ-15,028, ಮೌಲ್ಯ-53.47 ಲಕ್ಷ ರೂ., ವಾಣಿಜ್ಯ ಕಟ್ಟಡ-2, ಮೌಲ್ಯ-8.6 ಕೋಟಿ ರೂ., ಕಾರು-30 ಲಕ್ಷ ರೂ., ಸಾಲ-89.71 ಲಕ್ಷ ರೂ., ಕಾವ್ಯಾ: 1.25 ಕೋಟಿ ರೂ. ಮೌಲ್ಯದ ಮನೆ, ಪುತ್ರ‌ ಉತ್ಸವ್ ಹೆಸರಲ್ಲಿ 9.48 ಲಕ್ಷ ರೂ. ವಾಹನ ಸಾಲ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು