AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಆಸ್ಪತ್ರೆ ನಿರ್ಮಾಣ ಮಾಡಿದರೆ ಸಾಲದು, ಚಿಕಿತ್ಸೆ ನೀಡಲು ಸಿಬ್ಬಂದಿಗಳು ಬೇಕು; ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

ವೇದಾಂತ ಮೈನ್ಸ್ ಸಂಸ್ಥೆ ನೆರವು ಹಸ್ತ ಚಾಚಿದ್ದು, ಜಿಲ್ಲಾಸ್ಪತ್ರೆ ಆವರಣದಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಕಾರ್ಯ‌ ಭರದಿಂದ ಸಾಗಿದೆ. ಕೆಲವೇ ದಿನದಲ್ಲಿ ಆಸ್ಪತ್ರೆ ಪೂರ್ಣವಾಗಲಿದೆ. ಆದರೆ ಜಿಲ್ಲಾಸ್ಪತ್ರೆ ಸೇರಿದಂತೆ ಬಹುತೇಕ ಕಡೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ವೈದ್ಯರೇ‌ ಇಲ್ಲದೆ ಬರೀ ಆಸ್ಪತ್ರೆ, ಬೆಡ್ ಇದ್ದರೇನು ಪ್ರಯೋಜನ. ಮೊದಲು ವೈದ್ಯಕೀಯ ಸಿಬ್ಬಂದಿ ಭರ್ತಿ ಕೆಲಸ ನಡೆಯಲಿ ಎಂಬುದು ಸ್ಥಳೀಯರ ಆಗ್ರಹ.

ಕೊವಿಡ್ ಆಸ್ಪತ್ರೆ ನಿರ್ಮಾಣ ಮಾಡಿದರೆ ಸಾಲದು, ಚಿಕಿತ್ಸೆ ನೀಡಲು ಸಿಬ್ಬಂದಿಗಳು ಬೇಕು; ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ
ತಾತ್ಕಾಲಿಕ ಕೊವಿಡ್ ಆಸ್ಪತ್ರೆ
preethi shettigar
|

Updated on: May 25, 2021 | 12:35 PM

Share

ಚಿತ್ರದುರ್ಗ: ಜಿಲ್ಲೆಯಲ್ಲಿ ಕೊವಿಡ್ ಸೋಂಕು ಶರವೇಗದಲ್ಲಿ ಏರಿಕೆ ಕಾಣುತ್ತಿದೆ. ಈ ಕಾರಣಕ್ಕೆ ಎಚ್ಛೆತ್ತುಕೊಂಡ ಚಿತ್ರದುರ್ಗ ಜಿಲ್ಲಾಡಳಿತ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಖಾಸಗಿ ಗಣಿ ಸಂಸ್ಥೆಯ ಸಹಯೋಗದಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಿಕೊಡುತ್ತಿದೆ. ಆದರೆ ಈ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಮಾತ್ರ ನೀಗಿಸುವ ಕೆಲಸ ಆಗುತ್ತಿಲ್ಲ. ಇದರಿಂದ ಬೇಸತ್ತ ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24488 ಕ್ಕೆ ತಲುಪಿದ್ದು, 5446 ಸಕ್ರಿಯ ಪ್ರಕರಣಗಳಿವೆ. ಈಗಾಗಲೇ ಜಿಲ್ಲೆಯಲ್ಲಿ ಕೊವಿಡ್​ಗೆ 129 ಮಂದಿ ಬಲಿ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ರೇಟ್ ಶೇಕಡಾ 20ರಷ್ಟಿದೆ. ಹೀಗಾಗಿ, ಆಕ್ಸಿಜನ್ ಬೆಡ್ ಸಿಗದೆ ರೋಗಿಗಳು ಪರದಾಡುವ ಸ್ಥಿತಿ ಇದೆ. ಇದರಿಂದಾಗಿ ವೇದಾಂತ ಮೈನ್ಸ್ ಸಂಸ್ಥೆ ನೆರವು ಹಸ್ತ ಚಾಚಿದ್ದು, ಜಿಲ್ಲಾಸ್ಪತ್ರೆ ಆವರಣದಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಕಾರ್ಯ‌ ಭರದಿಂದ ಸಾಗಿದೆ. ಕೆಲವೇ ದಿನದಲ್ಲಿ ಆಸ್ಪತ್ರೆ ಪೂರ್ಣವಾಗಲಿದೆ. ಆದರೆ ಜಿಲ್ಲಾಸ್ಪತ್ರೆ ಸೇರಿದಂತೆ ಬಹುತೇಕ ಕಡೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ವೈದ್ಯರೇ‌ ಇಲ್ಲದೆ ಬರೀ ಆಸ್ಪತ್ರೆ, ಬೆಡ್ ಇದ್ದರೇನು ಪ್ರಯೋಜನ. ಮೊದಲು ವೈದ್ಯಕೀಯ ಸಿಬ್ಬಂದಿ ಭರ್ತಿ ಕೆಲಸ ನಡೆಯಲಿ ಎಂಬುದು ಸ್ಥಳೀಯರ ಆಗ್ರಹ.

ಸುಮಾರು 25ಸಾವಿರ ಚದರ ಅಡಿಯಲ್ಲಿ ಸುಸಜ್ಜಿತ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಕಾರ್ಯ‌ ಭರದಿಂದ ನಡೆದಿದೆ. 20ಕ್ಕೂ ಹೆಚ್ಚು ಆಕ್ಸಿಜನ್ ಬೆಡ್, ವೆಂಟಿಲೆಟರ್ ವ್ಯವಸ್ಥೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ವೈದ್ಯಕೀಯ ಉಪಕರಣಗಳು ಇರಲಿದ್ದು, ಆಸ್ಪತ್ರೆ ಕೆಲವೇ ದಿನಗಳಲ್ಲಿ‌ ನೂತನವಾಗಿ ನಿರ್ಮಾಣ ಆಗಲಿದೆ. ಅಂತೆಯೇ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಈಗಾಗಲೇ ಕೊವಿಡ್ ನಿರ್ವಹಣೆಗಾಗಿ ವೈದ್ಯಕೀಯ ಸಿಬ್ಬಂದಿ ಭರ್ತಿಗೆ ಕರೆ ಮಾಡಿತ್ತು. 33 ವೈದ್ಯ ಹುದ್ದೆ ಭರ್ತಿಗೆ ಕರೆ ಮಾಡಿದರೆ ‌ಅರ್ಜಿ‌ ಹಾಕಿದ್ದು, ಮಾತ್ರ ನಾಲ್ವರು. 10ಜನ ಸ್ಪೇಷಲಿಷ್ಟ್ ಹುದ್ದೆಗೆ ಕರೆ ಮಾಡಿದ್ದು, ಯಾರೊಬ್ಬರೂ ಸುಳಿದಿಲ್ಲ. ಕೊವಿಡ್​ಗಾಗಿ 213 ಜನ ವೈದ್ಯಕೀಯ ಸಿಬ್ಬಂದಿಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಕೊವಿಡ್ ತಾತ್ಕಾಲಿಕ‌ ಸೇವೆಗಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಗ್ರೂಪ್ ಡಿ, ಡಾಟಾ ಎಂಟ್ರಿ ಆಪರೇಟರ್ಸ್, ಪ್ರಯೋಗ ಶಾಲಾ‌ ತಜ್ಞರು, ಕ್ಷ ಕಿರಣ ತಂತ್ರಜ್ಞರು ಸೇರಿ ಒಟ್ಟು 113 ಜನರನ್ನು ನೇಮಿಸಲಾಗಿದೆ ಎಂದು ಡಿಹೆಚ್ ಓ ಡಾ.ಪಾಲಾಕ್ಷ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು‌ ಚಿತ್ರದುರ್ಗದಲ್ಲಿ ನೂತನ ಆಸ್ಪತ್ರೆಯೇನೋ‌ ನಿರ್ಮಾಣ ಆಗುತ್ತಿದೆ.‌ ಆದರೆ, ವೈದ್ಯರ ನೇಮಕಕ್ಕೆ ಹಿನ್ನಡೆ ಆಗಿದ್ದು, ಜಿಲ್ಲಾಡಳಿತ ಶೀಘ್ರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಆ ಮೂಲಕ‌ ಜನರ ಜೀವ ಉಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದೆ.

ಇದನ್ನೂ ಓದಿ:

ವೆಂಟಿಲೇಟರ್ ಆಪರೇಟರ್​ಗಳ ಕೊರತೆ; ಉಡುಪಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹೆಚ್ಚಿದ ಒತ್ತಡ

ಗದಗ ಜಿಲ್ಲೆಯಲ್ಲಿ ಕೊವಿಡ್​ ಚಿಕಿತ್ಸೆಗೆ ವೈದ್ಯರ ಅಭಾವ; ತಾತ್ಕಾಲಿಕ ನೇಮಕಾತಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು