AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳವು ಪ್ರಕರಣ, ಡ್ರೈವರ್​​ ಸೇರಿ ಮೂವರ ಬಂಧನ

ಅಂತರರಾಜ್ಯ ಅಡಿಕೆ ವ್ಯಾಪಾರಿಯ ಒಂದು ಕೋಟಿ ರೂಪಾಯಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸಂತೋಷ್ ಸೇರಿದಂತೆ ಮೂವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಕಾರ್​ ಡ್ರೈವರ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಡುತ್ತಾನೆ.

ಅಂತರರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳವು ಪ್ರಕರಣ, ಡ್ರೈವರ್​​ ಸೇರಿ ಮೂವರ ಬಂಧನ
ಬಂಧನ
Shivaprasad B
| Edited By: |

Updated on: Nov 02, 2023 | 9:39 AM

Share

ಬೆಂಗಳೂರು ನ.02: ಅಂತರರಾಜ್ಯ ಅಡಿಕೆ (Betelnut) ವ್ಯಾಪಾರಿಯ ಒಂದು ಕೋಟಿ ರೂಪಾಯಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸಂತೋಷ್ ಸೇರಿದಂತೆ ಮೂವರನ್ನು ಉಪ್ಪಾರಪೇಟೆ ಪೊಲೀಸರು (Police) ಬಂಧಿಸಿದ್ದಾರೆ. ಅಕ್ಟೋಬರ್ 7 ರಂದು ಹೆಚ್​​.ಎಸ್​. ಉಮೇಶ್ ಅಡಿಕೆ ವ್ಯಾಪಾರ ಸಲುವಾಗಿ ನೀಲಿ ಬಣ್ಣದ ಬ್ಯಾಗಿನಲ್ಲಿ ಬರೋಬ್ಬರಿ ಒಂದು ಕೋಟಿ ರೂಪಾಯಿಯನ್ನು ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಚಿತ್ರದುರ್ಗದಲ್ಲಿ (Chitradurga) ಅಡಿಕೆ ಕೊಂಡುಕೊಳ್ಳಲು ಬರುತ್ತಾರೆ.

ಆದರೆ ಉಮೇಶ್​​ ಅವರಿಗೆ ಅಲ್ಲಿ ಅಡಿಕೆ ಸಿಗುವುದಿಲ್ಲ. ನಂತರ ಶಿರಾದಲ್ಲಿ ಅಡಿಕೆ ಕೊಂಡುಕೊಳ್ಳಲು ಪ್ರಯತ್ನಿಸುತ್ತಾರೆ ಆದರೆ ಸಾಧ್ಯವಾಗುವುದಿಲ್ಲ. ಕೊನೆಗೆ ತುಮಕೂರಿನಲ್ಲಾದರೂ ಸಿಗಬಹುದಾ ಎಂದು ಬಂದರೇ ಇಲ್ಲಿಯೂ ಕೂಡ ಉಮೇಶ್​ ಅವರಿಗೆ ಅಡಿಕೆ ಸಿಗುವುದಿಲ್ಲ.

ಬಳಿಕ ಬೆಂಗಳೂರಿನ ಚಂದ್ರಾಲೇಔಟ್​ನಲ್ಲಿರುವ ಪಿಜಿಯೊಂದರಲ್ಲಿರುವ ತಮ್ಮ ಮತ್ತು ತಮ್ಮ ಸ್ನೇಹಿತರ ಮಕ್ಕಳನ್ನು ಭೇಟಿಯಾಗಿ ಹೋಗೋಣ ಎಂದು ರಾಜಧಾನಿಗೆ ಬರುತ್ತಾರೆ. ಹೀಗೆ ಬಂದವರು ನೇರವಾಗಿ ಗಾಂಧೀ‌ನಗರಕ್ಕೆ ಬರುತ್ತಾರೆ. ಗಾಂಧಿನಗರದ ಹೊಟೇಲ್​​ವೊಂದರ​ ಮುಂಭಾಗದಲ್ಲಿ ಕಾರು ನಿಲ್ಲಿಸಿ, ಊಟ ಮಾಡುತ್ತಾರೆ.

ಇದನ್ನೂ ಓದಿ: ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಅರೆಸ್ಟ್​​​

ಆ ಬಳಿಕ ಚಂದ್ರಾಲೇಔಟ್​​ನಲ್ಲಿ ಮಕ್ಕಳನ್ನು ಭೇಟಿಯಾಗಿ ಚಿತ್ರದುರ್ಗಕ್ಕೆ ವಾಪಸ್​ ಹೊರಡುತ್ತಿರುತ್ತಾರೆ. ದಾರಿ ಮಧ್ಯೆ ದಾಬಸ್ ಪೇಟೆಯಲ್ಲಿ ಟೀ ಕುಡಿದು, ಚಿತ್ರದುರ್ಗದಕ್ಕೆ ತೆರಳುತ್ತಾರೆ. ತಮ್ಮೂರಾದ ಭೀಮಸಮುದ್ರಕ್ಕೆ ರಾತ್ರಿ 7:45ಕ್ಕೆ ತಲುಪುತ್ತಾರೆ. ಆಗ ಕಾರಿನ ಡಿಕ್ಕಿ ತೆಗೆದು ನೋಡಿದಾಗ ಹಣ ಮಾಯವಾಗಿರುತ್ತೆ.

ನಂತರ ಉಮೇಶ್​ ವಾರ, 10 ದಿವಸ ಬಿಟ್ಟು ಕಾರು ಡ್ರೈವರ್​​ ಮೇಲೆ ಸಂಶಯ ವ್ಯಕ್ತಪಡಿಸಿ ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಕಾರ್​ ಡ್ರೈವರ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಡುತ್ತಾನೆ. ಪೊಲೀಸರಿಂದ ತನಿಖೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ