AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮ ಬೀಳುತ್ತಿರುವ ಬಗ್ಗೆ ಅಧ್ಯಯನ ಪ್ರವಾಸ; ಹಿಮಾಲಯ ತೋರಿಸಲು ಕುಟುಂಬಸ್ಥರನ್ನು ಕರೆದೊಯ್ಯುತ್ತಿರುವೆ: ಎ ನಾರಾಯಣಸ್ವಾಮಿ

ಕೇಂದ್ರದ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಪ್ರಶ್ನಿಸಿದಾಗ, ಜುಲೈ 8ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಿದೆ. ಆದರೆ, ರಾಜ್ಯದಿಂದ ಯಾಱರು ಸಚಿವರಾಗುತ್ತಾರೆಂದು ನನಗೆ ಗೊತ್ತಿಲ್ಲ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.

ಹಿಮ ಬೀಳುತ್ತಿರುವ ಬಗ್ಗೆ ಅಧ್ಯಯನ ಪ್ರವಾಸ; ಹಿಮಾಲಯ ತೋರಿಸಲು ಕುಟುಂಬಸ್ಥರನ್ನು ಕರೆದೊಯ್ಯುತ್ತಿರುವೆ: ಎ ನಾರಾಯಣಸ್ವಾಮಿ
ಎ ನಾರಾಯಣಸ್ವಾಮಿ
TV9 Web
| Edited By: |

Updated on:Jul 06, 2021 | 4:47 PM

Share

ದೇವನಹಳ್ಳಿ: ನಾನು 2 ಸ್ಟ್ಯಾಂಡಿಂಗ್​ ಕಮಿಟಿಯಲ್ಲಿದ್ದೇನೆ, ನಾಳೆ ಸಭೆ ಇದೆ. ನಾಳಿನ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗುತ್ತಿದ್ದೇನೆ ಎಂದು ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಹೇಳಿಕೆ ನೀಡಿದ್ದಾರೆ. ಅಧ್ಯಯನ ಪ್ರವಾಸ, ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಹಿಮಾಲಯದಲ್ಲಿ ಹಿಮ ಬೀಳುತ್ತಿರುವ ಬಗ್ಗೆ ಅಧ್ಯಯನ ಪ್ರವಾಸ ನಡೆಸಲಾಗುತ್ತಿದೆ. ಹಿಮಾಲಯ ತೋರಿಸಲು ಕುಟುಂಬಸ್ಥರನ್ನೂ ಕರೆದೊಯ್ಯುತ್ತಿರುವೆ. ಯಾವಾಗಲೂ ಎಲ್ಲೂ ಕರೆದೊಯ್ಯಲ್ಲ ಎಂದು ಹೇಳುತ್ತಿದ್ದರು. ಹಾಗಾಗಿ ಕುಟುಂಬ ಸದಸ್ಯರನ್ನ ನನ್ನ ಜತೆ ಕರೆದೊಯ್ಯುತ್ತಿರುವೆ ಎಂದು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ನಾರಾಯಣಸ್ವಾಮಿ ಹೇಳಿದ್ದಾರೆ.

ಕೇಂದ್ರದ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಪ್ರಶ್ನಿಸಿದಾಗ, ಜುಲೈ 8ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಿದೆ. ಆದರೆ, ರಾಜ್ಯದಿಂದ ಯಾಱರು ಸಚಿವರಾಗುತ್ತಾರೆಂದು ನನಗೆ ಗೊತ್ತಿಲ್ಲ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. ನನಗೆ ಸಚಿವಸ್ಥಾನ ನೀಡುವ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಾನು ಶಾಸಕನಾಗಿದ್ದೆ, ಸಚಿವನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ನಾನು ಯಾವುದೇ ಹುದ್ದೆಗಳಿಗೆ ಆಸೆ ಪಟ್ಟವನಲ್ಲ, ಪಡೋದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸುತ್ತೇನೆ. ಪಕ್ಷದ ಸಾಮಾನ್ಯ ಕಾರ್ಯಕರ್ತನ ರೀತಿಯಲ್ಲಿ ದುಡಿಯುವೆ. ಪಕ್ಷದ ಸೂಚನೆಗಳನ್ನ ಪಾಲಿಸುತ್ತೇನೆ, ನನಗಿನ್ನೂ ಕರೆ ಬಂದಿಲ್ಲ. ಆದರೆ, ಸಚಿವ ಸಂಪುಟ ವಿಸ್ತರಣೆ ಕಾರ್ಕ್ರಮ ಕಣ್ತುಂಬಿಕೊಳ್ಳುತ್ತೇನೆ. ನನಗೆ ಕೇಂದ್ರ ಸಚಿವಸ್ಥಾನ ನೀಡಿದರೆ ನಿರ್ವಹಿಸುವ ಶಕ್ತಿಯಿದೆ. ಯಾವಾಗಲೂ ಖುಷಿಯಿಂದಿರುತ್ತೇನೆ, ಈಗಲೂ ನಗುತ್ತಿದ್ದೇನೆ ಎಂದು ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಮೇಲೆ ಕಣ್ಣಿಟ್ಟು ಗುರುವಾರ ಬೆಳಗ್ಗೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಮಣೆ

ಮೋದಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್​: ಗುರುವಾರದ ವಿಸ್ತರಣೆಯಲ್ಲಿ ಕರ್ನಾಟಕಕ್ಕೆ ಸಿಗಬಹುದೇ ಹೆಚ್ಚಿನ ಸ್ಥಾನ?

Published On - 4:40 pm, Tue, 6 July 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ