AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗತ್‌ಸಿಂಗ್ ಪಾತ್ರದ ಪ್ರಾಕ್ಟೀಸ್ ವೇಳೆ ವಿದ್ಯಾರ್ಥಿ ಸಾವು: ಚಿತ್ರದುರ್ಗದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ

ಭಗತ್​ ಸಿಂಗ್​ ಪಾತ್ರದ ಬಗ್ಗೆ ಪ್ರಾಕ್ಟೀಸ್​ ಮಾಡುವಾಗ ಬಾಲಕ ಸಾವನ್ನಪ್ಪಿದ್ದಾನೆ. ಚಿತ್ರದುರ್ಗದ ಕೆಳಗೋಚೆ ಬಡಾವಣೆಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆ.

ಭಗತ್‌ಸಿಂಗ್ ಪಾತ್ರದ ಪ್ರಾಕ್ಟೀಸ್ ವೇಳೆ ವಿದ್ಯಾರ್ಥಿ ಸಾವು: ಚಿತ್ರದುರ್ಗದಲ್ಲಿ ನಡೆದ ಹೃದಯ ವಿದ್ರಾವಕ ಘಟನೆ
student death
TV9 Web
| Edited By: |

Updated on:Oct 30, 2022 | 3:39 PM

Share

ಚಿತ್ರದುರ್ಗ:  ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಭಗತ್ ಸಿಂಗ್ ಅಂದಾಕ್ಷಣ ಎಂಥವರಿಗೂ ಬೆರಗು ಮೂಡಿಸುತ್ತದೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಬಾಲಕನೋರ್ವ ಭಗತ್ ಸಿಂಗ್ ಪಾತ್ರದ ರಿಹರ್ಸಲ್ ವೇಳೆ ಆಕಸ್ಮಿಕವಾಗಿ ನೇಣಿಗೆ ಬಲಿಯಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೆಳಗೋಟೆ ಲೇಔಟ್‌ನ ಸಂಜಯ್ SLV ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯ ಸಂಜಯ್‌ಗೌಡ(12) ಮೃತ ಬಾಲಕ.

ನವೆಂಬರ್ 01 ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ SLV ಶಾಲೆಯಲ್ಲಿ ಭಗತ್ ಸಿಂಗ್ ಪಾತ್ರ ನಿರ್ವಹಣೆಗೆ ಶಾಲಾ ಸಿಬ್ಬಂದಿ ಸೂಚಿಸಿದ್ದರು. ಶಾಲೆಯಲ್ಲಿ ಪ್ರಾಕ್ಟೀಸ್ ಸಹ ಮಾಡಿಸಿದ್ದರು. ಆದ್ರೆ, ತಂದೆ ತಾಯಿ ಟೀಸ್ಟಾಲ್ ಗೆ ಹೋಗಿದ್ದ ವೇಳೆ ನಿನ್ನೆ (ಅಕ್ಟೋಬರ್ 30) ಸಂಜೆ ವೇಳೆ ಸಂಜಯ್ ಗೌಡ ಮತ್ತೆ ಮನೆಯಲ್ಲಿ ಪ್ರಾಕ್ಟೀಸ್ ಗೆ ಮುಂದಾಗಿದ್ದಾನೆ. ಮನೆಯಲ್ಲಿದ್ದ ಫ್ಯಾನ್ ಹಾಕುವ ಕಬ್ಬಿಣದ ಸಲಾಕೆಗೆ ನೂಲಿನ ಹಗ್ಗ ಹಾಕಿ ಗಲ್ಲಿನ ಮಾದರಿ ಬಿಗಿದಿದ್ದಾನೆ. ಬಳಿಕ ಮಂಚದ ಮೇಲೆ ನಿಂತು ಭಗತ್ ಸಿಂಗ್ ಡೈಲಾಗ್ ಹೇಳುತ್ತ ನೇಣಿಗೆ ಕೊರಳೊಡ್ಡಿದ್ದಾನೆ. ಆದ್ರೆ, ಭಗತ್ ಸಿಂಗ್ ಮೈದುಂಬಿಕೊಂಡಿದ್ದ ಬಾಲಕ ನೇಣಿಗೆ ಕೊರಳೊಡ್ಡಿ ಮಂಚದ ಮೇಲಿಂದ ಮುಂದಕ್ಕೆ ಜಿಗಿದಿದ್ದಾನೆ. ಆಗ ನೇಣು ಬಿಗಿದು ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಪೋಷಕರು ಮನೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬೆಳಗಾವಿಯಲ್ಲಿ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ 6 ವರ್ಷದ ಬಾಲಕ ಸಾವು

ಇನ್ನು ಬಾಲಕನನ್ನು ನೇಣು ಬಿಗಿದ ಸ್ಥಿತಿಯಲ್ಲಿ ಕಂಡಾಕ್ಷಣ ಉಳಿಸಿಕೊಳ್ಳಬಹುದೆಂದು ಭಾವಿಸಿ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಆದ್ರೆ, ಜಿಲ್ಲಾಸ್ಪತ್ರೆಯ ವೈದ್ಯರು ಸಂಜಯ್ ಗೌಡ ಸಾವನ್ನಪ್ಪಿರುವುದಾಗಿ ಖಚಿತಪಡಿಸಿದ್ದಾರೆ.

ನಾಗರಾಜ್ ಮತ್ತು ಭಾಗ್ಯಲಕ್ಷ್ಮೀ ದಂಪತಿ ಡಿಸಿ ಕಚೇರಿ ಬಳಿ ಟೀಸ್ಟಾಲ್ ನಡೆಸಿಕೊಂಡು ಬದುಕು ಕಟ್ಟಿಕೊಂಡಿದ್ದರು. ಮಕ್ಕಳಿಗೆ ಉತ್ತಮ ವಿದ್ಯಭ್ಯಾಸ ಕೊಡಿಸುವ ಕನಸು ಕಟ್ಟಿಕೊಂಡಿದ್ದರು. ಅಂತೆಯೇ ಮೊದಲ ಮಗಳು ಹೊಳಲ್ಕೆರೆಯ ರಾಮಗಿರಿ ಗ್ರಾಮದ ಬಳಿಯ ಮುರಾರ್ಜಿ ಶಾಲೆಯಲ್ಲಿ 10ನೇ ತರಗತಿ ವಿದ್ಯಭ್ಯಾಸ ಮಾಡುತ್ತಿದ್ದಾಳೆ. ಎರಡನೇ ಪುತ್ರ ಸಂಜಯ್ ಗೌಡ್ (12) ಚಿತ್ರದುರ್ಗ ನಗರದ ಎಸ್ ಎಲ್ ವಿ ಶಾಲೆಯಲ್ಲಿ 7ನೇ ತರಗತಿ ವಿದ್ಯಭ್ಯಾಸ ಮಾಡುತ್ತಿದ್ದನು. ಓದುವುದರಲ್ಲೂ ಚುರುಕಾಗಿದ್ದ ಸಂಜಯ್ ನಟನೆಯಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದನು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮೂಲಕ ಗಮನ ಸೆಳೆದಿದ್ದನು.

ಭಗತ್ ಸಿಂಗ್ ಪಾತ್ರದ ಪ್ರಾಕ್ಟೀಸ್ ಮಾಡಲು ಹೋಗಿದ್ದೇ ದುರಂತಕ್ಕೆ ಕಾರಣವಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Published On - 3:31 pm, Sun, 30 October 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ