AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್​, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮುರುಘಾ ಶ್ರೀ

ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ  ಶ್ರೀ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಚೆಕ್​, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮುರುಘಾ ಶ್ರೀ
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು
TV9 Web
| Edited By: |

Updated on:Sep 25, 2022 | 5:44 PM

Share

ಚಿತ್ರದುರ್ಗ: ಮಠದ ಶಾಲಾ ವಿದ್ಯಾರ್ಥಿನಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇರೆಗೆ ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ  ಶ್ರೀ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೌದು.. ಮಠದ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಚೆಕ್, ದಾಖಲೆಗಳಿಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಮಠದ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ವೇತನ ನೀಡಿವ ಸಲುವಾಗಿ ಚೆಕ್​ಗಳಿಗೆ ಸಹಿ ಹಾಕಲು ಅನುಮತಿ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದು, ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿದ್ದಾರೆ.

ಜೈಲಿನಿಂದಲೇ ಚೆಕ್, ದಾಖಲೆಗೆ ಸಹಿ ಹಾಕಲು ಅನುಮತಿ ಕೋರಿ ಮುರುಘಾ ಶರಣ ಪರ ವಕೀಲರು ಚಿತ್ರದುರ್ಗದ ಸೆಷನ್​ ಕೋರ್ಟ್​ಗೆ ಮನವಿ ಮಾಡಿದ್ದರು. ಆದ್ರೆ, ಕೋರ್ಟ್, ಅನುಮತಿ ನಿರಾಕರಿಸಿ ಸೆ.20ರಂದು ಆದೇಶ ಹೊರಡಿಸಿತ್ತು.

ಮುರುಘಾ ಮಠದಿಂದ ನಡೆಸಲಾಗುತ್ತಿರುವ ಎಸ್​.ಜೆ.ಎಂ ವಿದ್ಯಾಪೀಠದ ಸುಮಾರು 5000 ನೌಕರರಿಗೆ ವೇತನ ನೀಡಲು ಚೆಕ್​ಗೆ ಅಧ್ಯಕ್ಷರಾದ ಶಿವಮೂರ್ತಿ ಶರಣರ ಸಹಿ ಅಗತ್ಯವಾಗಿದೆ ಎಂದು ವಕೀಲರು ವಾದ ಮಂಡಿಸಿದ್ದರು.

ಇದನ್ನೂ ಓದಿ: ಜೈಲಿನಲ್ಲಿರುವ ಮುರುಘಾ ಶ್ರೀ: ಮರುಘಾ ಮಠದ ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ಇಲ್ಲದೆ ಪೀಕಲಾಟ!

ಇದಕ್ಕೆ ಪ್ರತಿಯಾಗಿ ಸರ್ಕಾರಿ ವಕೀಲರು ಆಕ್ಷೇಪಿಸಿ, ಕಾರಾಗೃಹದಲ್ಲಿವವರಿಗೆ ಸಹಿ ಮಾಡುವ ಅಧಿಕಾರ ಕೊಟ್ಟರೆ ಮುಂದಿನ ದಿನಗಳಲ್ಲಿ ಶ್ರೀಮಠದ ಆಸ್ತಿ-ಪಾಸ್ತಿಗಳಿಗೆ ತೊಂದರೆಗಳಾಗುವ ಸಾಧ್ಯತೆಗಳು ಇರುತ್ತವೆ. ಈಗಾಗಲೇ ಪ್ರಭಾರಿ ಸ್ವಾಮೀಜಿ ಹಾಗೂ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಹೀಗಾಗಿ ಮುರುಘಾ ಶರಣರಿಗೆ ಸಹಿ ಹಾಕುವ ಅಧಿಕಾರ ಅಗತ್ಯವಿಲ್ಲ ಎಂದು ಪ್ರತಿವಾದ ಮಂಡಿಸಿದ್ದರು. ಅಂತಿಮವಾಗಿ ಕೋರ್ಟ್  ಚೆಕ್​ ಸಹಿ ಮಾಡಲು ಶ್ರಿಗಳಿಗೆ ಅವಕಾಶ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮುರುಘಾ ಶರಣರು ಹೈಕೋರ್ಟ್​ ಮೊರೆ ಹೋಗಿದ್ದಾರೆ.

ವಿದ್ಯಾಸಂಸ್ಥೆಯ ಸಿಬ್ಬಂದಿಗೆ ಸಂಬಳ ನೀಡಲು ಸಂಸ್ಥೆಯ ಅಧ್ಯಕ್ಷರಾಗಿರುವ ಮುರುಘಾ ಶ್ರೀ ಸಹಿ ಅಗತ್ಯವಾಗಿದೆ. ಆದ್ರೆ, ಮುರುಘಾ ಶ್ರೀ ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಇದ್ದಾರೆ. ಹೀಗಾಗಿ ಸಂಬಳವಿಲ್ಲದೆ ಮಠದ ಸಿಬ್ಬಂದಿ ಹಾಗೂ ಶಿಕ್ಷಕರು ಪರದಾಡುವಂತಾಗಿದೆ.

ಮುರುಘಾಶ್ರೀಗೆ ಸದ್ಯಕ್ಕೆ ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಚಿತ್ರದುರ್ಗ ಸೆಷನ್ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಆದ್ದರಿಂದ ಮುರುಘಾ ಶ್ರೀಗಳ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

Published On - 5:44 pm, Sun, 25 September 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ