Chitradurga News: ದೇವಸಮುದ್ರದಲ್ಲಿ ಪೊಲೀಸರ ದಾಳಿ, ಮನೆಯಲ್ಲಿ 81 ನಾಡಬಾಂಬ್ ಪತ್ತೆ
ಆಂಧ್ರದಿಂದ ನಾಡಬಾಂಬ್ ಸಾಗಣೆ ಜಾಲವನ್ನು ಚಿತ್ರದುರ್ಗ ಪೊಲೀರು ಬೇಧಿಸಿದ್ದು, ಒಂದು ಮನೆಯಲ್ಲಿ ಬರೋಬ್ಬರಿ 81 ನಾಡಬಾಂಬ್ ಪತ್ತೆಯಾಗಿವೆ.

Updated on: Jul 19, 2023 | 7:16 AM
ಚಿತ್ರದುರ್ಗ, (ಜುಲೈ 19): ಹಂದಿ ಬೇಟೆಗೆ ಆಂಧ್ರದಿಂದ ನಾಡಬಾಂಬ್ ಸಾಗಣೆ ಜಾಲವನ್ನು ಪೊಲೀರು ಬೇಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ದೇವಸಮುದ್ರ ಗ್ರಾಮದ ಮನೆಯೊಂದರ ಮೇಲೆ ಪೊಲೀಸರು ದಾಳಿ ಮಾಡಿದ್ದು, 81 ನಾಡಬಾಂಬ್ ವಶಡಿಸಿಕೊಂಡಿದ್ದಾರೆ. ದೇವಸಮುದ್ರದ ಸುಮನ್ ಎಂಬುವರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಕಾಡುಪ್ರಾಣಿ ಬೇಟೆಗೆ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ ಪತ್ತೆಯಾಗಿವೆ. ನಾಡಬಾಂಬ್ ಸಂಗ್ರಹಿಸಿಟ್ಟಿದ್ದ ಆರೋಪಿ ಸುಮನ್, ಆಂಧ್ರ ಮೂಲದ ಗಂಗಣ್ಣ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಸಿಕ್ಕಿರುವ ನಾಡಬಾಂಬ್ಗಳ್ನು ಬಾಂಬ್ ಸ್ಕ್ವಾಡ್ ದಳವು ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ನಿಷ್ಕ್ರಿಯಗೊಳಿಸಿದೆ. ಮೊಳಕಾಲ್ಮೂರು ಸಿಪಿಐ ಸತೀಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಉದ್ಯಮಿ ಮನೆಗೆ ನುಗ್ಗಿ ಕಳ್ಳತನ ಪ್ರಕರಣ; ಮೂವರು ಆರೋಪಿಗಳನ್ನ ಬಂಧಿಸಿದ ಪೊಲೀಸರು

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು, ಕಾಡು-ಮೇಡು ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.
Read More