AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: 18 ಸಾವಿರ ಬಿಪಿಎಲ್ ಕಾರ್ಡ್ ರದ್ದು; ಸರ್ಕಾರದ ವಿರುದ್ಧ ನೊಂದ ರೈತರ ಆಕ್ರೋಶ

ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಬಡಜನರ ಹೊಟ್ಟೆ ಮೇಲೆ ಹೊಡೆದ ಸರ್ಕಾರದ ವಿರುದ್ಧ ಸಾವಿರಾರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಸೌಲಭ್ಯ ಕಸಿದುಕೊಂಡಿದ್ದರ ಬಗ್ಗೆ ಕಿಡಿಕಾರಿದ್ದಾರೆ. ಅಲ್ಲದೇ ನವೆಂಬರ್ ಮೊದಲ ವಾರದೊಳಗೆ ಯಥಾಸ್ಥಿತಿ ಮುಂದುವರೆಸದಿದ್ದರೆ ಹೋರಾಟಕ್ಕೆ ಅಣಿಯಾಗುವ ಎಚ್ಚರಿಕೆ ನೀಡಿದ್ದಾರೆ.

ಚಿತ್ರದುರ್ಗ: 18 ಸಾವಿರ ಬಿಪಿಎಲ್ ಕಾರ್ಡ್ ರದ್ದು; ಸರ್ಕಾರದ ವಿರುದ್ಧ ನೊಂದ ರೈತರ ಆಕ್ರೋಶ
ಬಿಪಿಎಲ್ ಕಾರ್ಡ್
TV9 Web
| Edited By: |

Updated on: Oct 25, 2021 | 8:48 AM

Share

ಚಿತ್ರದುರ್ಗ: ಕೊರೊನಾ ಸಂಕಷ್ಟ ಕಾಲದಲ್ಲಿ ಎದುರಾದ ಆರ್ಥಿಕ ನಷ್ಟದಿಂದಲೇ ಜನರು ಇನ್ನು ಹೊರ ಬಂದಿಲ್ಲ. ಅದರಲ್ಲೂ ರೈತರು ಬೆಳೆದ ಬೆಳೆ ಮಾರಾಟ ಮಾಡಲಾಗದೆ, ಮಳೆಗೆ ಕೊಚ್ಚಿ ಹೋದ ಫಸಲನ್ನು ಉಳಿಸಿಕೊಳ್ಳಲಾರದೆ ಕಂಗಾಲಾಗಿದ್ದಾರೆ. ಆದರೆ ಸರ್ಕಾರ ಮಾತ್ರ ರೈತರ ಬೆಂಬಲಕ್ಕೆ ನಿಲ್ಲದೆ ಮತ್ತಷ್ಟು ಕಷ್ಟಕ್ಕೆ ನೂಕುತ್ತಿದೆ. ಇದಕ್ಕೆ ಕಾರಣ ಸರ್ಕಾರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಕೆಲಸ ಮಾಡುತ್ತಿದೆ. ಇದು ಸಹಜವಾಗಿಯೇ ರೈತರ ಆಕ್ರೋಶಕ್ಕೆ ಕಾರಣ ಆಗಿದೆ.

ಚಿತ್ರದುರ್ಗ ಜಿಲ್ಲೆಯೊಂದರಲ್ಲೇ ಸುಮಾರು 18000 ಕಾರ್ಡ್ ರದ್ದುಗೊಳಿಸಲಾಗಿದ್ದು, ಸುಮಾರು 15000 ರೈತರ ಕಾರ್ಡ್​ಗಳು ರದ್ದಾಗಿವೆ. ಸರ್ಕಾರದ ಮಾನದಂಡಗಳು ಸರಿಯಾದ ಕ್ರಮದಲ್ಲಿಲ್ಲ. ಹೀಗಾಗಿ, ಅನೇಕ ಬಡ ರೈತರು ಬಿಪಿಎಲ್ ಕಾರ್ಡ್ ಸೌಲಭ್ಯ ಕಳೆದುಕೊಂಡು ಕಂಗಾಲಾಗುವಂತಾಗಿದೆ. ಹೀಗಾಗಿ, ನವೆಂಬರ್ ಮೊದಲ ವಾರದೊಳಗೆ ಯಥಾಸ್ಥಿತಿ ಮುಂದುವರೆಸಬೇಕು. ಇಲ್ಲವಾದಲ್ಲಿ ರೈತ ಸಂಘ ಹೋರಾಟಕ್ಕಿಳಿಯಲಿದೆ ಎಂದು ರೈತ ಮುಖಂಡರಾದ ಈಚಘಟ್ಟ ಸಿದ್ಧವೀರಪ್ಪ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ರೈತಾಪಿ ವರ್ಗ ಸೇರಿದಂತೆ ಅನೇಕ ಬಡ ಜನರು ಸರ್ಕಾರದ ಈ ಧೋರಣೆಯಿಂದ ಕಂಗಾಲಾಗಿದ್ದಾರೆ. ಉಳ್ಳವರು ಬಿಪಿಎಲ್ ಕಾರ್ಡ್ ಪಡೆದು ವಂಚಿಸುತ್ತಿದ್ದಾರೆ. ಅಂತವರಿಗೆ ಸರ್ಕಾರಿ ಸೌಲಭ್ಯ ಸ್ಥಗಿತಗೊಳಿಸಲಿ. ಆದರೆ, ಕೆಲ ಮಾನದಂಡಗಳ ಪ್ರಕಾರ ಬಡ ಜನರಿಗೂ ಬಿಪಿಎಲ್ ಕಾರ್ಡ್ ರದ್ದಾಗಿ ತೊಂದರೆ ಎದುರಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಈ ಬಗ್ಗೆ ಚಿತ್ರದುರ್ಗದ ಹಿರಿಯ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ನನ್ನ ಬಳಿಯೂ ಕೆಲ ಜನರು ಇದೇ ದೂರು ನೀಡಿದ್ದಾರೆ. ಈ ಬಗ್ಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಸೂಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯೊಂದರಲ್ಲೇ ಸುಮಾರು 18000 ಕಾರ್ಡ್​ಗಳು ರದ್ದಾಗಿವೆ. ಆದರೆ ಆಧಾರ್ ಕಾರ್ಡ್ ಆಧರಿಸಿ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ವೇಳೆ ಕೆಲ ತಪ್ಪುಗಳು ಆಗಿದ್ದು, ಬಡ ಜನರಿಗೆ ತೊಂದರೆ ಆಗಿದೆ. ಹೀಗಾಗಿ, ಈ ಬಗ್ಗೆ ಮರುಪರಿಶೀಲಿಸಿ ಬಡಜನರು ಮತ್ತು ರೈತರಿಗೆ ಬಿಪಿಎಲ್ ಕಾರ್ಡ್ ಯಥಾಸ್ಥಿತಿ ಮುಂದುವರೆಸಬೇಕೆಂಬ ಆಗ್ರಹ ಕೇಳಿ ಬಂದಿದೆ. ಜಿಲ್ಲಾಡಳಿತ ಮತ್ತು ಸರ್ಕಾರ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುವುದನ್ನು ಕಾದು ನೋಡಬೇಕಿದೆ.

ವರದಿ: ಬಸವರಾಜ ಮುದನೂರ್

ಇದನ್ನೂ ಓದಿ: Big News: ಬೈಕ್, ಟಿವಿ, ಫ್ರಿಡ್ಜ್ ಇದ್ದವರ BPL ಕಾರ್ಡ್​ ರದ್ದು ಮಾಡಲ್ಲ: ಸ್ಪಷ್ಟನೆ ನೀಡಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತೆ

BPL Card Guidelines | ಬಿಪಿಎಲ್​ ಕಾರ್ಡ್​ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ: ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ