AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳವು ಪ್ರಕರಣ, ಡ್ರೈವರ್​​ ಸೇರಿ ಮೂವರ ಬಂಧನ

ಅಂತರರಾಜ್ಯ ಅಡಿಕೆ ವ್ಯಾಪಾರಿಯ ಒಂದು ಕೋಟಿ ರೂಪಾಯಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸಂತೋಷ್ ಸೇರಿದಂತೆ ಮೂವರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಕಾರ್​ ಡ್ರೈವರ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಡುತ್ತಾನೆ.

ಅಂತರರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳವು ಪ್ರಕರಣ, ಡ್ರೈವರ್​​ ಸೇರಿ ಮೂವರ ಬಂಧನ
ಬಂಧನ
Shivaprasad B
| Edited By: ವಿವೇಕ ಬಿರಾದಾರ|

Updated on: Nov 02, 2023 | 9:39 AM

Share

ಬೆಂಗಳೂರು ನ.02: ಅಂತರರಾಜ್ಯ ಅಡಿಕೆ (Betelnut) ವ್ಯಾಪಾರಿಯ ಒಂದು ಕೋಟಿ ರೂಪಾಯಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸಂತೋಷ್ ಸೇರಿದಂತೆ ಮೂವರನ್ನು ಉಪ್ಪಾರಪೇಟೆ ಪೊಲೀಸರು (Police) ಬಂಧಿಸಿದ್ದಾರೆ. ಅಕ್ಟೋಬರ್ 7 ರಂದು ಹೆಚ್​​.ಎಸ್​. ಉಮೇಶ್ ಅಡಿಕೆ ವ್ಯಾಪಾರ ಸಲುವಾಗಿ ನೀಲಿ ಬಣ್ಣದ ಬ್ಯಾಗಿನಲ್ಲಿ ಬರೋಬ್ಬರಿ ಒಂದು ಕೋಟಿ ರೂಪಾಯಿಯನ್ನು ಕಾರಿನ ಡಿಕ್ಕಿಯಲ್ಲಿಟ್ಟುಕೊಂಡು ಚಿತ್ರದುರ್ಗದಲ್ಲಿ (Chitradurga) ಅಡಿಕೆ ಕೊಂಡುಕೊಳ್ಳಲು ಬರುತ್ತಾರೆ.

ಆದರೆ ಉಮೇಶ್​​ ಅವರಿಗೆ ಅಲ್ಲಿ ಅಡಿಕೆ ಸಿಗುವುದಿಲ್ಲ. ನಂತರ ಶಿರಾದಲ್ಲಿ ಅಡಿಕೆ ಕೊಂಡುಕೊಳ್ಳಲು ಪ್ರಯತ್ನಿಸುತ್ತಾರೆ ಆದರೆ ಸಾಧ್ಯವಾಗುವುದಿಲ್ಲ. ಕೊನೆಗೆ ತುಮಕೂರಿನಲ್ಲಾದರೂ ಸಿಗಬಹುದಾ ಎಂದು ಬಂದರೇ ಇಲ್ಲಿಯೂ ಕೂಡ ಉಮೇಶ್​ ಅವರಿಗೆ ಅಡಿಕೆ ಸಿಗುವುದಿಲ್ಲ.

ಬಳಿಕ ಬೆಂಗಳೂರಿನ ಚಂದ್ರಾಲೇಔಟ್​ನಲ್ಲಿರುವ ಪಿಜಿಯೊಂದರಲ್ಲಿರುವ ತಮ್ಮ ಮತ್ತು ತಮ್ಮ ಸ್ನೇಹಿತರ ಮಕ್ಕಳನ್ನು ಭೇಟಿಯಾಗಿ ಹೋಗೋಣ ಎಂದು ರಾಜಧಾನಿಗೆ ಬರುತ್ತಾರೆ. ಹೀಗೆ ಬಂದವರು ನೇರವಾಗಿ ಗಾಂಧೀ‌ನಗರಕ್ಕೆ ಬರುತ್ತಾರೆ. ಗಾಂಧಿನಗರದ ಹೊಟೇಲ್​​ವೊಂದರ​ ಮುಂಭಾಗದಲ್ಲಿ ಕಾರು ನಿಲ್ಲಿಸಿ, ಊಟ ಮಾಡುತ್ತಾರೆ.

ಇದನ್ನೂ ಓದಿ: ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಅರೆಸ್ಟ್​​​

ಆ ಬಳಿಕ ಚಂದ್ರಾಲೇಔಟ್​​ನಲ್ಲಿ ಮಕ್ಕಳನ್ನು ಭೇಟಿಯಾಗಿ ಚಿತ್ರದುರ್ಗಕ್ಕೆ ವಾಪಸ್​ ಹೊರಡುತ್ತಿರುತ್ತಾರೆ. ದಾರಿ ಮಧ್ಯೆ ದಾಬಸ್ ಪೇಟೆಯಲ್ಲಿ ಟೀ ಕುಡಿದು, ಚಿತ್ರದುರ್ಗದಕ್ಕೆ ತೆರಳುತ್ತಾರೆ. ತಮ್ಮೂರಾದ ಭೀಮಸಮುದ್ರಕ್ಕೆ ರಾತ್ರಿ 7:45ಕ್ಕೆ ತಲುಪುತ್ತಾರೆ. ಆಗ ಕಾರಿನ ಡಿಕ್ಕಿ ತೆಗೆದು ನೋಡಿದಾಗ ಹಣ ಮಾಯವಾಗಿರುತ್ತೆ.

ನಂತರ ಉಮೇಶ್​ ವಾರ, 10 ದಿವಸ ಬಿಟ್ಟು ಕಾರು ಡ್ರೈವರ್​​ ಮೇಲೆ ಸಂಶಯ ವ್ಯಕ್ತಪಡಿಸಿ ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಕಾರ್​ ಡ್ರೈವರ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಡುತ್ತಾನೆ. ಪೊಲೀಸರಿಂದ ತನಿಖೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್