AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳವು ಪ್ರಕರಣ, ಡ್ರೈವರ್​​ ಸೇರಿ ಮೂವರ ಬಂಧನ

ಅಂತರರಾಜ್ಯ ಅಡಿಕೆ ವ್ಯಾಪಾರಿಯ ಒಂದು ಕೋಟಿ ರೂಪಾಯಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸಂತೋಷ್ ಸೇರಿದಂತೆ ಮೂವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಕಾರ್​ ಡ್ರೈವರ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಡುತ್ತಾನೆ.

ಅಂತರರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳವು ಪ್ರಕರಣ, ಡ್ರೈವರ್​​ ಸೇರಿ ಮೂವರ ಬಂಧನ
ಬಂಧನ
Shivaprasad
| Updated By: ವಿವೇಕ ಬಿರಾದಾರ|

Updated on: Nov 02, 2023 | 9:39 AM

Share

ಬೆಂಗಳೂರು ನ.02: ಅಂತರರಾಜ್ಯ ಅಡಿಕೆ (Betelnut) ವ್ಯಾಪಾರಿಯ ಒಂದು ಕೋಟಿ ರೂಪಾಯಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸಂತೋಷ್ ಸೇರಿದಂತೆ ಮೂವರನ್ನು ಉಪ್ಪಾರಪೇಟೆ ಪೊಲೀಸರು (Police) ಬಂಧಿಸಿದ್ದಾರೆ. ಅಕ್ಟೋಬರ್ 7 ರಂದು ಹೆಚ್​​.ಎಸ್​. ಉಮೇಶ್ ಅಡಿಕೆ ವ್ಯಾಪಾರ ಸಲುವಾಗಿ ನೀಲಿ ಬಣ್ಣದ ಬ್ಯಾಗಿನಲ್ಲಿ ಬರೋಬ್ಬರಿ ಒಂದು ಕೋಟಿ ರೂಪಾಯಿಯನ್ನು ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಚಿತ್ರದುರ್ಗದಲ್ಲಿ (Chitradurga) ಅಡಿಕೆ ಕೊಂಡುಕೊಳ್ಳಲು ಬರುತ್ತಾರೆ.

ಆದರೆ ಉಮೇಶ್​​ ಅವರಿಗೆ ಅಲ್ಲಿ ಅಡಿಕೆ ಸಿಗುವುದಿಲ್ಲ. ನಂತರ ಶಿರಾದಲ್ಲಿ ಅಡಿಕೆ ಕೊಂಡುಕೊಳ್ಳಲು ಪ್ರಯತ್ನಿಸುತ್ತಾರೆ ಆದರೆ ಸಾಧ್ಯವಾಗುವುದಿಲ್ಲ. ಕೊನೆಗೆ ತುಮಕೂರಿನಲ್ಲಾದರೂ ಸಿಗಬಹುದಾ ಎಂದು ಬಂದರೇ ಇಲ್ಲಿಯೂ ಕೂಡ ಉಮೇಶ್​ ಅವರಿಗೆ ಅಡಿಕೆ ಸಿಗುವುದಿಲ್ಲ.

ಬಳಿಕ ಬೆಂಗಳೂರಿನ ಚಂದ್ರಾಲೇಔಟ್​ನಲ್ಲಿರುವ ಪಿಜಿಯೊಂದರಲ್ಲಿರುವ ತಮ್ಮ ಮತ್ತು ತಮ್ಮ ಸ್ನೇಹಿತರ ಮಕ್ಕಳನ್ನು ಭೇಟಿಯಾಗಿ ಹೋಗೋಣ ಎಂದು ರಾಜಧಾನಿಗೆ ಬರುತ್ತಾರೆ. ಹೀಗೆ ಬಂದವರು ನೇರವಾಗಿ ಗಾಂಧೀ‌ನಗರಕ್ಕೆ ಬರುತ್ತಾರೆ. ಗಾಂಧಿನಗರದ ಹೊಟೇಲ್​​ವೊಂದರ​ ಮುಂಭಾಗದಲ್ಲಿ ಕಾರು ನಿಲ್ಲಿಸಿ, ಊಟ ಮಾಡುತ್ತಾರೆ.

ಇದನ್ನೂ ಓದಿ: ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಅರೆಸ್ಟ್​​​

ಆ ಬಳಿಕ ಚಂದ್ರಾಲೇಔಟ್​​ನಲ್ಲಿ ಮಕ್ಕಳನ್ನು ಭೇಟಿಯಾಗಿ ಚಿತ್ರದುರ್ಗಕ್ಕೆ ವಾಪಸ್​ ಹೊರಡುತ್ತಿರುತ್ತಾರೆ. ದಾರಿ ಮಧ್ಯೆ ದಾಬಸ್ ಪೇಟೆಯಲ್ಲಿ ಟೀ ಕುಡಿದು, ಚಿತ್ರದುರ್ಗದಕ್ಕೆ ತೆರಳುತ್ತಾರೆ. ತಮ್ಮೂರಾದ ಭೀಮಸಮುದ್ರಕ್ಕೆ ರಾತ್ರಿ 7:45ಕ್ಕೆ ತಲುಪುತ್ತಾರೆ. ಆಗ ಕಾರಿನ ಡಿಕ್ಕಿ ತೆಗೆದು ನೋಡಿದಾಗ ಹಣ ಮಾಯವಾಗಿರುತ್ತೆ.

ನಂತರ ಉಮೇಶ್​ ವಾರ, 10 ದಿವಸ ಬಿಟ್ಟು ಕಾರು ಡ್ರೈವರ್​​ ಮೇಲೆ ಸಂಶಯ ವ್ಯಕ್ತಪಡಿಸಿ ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಕಾರ್​ ಡ್ರೈವರ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಡುತ್ತಾನೆ. ಪೊಲೀಸರಿಂದ ತನಿಖೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ