AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಬುಟ್ಟಿಯಲ್ಲಿ ಹಣ್ಣು ಕೊಳೆತರೆ ಅದನ್ನು ತೆಗೆದು ಎಸೆಯಬೇಕು”; ಪೀಠದಿಂದ ಮುರುಘಾಶ್ರೀ ವಜಾಗೊಳಿಸುವ ಸುಳಿವು ನೀಡಿದ ಸಮುದಾಯದ ಮುಖಂಡರು

ಕೋಟೆನಾಡು ಚಿತ್ರದುರ್ಗದ ಮುರುಘಾಮಠದ ಸ್ವಾಮೀಜಿ ಮುರುಘಾ ಶರಣರು ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾದರೂ ಇದುವರೆಗೆ ಪೀಠ ತ್ಯಾಗ ಮಾಡದಿರುವುದು ಟೀಕೆಗೆ ಕಾರಣವಾಗಿದೆ. ಅಲ್ಲದೆ ಸ್ವಾಮಿಗಳ ವಿರುದ್ಧವೇ ಸಮುದಾಯದ ಮುಖಂಡರು ಕಿಡಿ ಕಾರುವ ಸ್ಥಿತಿ ನಿರ್ಮಾಣ ಆಗಿದೆ.

ಬುಟ್ಟಿಯಲ್ಲಿ ಹಣ್ಣು ಕೊಳೆತರೆ ಅದನ್ನು ತೆಗೆದು ಎಸೆಯಬೇಕು; ಪೀಠದಿಂದ ಮುರುಘಾಶ್ರೀ ವಜಾಗೊಳಿಸುವ ಸುಳಿವು ನೀಡಿದ ಸಮುದಾಯದ ಮುಖಂಡರು
ಪೀಠದಿಂದ ಮುರುಘಾಶ್ರೀ ವಜಾಗೊಳಿಸುವ ಸುಳಿವು ನೀಡಿದ ಸಮುದಾಯದ ಮುಖಂಡರು
TV9 Web
| Edited By: |

Updated on:Nov 25, 2022 | 9:01 AM

Share

ಚಿತ್ರದುರ್ಗ: ಮುರುಘಾ ಮಠದ (Murugha Mutt) ಸ್ವಾಮೀಜಿ ಶಿವಮೂರ್ತಿ ಮುರುಘಾ ಶರಣರು (Shivamurthy Murugha Sharanaru) ಪೋಕ್ಸೋ ಕಾಯ್ದೆಯಡಿ ಜೈಲು ಪಾಲಾಗಿದ್ದರೂ ಈವರೆಗೆ ಪೀಠ ತ್ಯಾಗ ಮಾಡಿಲ್ಲ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೀಠ ತ್ಯಾಗಕ್ಕೆ ಒತ್ತಾಯಗಳು ಕೇಳಿಬಂದಿದ್ದವು. ಆದರೂ ಪೀಠ ತ್ಯಾಗ ಮಾಡದ ಶ್ರೀಗಳ ವಿರುದ್ಧ ಇದೀಗ ಸಮುದಾಯ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ಬುಟ್ಟಿಯಲ್ಲಿನ ಹಣ್ಣು ಕೆಟ್ಟರೆ ಆ ಹಣ್ಣನ್ನು ತೆಗೆದು ಬಿಸಾಕಬೇಕು ಎಂದು ಹೇಳುವ ಮೂಲಕ ಮುರುಘಾಶ್ರೀ ವಜಾಗೊಳಿಸುವ ನಿರ್ಣಯದ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾದ (Akhila Bharatha Veerashaiva Mahasabha) ಉಪಾಧ್ಯಕ್ಷ ಅಣಬೇರು ರಾಜಣ್ಣ ಸುಳಿವು ನೀಡಿದರು.

ದಾವಣಗೆರೆ ನಗರದಲ್ಲಿ ಡಿಸೆಂಬರ್ 24, 25 ಮತ್ತು 26ರಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ. ಹೀಗಾಗಿ, ಚಿತ್ರದುರ್ಗ ನಗರದಲ್ಲಿ ಮಹಾಸಭಾದ ಉಪಾದ್ಯಕ್ಷ ಅಣಬೇರು ರಾಜಣ್ಣ ನೇತೃತ್ವದಲ್ಲಿ ನಗರದ ಒನಕೆ ಓಬವ್ವ ವೃತ್ತದ ಬಳಿಯ ಖಾಸಗಿ ಸಭಾಂಗಣದಲ್ಲಿ ವೀರಶೈವ ಮಹಾಸಭಾದಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಈ ವೇಳೆ ಪ್ರತಿಕ್ರಿಯಿಸಿದ ಅಣಬೇರು ರಾಜಣ್ಣ, ಮುರುಘಾಮಠದ ಬಿಕ್ಕಟ್ಟಿನ ಬಗ್ಗೆಯೂ ದಾವಣಗೆರೆಯಲ್ಲಿ ಮಹಾಸಭಾದಿಂದ ನಡೆಯುವ ಅಧಿವೇಶನದಲ್ಲಿ ಚರ್ಚಿಸುತ್ತೇವೆ ಎಂದರು.

ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಗಂಭೀರ ಪ್ರಕರಣವಿದ್ದು, ಜೈಲು ಸೇರಿದ್ದಾರೆ. ಆದರೂ ಅವರು ಪೀಠ ತ್ಯಾಗ ಮಾಡಿಲ್ಲ. ಈ ಬಗ್ಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ನಿರ್ಧರಿಸುತ್ತೇವೆ. ಬುಟ್ಟಿಯಲ್ಲಿನ ಹಣ್ಣು ಕೆಟ್ಟರೆ ಆ ಹಣ್ಣನ್ನು ತೆಗೆದು ಬಿಸಾಕಬೇಕೆಂದು ಹೇಳುವ ಮೂಲಕ ಮುರುಘಾಶ್ರೀ ವಜಾಗೊಳಿಸುವ ನಿರ್ಣಯದ ಬಗ್ಗೆ ಸುಳಿವು ನೀಡಿ ಕಿಡಿಕಾರಿದರು.

ಮುರುಘಾಮಠದ ಏಕಸದಸ್ಯ ಟ್ರಸ್ಟ್ ರಚನೆ ಮಾಡಿಕೊಂಡಿರುವ ಮುರುಘಾಶ್ರೀ ಅಧಿಕಾರ ಚಲಾಯಿಸುತ್ತಿದ್ದಾರೆ. ಮಠಗಳು ಭಕ್ತರ ಆಸ್ತಿ, ಸ್ವಾಮಿಗಳ ಆಸ್ತಿ ಅಲ್ಲ. ಆದರೆ ಇತ್ತೀಚೆಗೆ ಬಹುತೇಕ ಮಠಗಳ ಸ್ವಾಮಿಗಳು ಏಕಸದಸ್ಯ ಟ್ರಸ್ಟ್ ರಚಿಸಿಕೊಂಡು ಅಧಿಕಾರ ಹಿಡಿತದಲ್ಲಿಟ್ಟುಕೊಂಡಿದ್ದಾರೆ. ಇದು ಸರಿಯಾದ ಕ್ರಮ ಅಲ್ಲ. ಆದರೆ ನ್ಯಾಯಾಲಯಗಳಲ್ಲಿ ಪ್ರಶ್ನಿಸಿದರೂ ಸೊಲೊ ಟ್ರಸ್ಟ್ ಕಾರಣಕ್ಕೆ ಮಠದ ಅಧಿಕಾರ ಸ್ವಾಮಿಗಳ ಕೈಯಲ್ಲಿ ಇರುವಂತಾಗಿದೆ. ಸರ್ಕಾರಗಳೂ ಆಡಳಿತಾಧಿಕಾರಿ, ನೂತನ ಪೀಠಾದ್ಯಕ್ಷರ ನೇಮಿಸಲಾಗದ ಸ್ಥಿತಿ ನಿರ್ಮಾಣ ಆಗಿದೆ ಎಂದು ಕಿಡಿ ಕಾರಿದರು.

ಒಟ್ಟಾರೆಯಾಗಿ ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾಶ್ರೀ ವಿರುದ್ಧ ವೀರಶೈವ ಲಿಂಗಾಯತ ಸಮಾಜದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಅಂತೆಯೇ ಇಂದು ಮುರುಘಾಶ್ರೀ ನ್ಯಾಯಾಂಗ ಬಂಧನ ಅವಧಿ ಅಂತ್ಯವಾಗಲಿದ್ದು, ಕೋರ್ಟ್ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನ ವಿಸ್ತರಿಸುವ ಸಾಧ್ಯತೆ ಇದೆ. ಅಂತೆಯೇ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ ಆಗಿದ್ದು, ಈ ಬಗ್ಗೆ ವಿಚಾರಣೆ ನಡೆಸಲು ದಿನಾಂಕ ನಿಗದಿಯಾಗುವ ಸಾಧ್ಯತೆಯೂ ಇದೆ.

ಮತ್ತೊಂದು ಕಡೆ ಮುರುಘಾಶ್ರೀ ವಿರುದ್ಧ ಸುಳ್ಳು ಕೇಸ್ ದಾಖಲಿಸಲು ಪಿತೂರಿ ಪ್ರಕರಣದಲ್ಲಿ ಬಂಧನದಲ್ಲಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ಜಾಮೀನು ಅರ್ಜಿಯ ವಿಚಾರಣೆಯೂ ಇಂದು ನಡೆಯಲಿದೆ. ವಿಚಾರಣೆ ನಂತರ ಇವರು ಮತ್ತೆ ಜೈಲು ಪಾಲಾಗಲಿದ್ದಾರೆಯೇ ಎಂಬುದನ್ನು ನೋಡಬೇಕಿದೆ.

ವರದಿ: ಬಸವರಾಜ ಮುದನೂರ್, ಟಿವಿ9 ಚಿತ್ರದುರ್ಗ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 am, Fri, 25 November 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ