AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್​, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮುರುಘಾ ಶ್ರೀ

ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ  ಶ್ರೀ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಚೆಕ್​, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮುರುಘಾ ಶ್ರೀ
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
TV9 Web
| Edited By: |

Updated on:Sep 25, 2022 | 5:44 PM

Share

ಚಿತ್ರದುರ್ಗ: ಮಠದ ಶಾಲಾ ವಿದ್ಯಾರ್ಥಿನಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ  ಶ್ರೀ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೌದು.. ಮಠದ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್​ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದು, ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿದ್ದಾರೆ.

ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣ ಪರ ವಕೀಲರು ಚಿತ್ರದುರ್ಗದ ಸೆಷನ್​ ಕೋರ್ಟ್​ಗೆ ಮನವಿ ಮಾಡಿದ್ದರು. ಆದ್ರೆ, ಕೋರ್ಟ್, ಅನುಮತಿ ನಿರಾಕರಿಸಿ ಸೆ.20ರಂದು ಆದೇಶ ಹೊರಡಿಸಿತ್ತು.

ಮುರುಘಾ ಮಠದಿಂದ ನಡೆಸಲಾಗುತ್ತಿರುವ ಎಸ್​.ಜೆ.ಎಂ ವಿದ್ಯಾಪೀಠದ ಸುಮಾರು 5000 ನೌಕರರಿಗೆ ವೇತನ ನೀಡಲು ಚೆಕ್​ಗೆ ಅಧ್ಯಕ್ಷರಾದ ಶಿವಮೂರ್ತಿ ಶರಣರ ಸಹಿ ಅಗತ್ಯವಾಗಿದೆ ಎಂದು ವಕೀಲರು ವಾದ ಮಂಡಿಸಿದ್ದರು.

ಇದನ್ನೂ ಓದಿ: ಜೈಲಿನಲ್ಲಿರುವ ಮುರುಘಾ ಶ್ರೀ: ಮರುಘಾ ಮಠದ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ಇಲ್ಲದೆ ಪೀಕಲಾಟ!

ಇದಕ್ಕೆ ಪ್ರತಿಯಾಗಿ ಸರ್ಕಾರಿ ವಕೀಲರು ಆಕ್ಷೇಪಿಸಿ, ಕಾರಾಗೃಹದಲ್ಲಿವವರಿಗೆ ಸಹಿ ಮಾಡುವ ಅಧಿಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಶ್ರೀಮಠದ ಆಸ್ತಿ-ಪಾಸ್ತಿಗಳಿಗೆ ತೊಂದರೆಗಳಾಗುವ ಸಾಧ್ಯತೆಗಳು ಇರುತ್ತವೆ. ಈಗಾಗಲೇ ಪ್ರಭಾರಿ ಸ್ವಾಮೀಜಿ ಹಾಗೂ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಹೀಗಾಗಿ ಮುರುಘಾ ಶರಣರಿಗೆ ಸಹಿ ಹಾಕುವ ಅಧಿಕಾರ ಅಗತ್ಯವಿಲ್ಲ ಎಂದು ಪ್ರತಿವಾದ ಮಂಡಿಸಿದ್ದರು. ಅಂತಿಮವಾಗಿ ಕೋರ್ಟ್  ಚೆಕ್​ ಸಹಿ ಮಾಡಲು ಶ್ರಿಗಳಿಗೆ ಅವಕಾಶ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮುರುಘಾ ಶರಣರು ಹೈಕೋರ್ಟ್​ ಮೊರೆ ಹೋಗಿದ್ದಾರೆ.

ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ನೀಡಲು ಸಂಸ್ಥೆಯ ಅಧ್ಯಕ್ಷರಾಗಿರುವ ಮುರುಘಾ ಶ್ರೀ ಸಹಿ ಅಗತ್ಯವಾಗಿದೆ. ಆದ್ರೆ, ಮುರುಘಾ ಶ್ರೀ ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಇದ್ದಾರೆ. ಹೀಗಾಗಿ ಸಂಬಳವಿಲ್ಲದೆ ಮಠದ ಸಿಬ್ಬಂದಿ ಹಾಗೂ ಶಿಕ್ಷಕರು ಪರದಾಡುವಂತಾಗಿದೆ.

ಮುರುಘಾಶ್ರೀಗೆ ಸದ್ಯಕ್ಕೆ ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಚಿತ್ರದುರ್ಗ ಸೆಷನ್ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಆದ್ದರಿಂದ ಮುರುಘಾ ಶ್ರೀಗಳ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

Published On - 5:44 pm, Sun, 25 September 22

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ