ರೇಣುಕಾಸ್ವಾಮಿ ಕೊಲೆ ಕೇಸ್​: ತಾನಾಗಿಯೇ ಬಂದು ಶರಣಾದ ಎ8 ಆರೋಪಿ, ಆತನ ಪಾತ್ರವೇನು?

ಡಿವೈಎಸ್​ಪಿ ದಿನಕರ್ ಎದುರು 8ನೇ ಆರೋಪಿ ರವಿಶಂಕರ್ ಶರಣಾಗಿದ್ದಾನೆ. ಘಟನೆ ಬಗ್ಗೆ ಟ್ಯಾಕ್ಸಿ ಚಾಲಕರ ಸಂಘದ ಮುಖಂಡರ ಬಳಿ ರವಿ ವಿಷಯ ತಿಳಿಸಿದ್ದಾರೆ. ಬಾಡಿಗೆಗೆಂದು ಕರೆದೊಯ್ದು ಸಂಕಷ್ಟಕ್ಕೆ ಸಿಲುಕಿಸಿದ್ದಾರೆಂದು ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಟ್ಯಾಕ್ಸಿ ಸಂಘದವರ ಸಹಾಯ ಕೇಳಿಬಂದಿದ್ದ ಚಾಲಕ ರವಿಶಂಕರ್​​ನನ್ನು ಡಿವೈಎಸ್​ಪಿ ಕಚೇರಿಗೆ ಕರೆತಂದು ಟ್ಯಾಕ್ಸಿ ಸಂಘದ ಮುಖಂಡರು ಶರಣಾಗತಿ ಮಾಡಿಸಿದ್ದಾರೆ. 

ರೇಣುಕಾಸ್ವಾಮಿ ಕೊಲೆ ಕೇಸ್​: ತಾನಾಗಿಯೇ ಬಂದು ಶರಣಾದ ಎ8 ಆರೋಪಿ, ಆತನ ಪಾತ್ರವೇನು?
ರೇಣುಕಾಸ್ವಾಮಿ ಕೊಲೆ ಕೇಸ್​: ತಾನಾಗಿಯೇ ಬಂದು ಶರಣಾದ ಎ8 ಆರೋಪಿ, ಆತನ ಪಾತ್ರವೇನು?
Edited By:

Updated on: Jun 13, 2024 | 7:24 PM

ಚಿತ್ರದುರ್ಗ, ಜೂನ್​ 13: ನಟ ದರ್ಶನ್ (Darshan) ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renuka Swamy Murder Case) ಇಲ್ಲಿಯವರೆಗೂ ಬರೋಬ್ಬರಿ 17ರ ಪೈಕಿ 13 ಜನರನ್ನು ಬಂಧಿಸಲಾಗಿದೆ. ಇನ್ನು ನಾಲ್ವರು ಘಟನೆ ಬಳಿಕ ನಾಪತ್ತೆ ಆಗಿದ್ದರು. ಇದೀಗ ಆ ನಾಲ್ವರ ಪೈಕಿ ಓರ್ವ ಇಂದು ತಾನಾಗಿಯೇ ಬಂದು ಪೊಲೀಸರಿಗೆ ಶರಣಾಗಿದ್ದಾರೆ. ಕೇಸ್​ನ 8ನೇ ಆರೋಪಿ ಆಗಿರುವ ಆಟೋ ಚಾಲಕ ರವಿಶಂಕರ್​​ ಇಂದು ಚಿತ್ರದುರ್ಗ ಡಿವೈಎಸ್​ಪಿ ಕಚೇರಿಗೆ ಶರಣಾಗಿದ್ದಾರೆ.

ಡಿವೈಎಸ್​ಪಿ ದಿನಕರ್ ಎದುರು 8ನೇ ಆರೋಪಿ ರವಿಶಂಕರ್ ಶರಣಾಗಿದ್ದಾನೆ. ಘಟನೆ ಬಗ್ಗೆ ಟ್ಯಾಕ್ಸಿ ಚಾಲಕರ ಸಂಘದ ಮುಖಂಡರ ಬಳಿ ರವಿ ವಿಷಯ ತಿಳಿಸಿದ್ದಾರೆ. ಬಾಡಿಗೆಗೆಂದು ಕರೆದೊಯ್ದು ಸಂಕಷ್ಟಕ್ಕೆ ಸಿಲುಕಿಸಿದ್ದಾರೆಂದು ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಟ್ಯಾಕ್ಸಿ ಸಂಘದವರ ಸಹಾಯ ಕೇಳಿಬಂದಿದ್ದ ಚಾಲಕ ರವಿಶಂಕರ್​​ನನ್ನು ಡಿವೈಎಸ್​ಪಿ ಕಚೇರಿಗೆ ಕರೆತಂದು ಟ್ಯಾಕ್ಸಿ ಸಂಘದ ಮುಖಂಡರು ಶರಣಾಗತಿ ಮಾಡಿಸಿದ್ದಾರೆ.

ಇದನ್ನೂ ಓದಿ: ದರ್ಶನ್​ ನೋಡುವ ಆಸೆಯಿಂದ ಬೆಂಗಳೂರಿಗೆ ಬಂದು ಹೆಣವಾದ ರೇಣುಕಾ ಸ್ವಾಮಿ; ಕಿಡ್ನ್ಯಾಪರ್​ಗಳ ಐಡಿಯಾ ಹೇಗಿತ್ತು?

ಬಾಡಿಗೆಗೆಂದು ಹೇಳಿ ಜಗದೀಶ್, ರಾಘವೆಂದ್ರ ಕರೆಸಿಕೊಂಡಿದ್ದರು. ಆಟೋದಲ್ಲಿ ರೇಣುಕಾಸ್ವಾಮಿ ಕರೆತಂದಿದ್ದರು. ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಬಳಿಗೆ ಆಟೋದಲ್ಲಿ ಬಂದಿದ್ದರು. ಕುಂಚಿಗನಾಳ ಗ್ರಾಮದ ಬಳಿ ರೇಣುಕಾಸ್ವಾಮಿ ಕಾರು ಹತ್ತಿಸಿದ್ದರು.

ದರ್ಶನ್ ಭೇಟಿಗೆಂದು ಹೇಳಿ ರೇಣುಕಾಸ್ವಾಮಿಯನ್ನು ಗ್ಯಾಂಗ್ ಕರೆತಂದಿತ್ತು. ರೇಣುಕಾಸ್ವಾಮಿ ಖುಷಿಯಿಂದಲೇ ಕಾರಿನಲ್ಲಿ ಬಂದಿದ್ದನೆಂದು ಮಾಹಿತಿ ನೀಡಿದ್ದ. ನಂತರ ಬೆಂಗಳೂರಿನ ರಾಜರಾಜೇಶ್ವರಿನಗರ ಬಳಿಯ ಪಟ್ಟಣಗೆರೆ ಶೆಡ್​ಗೆ ರೇಣುಕಾಸ್ವಾಮಿ ಕರೆತಂದಿದ್ದರು. ಬಳಿಕ ದರ್ಶನ್ ಮತ್ತು ಗ್ಯಾಂಗ್​ನಿಂದ ಭಯಾನಕ, ಭೀಭತ್ಸ ಕೃತ್ಯವೊಂದು ನಡೆದು ಹೋಗಿತ್ತು. ರೇಣುಕಾಸ್ವಾಮಿಯ ಕೊಲೆ ನಡೆದು ಹೋಗಿತ್ತು.

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್: ಕೊಲೆ ಆರೋಪಿಗೆ ಮೊಬೈಲ್ ಕೊಟ್ಟ ಪೊಲೀಸ್ ಸಿಬ್ಬಂದಿ, ದೃಶ್ಯ ಸೆರೆ

ಒಂದ್ಕಡೆ ಪ್ರಕರಣದ ತನಿಖೆ ತೀವ್ರಗೊಂಡಿದ್ದರೆ, ಮತ್ತೊಂದ್ಕಡೆ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ರೌಡಿ ಶೀಟರ್ ಓಪನ್ ಮಾಡುವ ಸಾಧ್ಯತೆಯೂ ದಟ್ಟವಾಗಿದೆ. ಸಾಮಾನ್ಯವಾಗಿ ಕೊಲೆ ಕೇಸ್‌ಗಳಲ್ಲಿ ಮತ್ತು ಪದೇ ಪದೇ ಕ್ರೈಮ್‌ ಮಾಡ್ತಿದ್ರೆ, ರೌಡಿ ಶೀಟ್ ತೆರೆಯಲಾಗುತ್ತೆ. ರೌಡಿ ಶೀಟ್ ತೆರೆಯೋ ಅಧಿಕಾರ ತನಿಖಾಧಿಕಾರಿಗೆ ಇರುತ್ತೆ. ಹೀಗಾಗಿ ದರ್ಶನ್ ಮತ್ತು ಮರ್ಡರ್ ಗ್ಯಾಂಗ್ ವಿರುದ್ಧವೂ ರೌಡಿ ಶೀಟರ್ ತೆರೆಯೋ ಸಾಧ್ಯತೆ ಇದ್ದು, ಆರೋಪಿಗಳ ವಿರುದ್ಧ ಈ ಹಿಂದೆ ದಾಖಲಾದ ಕೇಸ್‌ಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us