AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಥಿಲಾವಸ್ಥೆ ತಲುಪಿದ ಶಾಲೆಯಲ್ಲೇ ವಿದ್ಯಾರ್ಥಿಗಳ ಪಾಠ

ಚಿತ್ರದುರ್ಗ: ಶಿಕ್ಷಣ ಕ್ಷೇತ್ರ ಅಭಿವೃದ್ಧಿಗಾಗಿ ಸರ್ಕಾರ ನಾನಾ ಯೋಜನೆಗಳನ್ನು ರೂಪಿಸ್ತಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡ್ತಿದೆ. ಆದ್ರೆ, ಕೋಟೆನಾಡಿನ ಸರ್ಕಾರಿ ಶಾಲೆಯೊಂದರ ಸ್ಥಿತಿ ಶೋಚನೀಯವಾಗಿದೆ. ಆಸೆಯಿಂದ ಶಾಲೆಗೆ ಹೋಗಬೇಕಾದ ಮಕ್ಕಳು ಆತಂಕದಲ್ಲೇ ಪಾಠ ಕಲೀತಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಗಳು ಶಿಥಿಲಗೊಂಡಿವೆ. ಮೇಲ್ಛಾವಣಿ ಹೆಂಚುಗಳು ಒಡೆದು ಹೋಗಿವೆ. ಶಾಲಾ ಕಟ್ಟಡ ಆಗ್ಲೋ.. ಈಗ್ಲೋ ಬೀಳುವಂತಿದೆ. ಕುಸಿದು ಬೀಳೋ ಆತಂಕದಲ್ಲೇ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮಾಡತ್ತಿದ್ದಾರೆ. ಇದು ಸ್ವತಂತ್ರ ಪೂರ್ವದಲ್ಲಿ ನಿರ್ಮಾಣವಾಗಿರೋ […]

ಶಿಥಿಲಾವಸ್ಥೆ ತಲುಪಿದ ಶಾಲೆಯಲ್ಲೇ ವಿದ್ಯಾರ್ಥಿಗಳ ಪಾಠ
ಸಾಧು ಶ್ರೀನಾಥ್​
|

Updated on: Dec 18, 2019 | 2:52 PM

Share

ಚಿತ್ರದುರ್ಗ: ಶಿಕ್ಷಣ ಕ್ಷೇತ್ರ ಅಭಿವೃದ್ಧಿಗಾಗಿ ಸರ್ಕಾರ ನಾನಾ ಯೋಜನೆಗಳನ್ನು ರೂಪಿಸ್ತಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡ್ತಿದೆ. ಆದ್ರೆ, ಕೋಟೆನಾಡಿನ ಸರ್ಕಾರಿ ಶಾಲೆಯೊಂದರ ಸ್ಥಿತಿ ಶೋಚನೀಯವಾಗಿದೆ. ಆಸೆಯಿಂದ ಶಾಲೆಗೆ ಹೋಗಬೇಕಾದ ಮಕ್ಕಳು ಆತಂಕದಲ್ಲೇ ಪಾಠ ಕಲೀತಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಗಳು ಶಿಥಿಲಗೊಂಡಿವೆ. ಮೇಲ್ಛಾವಣಿ ಹೆಂಚುಗಳು ಒಡೆದು ಹೋಗಿವೆ. ಶಾಲಾ ಕಟ್ಟಡ ಆಗ್ಲೋ.. ಈಗ್ಲೋ ಬೀಳುವಂತಿದೆ. ಕುಸಿದು ಬೀಳೋ ಆತಂಕದಲ್ಲೇ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮಾಡತ್ತಿದ್ದಾರೆ.

ಇದು ಸ್ವತಂತ್ರ ಪೂರ್ವದಲ್ಲಿ ನಿರ್ಮಾಣವಾಗಿರೋ ಶಾಲೆ. ಸುಮಾರು ವರ್ಷಗಳಿಂದ ಶಿಥಿಲಾವಸ್ಥೆ ತಲುಪಿದ್ದು, ಗ್ರಾಮದ ಜನ ದೂರು ಸಲ್ಲಿಸಿದ್ರೂ ಅಧಿಕಾರಿಗಳು ಮಾತ್ರ ಕ್ಯಾರೆ ಅಂತಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಆತಂಕದಲ್ಲೇ ವಿದ್ಯಾಭ್ಯಾಸ ಮಾಡ್ತಿದ್ದಾರೆ. ಹೀಗಾಗಿ, ಶಾಲಾ ಕಟ್ಟಡವನ್ನ ನೆಲಸಮಗೊಳಿಸಿ ನೂತನ ಕಟ್ಟಡ ನಿರ್ಮಾಣ ಮಾಡಬೇಕು ಅನ್ನೋದು ಪೋಷಕರ ಆಗ್ರಹ.

ಶಾಲಾ ಕಟ್ಟಡ ಶಿಥಿಲಗೊಂಡಿರೋದ್ರಿಂದ ಶಾಲಾ ಆವರಣದ ಬಯಲಲ್ಲೇ ವಿದ್ಯಾಭ್ಯಾಸ ಮಾಡಿಸಲಾಗ್ತಿದೆ. ಇನ್ನು ಮಳೆ ಬಂದಾಗಲಂತೂ ಇಲ್ಲಿನ ಕಥೆ ಹೇಳತೀರದಾಗಿದೆ. ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕರನ್ನ ಕೇಳಿದ್ರೆ, ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ ಎಂದು ಹೇಳುತ್ತಿದ್ದಾರೆ. ಒಟ್ನಲ್ಲಿ ಕೋಟೆನಾಡಿನ ಸರ್ಕಾರಿ ಶಾಲಾ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ವಿದ್ಯಾರ್ಥಿಗಳು ನಿತ್ಯ ಆತಂಕದಲ್ಲೇ ಪಾಠ ಕೇಳುವ ದುಸ್ಥಿತಿ ನಿರ್ಮಾಣ ಆಗಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ