AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಆಸ್ಪತ್ರೆಗಳಲ್ಲಿ ಇನ್ನು ಬಗೆಹರಿದಿಲ್ಲ ಬೆಡ್ ಸಮಸ್ಯೆ; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರ ಆಕ್ರೋಶ

ಚಿತ್ರದುರ್ಗದಲ್ಲಿ ಸರ್ಕಾರಿ‌ ಕೊವಿಡ್‌ ಆಸ್ಪತ್ರೆ ಸೇರಿ ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಫುಲ್ ಆಗಿವೆ. ಹೀಗಾಗಿ, ಸೋಂಕಿತರು ಬೆಡ್​ಗಾಗಿ‌ ಆಸ್ಪತ್ರೆಗಳಿಗೆ ಅಲೆದರೂ ಸಕಾಲಕ್ಕೆ ಬೆಡ್ ಸಿಗುತ್ತಿಲ್ಲ. ಬೆಡ್ ಸಿಕ್ಕರೂ ಸಮರ್ಪಕ ಆಕ್ಸಿಜನ್ ಮತ್ತು‌ ಚಿಕಿತ್ಸೆ ಸಿಗದೆ ಹೈರಾಣಾಗುವ ದುಸ್ಥಿತಿ‌ ಎದುರಾಗಿದೆ.

ಚಿತ್ರದುರ್ಗ ಆಸ್ಪತ್ರೆಗಳಲ್ಲಿ ಇನ್ನು ಬಗೆಹರಿದಿಲ್ಲ ಬೆಡ್ ಸಮಸ್ಯೆ; ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರ ಆಕ್ರೋಶ
ಪ್ರಾತಿನಿಧಿಕ ಚಿತ್ರ
preethi shettigar
|

Updated on: May 17, 2021 | 5:40 PM

Share

ಚಿತ್ರದುರ್ಗ : ಕೊರೊನಾ ಎರಡನೇ ಅಲೆ ದೇಶದೆಲ್ಲೇಡೆ ತೀವ್ರವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇನ್ನು ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಸಿನಿಮಾ ನಟ-ನಟಿಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದು, ಸೋಂಕಿತರ ನೆರವಿಗೆ ನಿಂತಿದ್ದಾರೆ. ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೊವಿಡ್ ಪೀಡತರಿಗೆ ಬೆಡ್ ಸಿಗದ‌‌ ದುಸ್ಥಿತಿ ನಿರ್ಮಾಣವಾಗಿದೆ. ಕೊವಿಡ್ ಪೀಡಿತರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕಾದ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಸರ್ಕಾರಿ‌ ಕೊವಿಡ್‌ ಆಸ್ಪತ್ರೆ ಸೇರಿ ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಫುಲ್ ಆಗಿವೆ. ಹೀಗಾಗಿ, ಸೋಂಕಿತರು ಬೆಡ್​ಗಾಗಿ‌ ಆಸ್ಪತ್ರೆಗಳಿಗೆ ಅಲೆದರೂ ಸಕಾಲಕ್ಕೆ ಬೆಡ್ ಸಿಗುತ್ತಿಲ್ಲ. ಬೆಡ್ ಸಿಕ್ಕರೂ ಸಮರ್ಪಕ ಆಕ್ಸಿಜನ್ ಮತ್ತು‌ ಚಿಕಿತ್ಸೆ ಸಿಗದೆ ಹೈರಾಣಾಗುವ ದುಸ್ಥಿತಿ‌ ಎದುರಾಗಿದೆ. ಹೀಗಿದ್ದರೂ ಜಿಲ್ಲಾಡಳಿತ ಮತ್ತು ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರಾದ ಮಿಥುನ್ ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ‌ ಬಿ.ಶ್ರೀರಾಮುಲು‌ ಅವರನ್ನು ಕೇಳಿದರೆ ಸರ್ಕಾರಿ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಬೆಡ್ ಫುಲ್ಲಾದಾಗ ಖಾಸಗಿ ಆಸ್ಪತ್ರೆಗಳಿಗೆ ರೆಫರ್‌‌ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 50ರಷ್ಟು‌ ಬೆಡ್ ಸರ್ಕಾರಿ ಕೋಟಾದಡಿ ಮೀಸಲಿರಿಸಿರುತ್ತಾರೆ.‌ ಸದ್ಯ ನಾವು ಆಕ್ಸಿಜನ್ ಪೂರೈಕೆಗಾಗಿ ಒದ್ದಾಡುತ್ತಿದ್ದೇವೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ವೇದಾಂತ ಮೈನ್ಸ್ ಸಂಸ್ಥೆ ನೂರು ಬೆಡ್​ನ ಕೊವಿಡ್ ಆಸ್ಪತ್ರೆ ನಿರ್ಮಿಸಿ ಕೊಡಲಿದೆ. ಕೆಲವೇ ದಿನದಲ್ಲಿ ಎಲ್ಲಾ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ‌‌ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್ ಸಿಗದ ದುಸ್ಥಿತಿ‌ ನಿರ್ಮಾಣ ಆಗಿದೆ. ಹೀಗಾಗಿ, ಜನ ರೊಚ್ಚಿಗೇಳುವ ಮುನ್ನ ಜಿಲ್ಲಾಡಳಿತ ಮತ್ತು‌ ಆರೋಗ್ಯ ಇಲಾಖೆ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಿ ಜನರ ಪ್ರಾಣ ಉಳಿಸುವ ಕೆಲಸ‌ ಮಾಡಬೇಕಿದೆ.

ಇದನ್ನೂ ಓದಿ:

ಚಿಕ್ಕಬಳ್ಳಾಪುರ ಸೋಂಕಿತರಿಗೆ ಬೆಡ್ ಮೀಸಲು ವಿಚಾರ; ಸಂಕಷ್ಟದ ಸಮಯದಲ್ಲಿ ಈ ಕ್ರಮ ಅಮಾನವೀಯ: ಕೃಷ್ಣ ಭೈರೇಗೌಡ

30 ಬೆಡ್​ಗಳಿರುವ ಆಸ್ಪತ್ರೆಗಳಲ್ಲಿ ಬೆಡ್​ಗಳು ಸಿಗಲಿದೆ, ಕೆಲವೇ ದಿನಗಳಲ್ಲಿ ಬೆಡ್ ಸಮಸ್ಯೆ ಇಲ್ಲದಂತೆ ಕ್ರಮ ಕೈಗೊಳ್ಳುತ್ತೇವೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ