AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15ಲಕ್ಷ ರೂ. ಬಗ್ಗೆ ಮೋದಿ ಹೇಳಿಕೆ ನೀಡಿದ್ದರೆ ಸಾಕ್ಷಿ ಕೊಡಿ ಕ್ಷಮೆ ಕೇಳುತ್ತೇನೆ ಎಂದ ಕೇಂದ್ರ ಸಚಿವ‌ ನಾರಾಯಣಸ್ವಾಮಿ

‘15ಲಕ್ಷ ರೂ. ಬಗ್ಗೆ ಮೋದಿ ಹೇಳಿಕೆ ನೀಡಿದ್ದರೆ ಸಾಕ್ಷಿ ಕೊಡಿ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ‌ ನಾರಾಯಣಸ್ವಾಮಿ (A Narayanaswamy) ಹೇಳಿದರು. ನಗರದಲ್ಲಿ ಮಾದ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ಜನರನ್ನು ಬಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ನಡೆದಿದೆ ಎಂದು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತು ಟೀಕಿಸಿದ್ದಾರೆ.

15ಲಕ್ಷ ರೂ. ಬಗ್ಗೆ ಮೋದಿ ಹೇಳಿಕೆ ನೀಡಿದ್ದರೆ ಸಾಕ್ಷಿ ಕೊಡಿ ಕ್ಷಮೆ ಕೇಳುತ್ತೇನೆ ಎಂದ ಕೇಂದ್ರ ಸಚಿವ‌ ನಾರಾಯಣಸ್ವಾಮಿ
ಎ.ನಾರಾಯಣಸ್ವಾಮಿ
ಕಿರಣ್ ಹನುಮಂತ್​ ಮಾದಾರ್
|

Updated on: Jun 02, 2023 | 1:53 PM

Share

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್(Congress)​ ಗ್ಯಾರಂಟಿ ಕುರಿತು ಪರ ವಿರೋಧಿ ಚರ್ಚೆಯಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ 15 ಲಕ್ಷ ರೂ. ಹಾಗೂ ಗ್ಯಾರಂಟಿ ವಿಚಾರವಾಗಿ ವಾಕ್​ಸಮರ ಶುರುವಾಗಿದೆ. ಇದರ ಬೆನ್ನಲ್ಲೆ ಇದೀಗ ‘15ಲಕ್ಷ ರೂ. ಬಗ್ಗೆ ಮೋದಿ ಹೇಳಿಕೆ ನೀಡಿದ್ದರೆ ಸಾಕ್ಷಿ ಕೊಡಿ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ‌ ನಾರಾಯಣಸ್ವಾಮಿ (A Narayanaswamy) ಹೇಳಿದರು. ನಗರದಲ್ಲಿ ಮಾದ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ‘ಜನರನ್ನು ಬಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ನಡೆದಿದೆ ಎಂದು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತು ಟೀಕಿಸಿದ್ದಾರೆ. ‘ಜನರನ್ನು ಬಿಕ್ಷಾಟನೆ ಸರದಿಗೆ ನಿಲ್ಲಿಸಿ ಕಾಂಗ್ರೆಸ್ ಅಧಿಕಾರ ಪಡೆಯುವ ಷಡ್ಯಂತ್ರ ಮಾಡಿತ್ತು. ಸ್ವತಂತ್ರ್ಯ ಹೋರಾಟಗಾರರ ಕನಸು ನುಚ್ಚುನೂರು ಮಾಡಿ, ಕಾಂಗ್ರೆಸ್ ಸಿದ್ಧಾಂತ ಗಾಳಿಗೆ ತೂರಿ ಮತದಾರರಿಗೆ ಆಮಿಷವೊಡ್ಡಿ ಅಧಿಕಾರ ಚುಕ್ಕಾಣಿ ಹಿಡಿದುಕೊಂಡಿದ್ದಾರೆ. ಕಾಂಗ್ರೆಸ್ ಪ್ರಜಾಪ್ರಭುತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡಿದೆ. ಸಿದ್ಧಾಂತದಿಂದ ಗೆದ್ದಿದ್ದೀವಿ ಎಂದು ಹೇಳುವ ಎದೆಗಾರಿಕೆ ಕಾಂಗ್ರೆಸ್ ನಾಯಕರಿಗಿಲ್ಲ ಎಂದಿದ್ದಾರೆ.

ಗ್ಯಾರಂಟಿ ಕಾರ್ಡ್ ಮೂಲಕ ಕಾಂಗ್ರೆಸ್ ಗೆಲುವು ಸಾಧಿಸಿದೆ

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಗ್ಯಾರಂಟಿ ಕಾರ್ಡ್ ಮೂಲಕ ಗೆಲುವು ಸಾಧಿಸಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಕಳೆದ 15ದಿನಗಳಿಂದ ಗ್ಯಾರಂಟಿ ಕಾರ್ಡ್​ಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು. ಇದೇ ವೇಳೆ ಬಿಜೆಪಿಯಿಂದ ಪ್ರತಿ ವ್ಯಕ್ತಿಯ ಅಕೌಂಟಿಗೆ 15ಲಕ್ಷ ನೀಡುವ ಭರವಸೆ ವಿಚಾರ ‘ಸಿದ್ಧರಾಮಯ್ಯ, ಡಿಕೆಶಿ’ಗ್ಯಾರಂಟಿ ಹೇಳಿಕೆಗಳು ಎಲ್ಲರ ಬಳಿ ಇವೆ. 15ಲಕ್ಷದ ಬಗ್ಗೆ ಮೋದಿ ಹೇಳಿಕೆ ನೀಡಿದ್ದರೆ ನನಗೆ ಕೊಡಿ, ಕ್ಷಮೆ ಕೇಳುತ್ತೇನೆ. ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆಂದು ಸವಾಲು ಹಾಕಿದ್ದಾರೆ. ಗ್ಯಾರಂಟಿ ಕಾರ್ಡ್​ ವಿಚಾರ ಐದು ವರ್ಷದಲ್ಲಿ ಎಂಬ ಚಿಂತನೆ ನಡೆಯುತ್ತಿದೆ. ರಾಜ್ಯದ ಸಚಿವರಿಗೆ ಪ್ರಕೃತಿ ವಿಕೋಪದ ಬಗ್ಗೆ ಗಮನಹರಿಸಲು ಸಮಯವಿಲ್ಲ ಎಂದು ಟೀಕಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ