AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ರಿಮೋಟ್​ಗಾಗಿ ಅಣ್ಣ-ತಮ್ಮ ಜಗಳ: ಸಿಟ್ಟಿಗೆದ್ದು ಕತ್ತರಿ‌ ಎಸೆದೆ ತಂದೆ, ಹಿರಿಮಗ ಸಾವು

ಟಿವಿ ರಿಮೋಟ್​​ ವಿಚಾರಕ್ಕೆ ಇಬ್ಬರು ಮಕ್ಕಳ ನಡುವೆ ಗಲಾಟೆ ನಡೆದಿದ್ದು, ಇದರಿಂದ ಕೋಪಗೊಂಡ ತಂದೆ ಎಸೆದಿದ್ದ ಕತ್ತರಿ ಹಿರಿಮಗನನ್ನು ಬಲಿಪಡೆದುಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಟಿವಿ ರಿಮೋಟ್​ಗಾಗಿ ಅಣ್ಣ-ತಮ್ಮ ಜಗಳ: ಸಿಟ್ಟಿಗೆದ್ದು ಕತ್ತರಿ‌ ಎಸೆದೆ ತಂದೆ, ಹಿರಿಮಗ ಸಾವು
ವಿದ್ಯಾರ್ಥಿ ಸಾವು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Oct 15, 2023 | 1:59 PM

Share

ಚಿತ್ರದುರ್ಗ, (ಅಕ್ಟೋಬರ್ 15): ‘ಸಿಟ್ಟಿನ ಕೈಗೆ ಬುದ್ಧಿ ಕೊಡಬಾರದು’ ಮಾತೇ ಇದೆ. ಒಂದು ವೇಳೆ ಸಿಟ್ಟಿನ ಕೈಗೆ ಬಿದ್ಧಿ ಕೊಟ್ಟರೆ ಏನೆಲ್ಲಾ ಅನಾಹುತ ಆಗಬಹುದು ಎನ್ನುವುದಕ್ಕೆ ಈ ಸುದ್ದಿ ಉದಾಹರಣೆ. ಹೌದು….ಟಿವಿ ರಿಮೋಟ್​ಗಾಗಿ ಅಣ್ಣ-ತಮ್ಮನ ನಡುವೆ ಜಗಳ ನಡೆದಿದ್ದು, ಈ ವೇಳೆ ಸಿಟ್ಟಿಗೆದ್ದ ತಂದೆ ಕೈಗೆ ಸಿಕ್ಕ ಕತ್ತರಿಯನ್ನು ಜೋರಾಗಿ ಎಸೆದಿದ್ದು, ಅದು ಹೋಗಿ ಹಿರಿಮಗ ಚಂದ್ರಶೇಖರ್ ಕುತ್ತಿಗೆಗೆ ಬಿದ್ದು ಮೃತಪಟ್ಟಿದ್ದಾನೆ. ಈ ದುರ್ಘಟನೆ ಚಿತ್ರದುರ್ಗ (Chitradruga) ಜಿಲ್ಲೆಯ ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದ್ರಶೇಖರ್ (16) ಅಪ್ಪನ ಕೋಪಕ್ಕೆ ಬಲಿಯಾದ ಯುವಕ.

ಚಂದ್ರಶೇಖರ್(16), ಸಹೋದರ ಪವನ್ (14) ಟಿವಿ ರಿಮೋಟ್ ಗಾಗಿ ಗಲಾಟೆ ಮಾಡಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ತಂದೆ ಲಕ್ಷ್ಮಣಬಾಬು, ಕೈಗೆ ಸಿಕ್ಕ ಕತ್ತರಿ ಎಸೆದಿದ್ದಾನೆ. ಅದು ನೇರವಾಗಿ ಹೋಗಿ ಹಿರಿಮಗ ಚಂದ್ರಶೇಖರ್​ನ ಕುತ್ತಿಗೆಗೆ ತಾಗಿದೆ. ದುರದೃಷ್ಟವಶಾತ್ ತೀವ್ರ ರಕ್ತ ಸ್ರಾವವಾಗಿ ಚಂದ್ರಶೇಖರ್ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ರಾಯಚೂರು: ಯರಮರಸ್ ಬಳಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಪಾಳು ಬಿದ್ದ ಮನೆಯಲ್ಲಿ ನವಜಾತ ಶಿಶು ಪತ್ತೆ

ಬೆಂಗಳೂರು: ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದ ಪಾಳು ಬಿದ್ದ ಮನೆಯಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಮಂಜುನಾಥ್ ಎಂಬುವವರಿಗೆ ಸೇರಿದ ಪಾಳುಬಿದ್ದ ಮನೆಯಲ್ಲಿ ಒಂದೆರೆಡು ದಿನದ ಹಿಂದೆ ಹುಟ್ಟಿರುವ ನವಜಾತ ಶಿಶು ಪತ್ತೆಯಾಗಿದೆ. ಇಂದು(ಭಾನುವಾರ) ಬೆಳಗ್ಗೆ ಮನೆ ಬಳಿ ನಾಯಿಗಳು ಕಚ್ಚುತ್ತಿದ್ದ ವೇಳೆ ಮಗು ಕಿರುಚಾಡಿದ್ದರಿಂದ ಸ್ಥಳೀಯರು ಹೋಗಿ ನೋಡಿದ್ದಾರೆ. ಸ್ಥಳಕ್ಕೆ ಮಕ್ಕಳ ಸಂರಕ್ಷಣಾಧಿಕಾರಿಗಳು ಹಾಗೂ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು. ಇನ್ನು ಮಗು ಇಲ್ಲಿಗೆ ಯಾರು ತಂದು ಹಾಕಿದ್ರು? ಯಾರದ್ದು ಇದು ಮಗ? ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರೈಲಿಗೆ ಸಿಲುಕಿ ಅಪರಿಚಿತ ಯುವಕ ಸಾವು

ರೈಲಿಗೆ ಸಿಲುಕಿ ಅಪರಿಚಿತ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಬಳಿಯ ರೈಲು ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ರೈಲ್ವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ, ಮೃತ ದೇಹವನ್ನು ಮಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Sun, 15 October 23

Follow Us
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್
ವಿಧಾನ ಪರಿಷತ್​​ ಸಭಾ ನಾಯಕರಾಗಿ ಯತೀಂದ್ರ ಹೆಸರು ಅಧಿಕೃತ ಘೋಷಣೆ
ವಿಧಾನ ಪರಿಷತ್​​ ಸಭಾ ನಾಯಕರಾಗಿ ಯತೀಂದ್ರ ಹೆಸರು ಅಧಿಕೃತ ಘೋಷಣೆ